ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ


Team Udayavani, Jan 17, 2021, 12:47 PM IST

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ

ಮೇಲುಕೋಟೆ: ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅಂಗಮಣಿ ಉತ್ಸವ ಮತ್ತು ಸಂಕ್ರಾಂತಿ ಮಹೋತ್ಸವ ವೈಭವದಿಂದ ನೆರವೇರಿತು. ಶ್ರೀದೇವಿ ಭೂದೇವಿಗೆ ತವರು ಮನೆಯಾದ ಸಜ್ಜೆಹಟ್ಟಿ ಮಂಟಪದಲ್ಲಿ ಅಂಗಮಣಿ ಉತ್ಸವ ಪ್ರಯುಕ್ತ ಮಡಿಲು ತುಂಬುವ ಸಂಪ್ರದಾಯ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಂಗಮಣಿ ಉತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭಾಗವಹಿಸಿದ್ದರು.

ದರ್ಶನಕ್ಕೆ ಅವಕಾಶ: ಭವ್ಯವಾಗಿ ಅಲಂಕಾರಗೊಂಡ ಚೆಲುವನಾರಾಯಣ ಸ್ವಾಮಿಯ ಅರಸಿಯರಾದ ಶ್ರೀದೇವಿ-ಭೂದೇವಿ ಅಮ್ಮನವರಿಗೆ ಅತ್ಯಮೂಲ್ಯ ಹಣ್ಣುಗಳಿಂದ ಮಡಿಲು ತುಂಬಿ ಮಹಾಮಂಗಳಾರತಿ ನೆರವೇರಿಸಲಾಯಿತು. ಕರ್ನಾಟಕದ ವಿವಿಧ
ಭಾಗಗಳಲ್ಲಿ ಬೆಳೆದ 50ಕ್ಕೂ ಹೆಚ್ಚು ರೀತಿಯ ಹಣ್ಣು ಸಂಗ್ರಹಿಸಿ, ನೂರಾರು ತಟ್ಟೆಗಳಲ್ಲಿ ಸಜ್ಜೆ ಹಟ್ಟಿ ಮಂಟಪದಲ್ಲಿ ಜೋಡಿಸಿಟ್ಟು ಭಕ್ತರು ದರ್ಶನ ಮಾಡಲು ಅವಕಾಶ ನೀಡಲಾಗಿತ್ತು. ತಂಡೋಪತಂಡವಾಗಿ ಆಗಮಿಸಿದ ಭಕ್ತರು, ಸಜ್ಜೆಹಟ್ಟಿ ಮನೆ, ಕರಗಂ ಮನೆಯಲ್ಲಿರಿಸಿದ್ದ ತಟ್ಟೆಗಳ ಸೋಬಗನ್ನು ಕಣ್ತುಂಬಿಕೊಂಡರು. ದೇವಿಯರ ಅಂಗಮಣಿ ಉತ್ಸವ ಆರಂಭವಾಗಿ ತವರುಮನೆ
ಮಂಟಪಕ್ಕೆ ಭವ್ಯ ಮೆರವಣಿಗೆಯೊಂದಿಗೆ ತಲುಪಿತು.

ಇದನ್ನೂ ಓದಿ:ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

ದೇವಿಯರನ್ನು ನಡೆಮುಡಿ ಹಾಸಿ ಬರಮಾಡಿಕೊಂಡ ನಂತರ ಅನೂಚಾನ ಸಂಪ್ರದಾಯದಂತೆ ಸಜ್ಜೆಹಟ್ಟಿ ಗುರುಗಳಾದ ತಿರುನಾರಾಯಣ ಅಯ್ಯಂಗಾರ್‌, ವಸಂತ ಮತ್ತು ಕರಗಂರಾಮಪ್ರಿಯ ದಂಪತಿ ದೇವಿಯರಿಗೆ ಮಡಿಲು ಶಾಸ್ತ್ರ ಪೂರೈಸಿದರು.
ದೇವಿಯರು ತವರು ಮನೆಯಿಂದ ಬರುವುದು ತಡವಾದಾಗ ಕೋಪಗೊಂಡ ಚೆಲುವರಾಯ ಕುದುರೆ ವಾಹನದಲ್ಲಿ ಹೊರನಡೆದು ಮೂರು ಮೊಲಗಳು ಅಡ್ಡಬಂದಾಗ ವಾಪಸ್ಸು ಮರಳಿದನೆಂಬ ಸಂಪ್ರದಾಯವಿದ್ದು, ದಾರಿಯ ನಡುವೆ ಮೂರು ಮೊಲಗಳನ್ನು ಸ್ವಾಮಿಯ ಉತ್ಸವಕ್ಕೆ ಅಡ್ಡಲಾಗಿ ಬಿಟ್ಟ ನಂತರ ಕುದುರೆ ವಾಹನೋತ್ಸವ ದೇವಾಲಯಕ್ಕೆ ಮತ್ತೆ ತಲುಪುವುದರೊಂದಿಗೆ ಅಂಗಮಣಿ ಉತ್ಸವ ಮುಕ್ತಾಯವಾಯಿತು.

ರಸ್ತೆ ರಿಪೇರಿ ಕಾರಣ ಆಹೋಬಲ ಮಠದ ಸಮೀಪ ಕುದುರೆ ವಾಹನೋತ್ಸವ ಮೊಟಕುಗೊಳಿಸಿ, ಎಡಗೈ ಬಲಗೈನವರಿಗೆ ವಿಶೇಷ ಪಾರಂಪರಿಕ ಮರ್ಯಾದೆ ಸಲ್ಲಿಸಲಾಯಿತು. ದೇವಿಯರಿಗೆ ಅರ್ಪಿಸಿದ ಹಣ್ಣು, ತರಕಾರಿಗಳಿಂದ ಕದಂಬ ಮತ್ತು ರಸಾಯನ ತಯಾರಿಸಿ ಶನಿವಾರ ಭಕ್ತರಿಗೆ ನೀಡಲಾಯಿತು. ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಮಂಗಳಮ್ಮ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.