ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸುವ ಪರಿಸರ ಸಂರಕ್ಷಣೆಯ ದಿನ ಎಳ್ಳ ಅಮವಾಸ್ಯೆ
Team Udayavani, Jan 11, 2024, 7:23 PM IST
ಗಂಗಾವತಿ: ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸುವ ಪವಿತ್ರವಾದ ದಿನವಾಗಿದೆ. ಭೂಮಿ ಸೇರಿ ಪರಿಸರ ಮಾಲಿನ್ಯ ಮಾಡದಂತೆ ಜೀವಿಸಂಕುಲಕ್ಕೆ ಪರಿಸರವನ್ನು ಸ್ವಚ್ಛವಾಗಿಡುವ ಸಂದೇಶ ಚರಗಚೆಲ್ಲುವ ಪದ್ಧತಿಯಾಗಿದೆ ಎಂದು ಹಾಲುಮತ ಮಹಿಳಾ ಮಂಡಲದ ಮುಖಂಡರಾದ ಕೆ.ವರಲಕ್ಷ್ಮಿ ಹೇಳಿದರು.
ಅವರು ತಾಲೂಕಿನ ಕುಂಟೋಜಿ ಗ್ರಾಮದ ರೈತರ ಹೊಲದಲ್ಲಿ ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಪೂಜೆ ಚರಗ ಚೆಲ್ಲುವ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು.
ಉತ್ತಮ ಇಳುವರಿ ಕೊಟ್ಟ ಭೂಮಿ ತಾಯಿಗೆ ಧನ್ಯವಾದ ಹೇಳುವ ದಿನವಾಗಿ ಎಳ್ಳಮಾವಾಸ್ಯೆಯನ್ನು ಆಚರಿಸುತ್ತಾರೆ. ಇಂದು ರೈತರು ತಮ್ಮ ಜಮೀನಿನಲ್ಲಿ ಎಲ್ಲೆಡೆ ಎಳ್ಳು ಹಾಗೂ ಬೆಲ್ಲವನ್ನು ಚಿಮ್ಮುತ್ತಾರೆ. ಈ ಎಳ್ಳು ಹಾಗೂ ಬೆಲ್ಲವು ಜಮೀನಿನಲ್ಲಿರುವ ಹುಳಗಳಿಗೆ ಆಹಾರ ಎಂದೂ ಹೇಳಲಾಗುತ್ತದೆ. ಎರೆಹುಳದಂತವು ಭೂತಾಯಿಯ ಫಲವತ್ತತೆಯನ್ನು ಕಾಪಾಡುತ್ತವೆ. ಅವುಗಳಿಗೆ ಆಹಾರದಂತೆ ಕೂಡಾ ಇದನ್ನು ಚಿಮ್ಮಲಾಗುತ್ತದೆ. ಕೆಲವು ಗದ್ದೆಗಳಲ್ಲಿ ಪಾಂಡವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಾರೆ.
ಮತ್ತೆ ಕೆಲವೆಡೆ ಹೊಲದಲ್ಲಿ ನಿಂತಿರುವ ಪೈರುಗಳ ಮಧ್ಯೆ ಬನ್ನಿ ಮರಕ್ಕೆ ಪೂಜೆ ಮಾಡಿ ಭೂಮಿ ತಾಯಿಗೆ ಚೆರಗ ಚೆಲ್ಲಾಗುತ್ತದೆ. ನಂತರ ಬೇಳೆಕಾಳುಗಳು ಹಾಗೂ ಹಸಿರು ಸೊಪ್ಪುಗಳನ್ನು ಬಳಸಿ ಸಸ್ಯಾಹಾರದ ಅಡುಗೆ ತಯಾರಿಸಲಾಗುತ್ತದೆ. ಭಜ್ಜಿ, ಪುಂಡಿ, ಚಿಕ್ಕಿ, ಬರ್ತಾ, ಜೋವರ್ ಕಡುಬು, ಸಜ್ಜೆ ಕಡುಬು, ಪಾಲಕ್ ಮೆಂತ್ಯೆ ಬಳಸಿದ ತಿಂಡಿಗಳು, ನಾನಾ ಬಗೆಯ ಚಟ್ನಿಗಳು ಎಳ್ಳಮಾವಾಸ್ಯೆಗೆ ವಿಶೇಷವಾಗಿ ತಯಾರಾಗುತ್ತವೆ. ನಂತರ ಎಲ್ಲ ರೈತಾಪಿ ವರ್ಗದವರು ಕುಟುಂಬ ಸಮೇತರಾಗಿ ಬಂಡಿಗಳಲ್ಲಿ ಸಂಭ್ರಮದಿಂದ ಹೊಲ ಗದ್ದೆ ತೋಟಗಳಿಗೆ ಹೋಗಿ ಒಟ್ಟಾಗಿ ಊಟ ಸವಿಯುತ್ತಾರೆಂದರು.
ಈ ಸಂದರ್ಭದಲ್ಲಿ ಕೃಷಿಕರಾದ ಕೆ.ಲಕ್ಷ್ಮಿಗೌಡರ್, ಅಶೋಕಗೌಡ, ನೀಲಕಂಠಪ್ಪ, ಪರಶುರಾಮ ಇಟಗಿ ಸೇರಿ ಕುಂಟೋಜಿ ಗ್ರಾಮದ ರೈತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ