ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಹೆಚ್ಚುತ್ತಿದೆ ಅಪಘಾತ
Team Udayavani, Jun 14, 2020, 8:00 AM IST
ಬೆಳ್ತಂಗಡಿ: ಮಳೆಗಾಲ ಸಮೀಪಿಸುತ್ತಿರುವ ಮುನ್ನವೇ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.
ಶನಿವಾರ ಸ್ನೇಹಿತರು ಸೇರಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಚಿಕ್ಕಮಗಳೂರು ಮಾರ್ಗವಾಗಿ ಬೆಂಗಳೂರು ತೆರಳುವ ಕಾರು ಹಾಗೂ ತರಕಾರಿ ಸಾಗಾಟದ ಗೂಡ್ಸ್ ಮಿನಿ ಟೆಂಪೊ ಪರಸ್ಪರ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಟೆಂಪೊ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಇಬ್ಬರೂ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
22 ಸಣ್ಣಪುಟ್ಟ ಅಪಘಾತ
ಕಳೆದ ಎರಡು ವಾರಗಳ ಅವಧಿಯಲ್ಲಿ ಈ ರಸ್ತೆಯಲ್ಲಿ 22 ಸಣ್ಣಪುಟ್ಟ ಅಪಘಾತಗಳ ಸಹಿತ 6 ತೀವ್ರಸ್ವರೂಪದಲ್ಲಿ ವಾಹನಗಳು ಅಪಘಾತಕ್ಕೀಡಾಗಿವೆ.
ಚಾರ್ಮಾಡಿ ಘಾಟ್ ರಸ್ತೆಯ ಆರಂಭದಿಂದ 11 ತಿರುವುಗಳಿಗೆ ಇತ್ತೀಚೆಗೆ ಹೆದ್ದಾರಿ ಇಲಾಖೆಯಿಂದ ಮರು ಡಾಮರೀಕರಣ ಮಾಡಲಾಗಿತ್ತು. ಈ ಡಾಮರೀಕರಣ ಅತೀ ನುಣುಪಾಗಿದ್ದು, ಮಳೆಗೆ ತೇವಾಂಶವಿರುವ ರಸ್ತೆಯಲ್ಲಿ ವಾಹನಗಳು ಬ್ರೇಕ್ ಅಳವಡಿಸಿದರೂ ನಿಯಂತ್ರಣಕ್ಕೆ ಬಾರದೆ ಅಪಘಾತ ಸಂಭವಿಸುತ್ತಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.
ಇದಲ್ಲದೇ ಲಾಕ್ಡೌನ್ ಅವಧಿಯಲ್ಲಿ ವಾಹನಗಳ ಸಂಖ್ಯೆ ಇಳಿಮುಖವಾಗಿದ್ದರಿಂದ ಅಗತ್ಯ ಓಡಾಟ ನಡೆಸುವ ವಾಹನಗಳ ಅತೀವೇಗದ ಚಾಲನೆಯಿಂದ ಅಪಘಾತಗಳು ಹೆಚ್ಚುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ