ಗಾಯದ ಸಮಸ್ಯೆ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜ ಹೊರಕ್ಕೆ ?
Team Udayavani, May 12, 2022, 7:25 AM IST
ಮುಂಬಯಿ: ಹಾಲಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜ ಗಾಯದ ಸಮಸ್ಯೆಯಿಂದಾಗಿ ಐಪಿಎಲ್ನಿಂದ ಹೊರಬಿದ್ದಿದ್ದಾರೆ.
ಆರ್ಸಿಬಿ ತಂಡದೆದುರಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಸಂದರ್ಭ ಅವರ ಕೈ ಮತ್ತು ಭುಜಕ್ಕೆ ಗಾಯವಾಗಿತ್ತು. ಆಬಳಿಕ ಅವರು ಫೀಲ್ಡಿಂಗ್ ಮುಂದುವರಿಸಿದ್ದರೂ ಡೆಲ್ಲಿ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಚೆನ್ನೈ ಸುಲಭವಾಗಿ ಗೆದ್ದಿತ್ತು.
ಜಡೇಜ ಅವರಿಗಾದ ಗಾಯವನ್ನು ಚೆನ್ನೈ ತಂಡ ಗಂಭೀರವಾಗಿ ಪರಿಗಣಿಸುತ್ತಿದೆ. ಆದರೆ ಅವರಿನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದರೆ ಈ ಐಪಿಎಲ್ನಲ್ಲಿ ಅವರ ನಿರ್ವಹಣೆಯೂ ಸಾಧಾರಣ ಮಟ್ಟದಲ್ಲಿದೆ. ಆಡಿದ 10 ಪಂದ್ಯಗಳಿಂದ ಅವರು ಕೇವಲ 116 ಮತ್ತು 5 ವಿಕೆಟ್ ಉರುಳಿಸಿದ್ದಾರೆ.
ಈ ಬಾರಿಯ ಐಪಿಎಲ್ ಆರಂಭವಾಗುವ ಮೊದಲು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಡೇಜ ಅವರಿಗೆ ವಹಿಸಲಾಗಿತ್ತು. ನಾಯಕತ್ವದ ಜವಾಬ್ದಾರಿಯಿಂದಾಗಿ ಅವರ ವೈಯಕ್ತಿಕ ನಿರ್ವಹಣೆ ಮೇಲೆ ಪರಿಣಾಮ ಬಿತ್ತು. ಬ್ಯಾಟಿಂಗ್ನಲ್ಲಿ ಅವರ ವೈಫಲ್ಯ ಮುಂದುವರಿಯಿತು. ಕೊನೆಗೆ ಇದರಿಂದ ಬೇಸತ್ತ ಅವರು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದರು. ಹೀಗಾಗಿ ಧೋನಿ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಯಿತು.
ಚೆನ್ನೈ ತಂಡವು ಗುರುವಾರ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಡೇಜ ಆಡುವುದಿಲ್ಲ, ಲೀಗ್ ಹಂತದ ಇನ್ನುಳಿದ ಎರಡು ಪಂದ್ಯಗಳಲ್ಲಿ ಚೆನ್ನೈ ತಂಡವು ಗುಜರಾತ್ ಮತ್ತು ರಾಜಸ್ಥಾನ ತಂಡವನ್ನು ಎದುರಿಸಲಿದೆ. ಈ ಮೂರು ಪಂದ್ಯಗಳಲ್ಲಿ ತಂಡವು ಗೆದ್ದರೆ ಒಟ್ಟಾರೆ 14 ಅಂಕ ಗಳಿಸಲಿದೆ. ಹೀಗಿದ್ದರೂ ತಂಡವು ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಆರ್ಸಿಬಿ ಮತ್ತು ರಾಜಸ್ಥಾನ ತಂಡಗಳ ಪರಿಸ್ಥಿತಿಯನ್ನು ಗಮನಿಸಬೇಕಾಗಿದೆ. ಯಾಕೆಂದರೆ ಈ ಎರಡೂ ತಂಡಗಳು ಈಗಾಗಲೇ 14 ಅಂಕ ಗಳಿಸಿವೆ. ಇನ್ನು ಒಂದು ಪಂದ್ಯದಲ್ಲಿ ಆರ್ಸಿಬಿ ಅಥವಾ ರಾಜಸ್ಥಾನ ಗೆದ್ದರೆ ಚೆನ್ನೈಯ ಎಲ್ಲ ಪ್ರಯತ್ನಗಳು ವಿಫಲವಾಗಲಿವೆ.
ಜಡೇಜ ಐಪಿಎಲ್ ಸಾಧನೆ
ಐಪಿಎಲ್ನಲ್ಲಿ 33ರ ಹರೆಯದ ಜಡೇಜ 210 ಪಂದ್ಯಗಳನ್ನಾಡಿದ್ದು 26.62 ಸರಾಸರಿಯಂತೆ 2502 ರನ್ ಗಳಿಸಿದ್ದಾರೆ. ಎರಡು ಅರ್ಧಶತಕ ಬಾರಿಸಿರುವ ಅವರು 132 ವಿಕೆಟ್ ಹಾರಿಸಿದ ಸಾಧನೆಯನ್ನು ಕೂಡ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ