ಚನ್ನಗಿರಿ: ಕಾಡಾನೆ ದಾಳಿಗೆ ಯುವತಿ ಬಲಿ
Team Udayavani, Apr 8, 2023, 12:02 PM IST
ಚನ್ನಗಿರಿ: ತಾಲೂಕಿನ ಸಂತೇಬೆನ್ನೂರು ಹೋಬಳಿ ಸಮೀಪದ ಸೋಮಲಾಪುರ ಗ್ರಾಮದ ಜಮೀನಿನಲ್ಲಿ ಅವರೆಕಾಯಿ ಬಿಡಿಸುತ್ತಿದ್ದ ಯುವತಿ ಮೇಲೆ ದಾಳಿ ನಡೆಸಿದ್ದು, ಯುವತಿ ಸಾವನ್ನಪ್ಪಿದ ಘಟನೆ ಎ.8ರ ಶನಿವಾರ ಬೆಳಿಗ್ಗೆ ನಡೆದಿದೆ.
ಸೋಮಲಾಪುರದ ವಾಸಿ ಉಮೇಶ್ ಹಾಗೂ ಮಂಜುಳ ಅವರ ಪುತ್ರಿ ಕವನ (18) ಮೃತಪಟ್ಟಿ ಯುವತಿ.
ತಾಯಿ ಹಾಗೂ ಮಗಳು ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಎರಡು ಆನೆಗಳು ಹಾಗೂ ಒಂದು ಮರಿ ಹೊಲಕ್ಕೆ ನುಗ್ಗಿವೆ. 1 ಆನೆ ಬಾಲಕಿ ಮೇಲೆ ದಾಳಿ ನಡೆಸಿದೆ.
ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತಾಯಿ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಬಾಲಕಿಗೆ 15 ಲಕ್ಷ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಇದೇ ತಾಲೂಕಿನ ಕಾಶೀಪುರ ಗ್ರಾಮದ ದಾರಿಯಲ್ಲೂ ಕಾಡಾನೆಯೊಂದು ದಾಳಿ ನಡೆಸಿದ್ದು ಬಾಬಾನಾಯ್ಕ (55), ಭಾವಲ್ಯನಾಯ್ಕ (55), ಶಾಂತಿಬಾಯಿ (40) ಲಕ್ಷ್ಮೀಬಾಯಿ (40) ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆನೆಗಳ ದಾಳಿಯಿಂದ ಸೂಳೆಕೆರೆ ಸುತ್ತಮುತ್ತಲ ಹತ್ತಾರು ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ಯಾರೂ ಕೂಡ ಒಂಟಿಯಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆಯಿಂದ ಜನರಿಗೆ ಸೂಚನೆ ನೀಡಲಾಗಿದೆ.
ಹೊಸದುರ್ಗ ಕಡೆಯಿಂದ ಜೋಳದಾಳ ಕಾಡಂಚಿನಿಂದ ಬಂದಿದ್ದು, ಕಾಡಾನೆ ಸೋಮಲಾಪುರ ಗ್ರಾಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ನುಗ್ಗಿ ದಾಂಧಲೆ ನಡೆಸುತ್ತಿದ್ದು, ಹೊಲಗದ್ದೆಗಳಲ್ಲಿ ಕೆಲಸ ಕಾರ್ಯ ದಲ್ಲಿ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ