ನಡವಳಿಕೆ ಬದಲಾಯಿಸಿಕೊಳ್ಳುತ್ತೇನೆ: ಹುಚ್ಚ ವೆಂಕಟ್
Team Udayavani, Jan 11, 2022, 9:15 PM IST
ಬೆಂಗಳೂರು: ನನ್ನ ನಡುವಳಿಕೆಗಳನ್ನು ಬದಲಾಯಿಸಿಕೊಂಡು ಸಮಾಜದ ಜತೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕೆಂಬ ಆಸೆ ಇದೆ. ಮುಂಬರುವ ದಿನಗಳಲ್ಲಿ ಹುಚ್ಚ ವೆಂಕಟ್ ಬ್ಯಾನರ್ ಅಡಿ ಉತ್ತಮ ಚಿತ್ರಗಳನ್ನು ನಿರ್ದೇಶನ ಮಾಡಬೇಕೆಂಬ ಗುರಿ ಇದೆ ಎಂದು ನಟ ನಿರ್ದೇಶಕ ನಿರ್ಮಾಪಕ ಹುಚ್ಚವೆಂಕಟ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಗೆದ್ದಾಗ ಸಂತೋಷಪಟ್ಟು, ಬಿದ್ದಾಗ ಕೈಯೆತ್ತಿ ನಿಲ್ಲಿಸಿದ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೆ ಧನ್ಯವಾದ ತಿಳಿಸಲು ಮಾಧ್ಯಮದ ಮುಂದೆ ಬಂದಿದ್ದೇನೆ. ಹಿಂದೆ ಆದ ಕೆಲವು ಲೋಪಗಳನ್ನು ಸರಿಪಡಿಸಿ ಮುಂಬರುವ ದಿನಗಳಲ್ಲಿ ಹೊಸ ಆಲೋಚನೆಗಳೊಂದಿಗೆ ಮುನ್ನಡೆಯಲು ನಿರ್ಧರಿಸಿದ್ದೇನೆ.
ಇದನ್ನೂ ಓದಿ:ದಾವಣಗೆರೆ : ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 46 ಮಂದಿಯಲ್ಲಿ ಸೋಂಕು ದೃಢ
ಸೌಮ್ಯ ಸ್ವಭಾವವನ್ನು ಅಳವಡಿಸಿಕೊಳ್ಳಲು ಪ್ರಯತ್ನ ಪಡುವೆ. ಈ ಕಾರಣದಿಂದಾಗಿ ಸುಮಾರು ಚಿತ್ರಗಳಲ್ಲಿ ಗೆಸ್ಟ್ ಅಪಿಯರೆನ್ಸ್ ಪಾತ್ರಗಳು ಸಿಗುತ್ತಿದ್ದು ನನ್ನ ಜೀವನದಲ್ಲಿ ಉತ್ತಮ ಬೆಳವಣಿಗೆಗಳು ಆಗುತ್ತಿವೆ. ಇತ್ತೀಚಿಗೆ ಅಂತಿಮ ಸತ್ಯ ಚಿತ್ರಕ್ಕೆ ಸಹಿ ಹಾಕಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?