Belgaum: ಮಹಿಳೆ ವಿವಸ್ತ್ರ ಪ್ರಕರಣ ಬಗ್ಗೆ ತಿಂಗಳಾಂತ್ಯಕ್ಕೆ ಚಾರ್ಜ್ಶೀಟ್
ಹೈಕೋರ್ಟ್ಗೆ ಮಾಹಿತಿ ನೀಡಿದ ರಾಜ್ಯ ಸರಕಾರ
Team Udayavani, Jan 17, 2024, 11:41 PM IST
ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ನಡೆಸಿದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಜನವರಿ ತಿಂಗಳಾಂತ್ಯಕ್ಕೆ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ.
ಪ್ರಕರಣ ಸಂಬಂಧ ಸ್ವಯಂಪ್ರೇರಿತ ಸ್ವಹಿತಾ ಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸು ತ್ತಿರುವ ಮುಖ್ಯ ನ್ಯಾ| ಪ್ರಸನ್ನ ಬಾಲಚಂದ್ರ ವರಾಲೆ ಮತ್ತು ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ.
ವಿಚಾರಣೆ ವೇಳೆ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ ಪ್ರಕರಣದ ಕುರಿತ ಮೆಮೋ ಸಲ್ಲಿಸಿದರು.
ಮೆಮೋದಲ್ಲಿ ಪ್ರಕರಣದ ಸಾಕ್ಷಿಗಳು, ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳೆಲ್ಲರನ್ನು ಬಂಧಿಸಲಾಗಿದೆ. ಸದ್ಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿ ರುವ ಮಾದರಿಗಳ ವರದಿಗಾಗಿ ಕಾಯಲಾಗುತ್ತದೆ. ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಈ ತಿಂಗಳಾಂತ್ಯದ ವೇಳೆಗೆ ಅಂತಿಮ ವರದಿ ಸಲ್ಲಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಈ ಎಲ್ಲ ಅಂಶಗಳನ್ನು ದಾಖಲಿಸಿಕೊಂಡ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು 3 ವಾರಗಳಿಗೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ