Fraud: ಚೈತ್ರಾ ಮತ್ತು ತಂಡದ ವಿರುದ್ಧ ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಕೆ
Team Udayavani, Nov 2, 2023, 11:24 PM IST
ಬೆಂಗಳೂರು: ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್ಶೀಟ್ ಸಲ್ಲಿಸಲಿದ್ದಾರೆ.
ಪ್ರಕರಣದ ಸಂಬಂಧ 68 ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, 68 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳಿಂದ ನಗದು, ಕಾರುಗಳು, ಚಿನ್ನಾಭರಣ ಸಹಿತ 5 ಕೋಟಿ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿ ದ್ದರು. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್ ಸಹಿತ 7 ಮಂದಿಗಳ ವಿರುದ್ಧ ಮುಂದಿನ ವಾರ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ.
ದೂರುದಾರ ಗೋವಿಂದ ಬಾಬು ಪೂಜಾರಿ ಅವರಲ್ಲಿದ್ದ, ಆರೋಪಿಗಳಿಗೆ ಸಂಬಂಧಿಸಿದ ಎಲ್ಲ ಆಡಿಯೋ ಮತ್ತು ವೀಡಿಯೋಗಳನ್ನು ಪಡೆದುಕೊಳ್ಳಲಾಗಿದೆ. ಇವುಗಳ ಬಗ್ಗೆಯೂ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗುತ್ತದೆ. ಆರೋಪಿಗಳ ಮೊಬೈಲ್ಗಳ ಡೇಟಾ ರಿಟ್ರೈವ್ ವರದಿಯನ್ನೂ ಉಲ್ಲೇಖೀಸಲಾಗುವುದು.
ಕಳೆದ ಸೆ. 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಗೋವಿಂದ ಬಾಬು ಪೂಜಾರಿ ಕುಂದಾಪುರದ ಚೈತ್ರಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಸಿಸಿಬಿಗೆ ಪ್ರಕರಣ ವರ್ಗಾವಣೆ ಮಾಡಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಎಲ್ಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !