ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 83 ಕೋವಿಡ್ ಕೇಸ್ ಪತ್ತೆ: 993ಕ್ಕೆ ಏರಿದ ಸೋಂಕಿತರ ಸಂಖ್ಯೆ
Team Udayavani, Jul 21, 2020, 10:14 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ಮಹಾ ಸ್ಪೋಟ ಮುಂದುವರೆದಿದ್ದು ಮಂಗಳವಾರ ಜಿಲ್ಲಾದ್ಯಂತ ಹೊಸದಾಗಿ ಬರೋಬ್ಬರಿ 83 ಕೋವಿಡ್ ಪಾಸಿಟೀವ್ ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಈಗ 993ಕ್ಕೆ ಏರಿಕೆ ಕಂಡಿದೆ.
ಕಳೆದ ಸೋಮವಾರವಷ್ಟೇ ಜಿಲ್ಲೆಯಲ್ಲಿ ಒಟ್ಟು 60 ಪ್ರಕರಣಗಳು ಕಂಡು ಬಂದಿದ್ದವು. ಈಗ 83 ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ವೇಗಕ್ಕೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಜಿಲ್ಲೆಯಲ್ಲಿ ಸಾವಿರದಿಂದ ಸಾವಿರದ ಐದುನೂರು, ಎರಡು ಸಾವಿರವರೆಗೂ ಸೋಂಕಿತರ ಸಂಖ್ಯೆ ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.
83 ಹೊಸ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ ತಾಲೂಕು ಒಂದರಲ್ಲಿ ಅರ್ಧದಷ್ಟು ಅಂದರೆ ಬರೋಬ್ಬರಿ 40 ಪ್ರಕರಣಗಳು ಕಂಡು ಬಂದರೆ ಬಾಗೇಪಲ್ಲಿಯಲ್ಲಿ 10, ಚಿಂತಾಮಣಿಯಲ್ಲಿ 11, ಗೌರಿಬಿದನೂರಲ್ಲಿ 13, ಗುಡಿಬಂಡೆ 4 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 5 ಹೊಸ ಪ್ರಕರಣಗಳು ಕಂಡು ಬಂದಿವೆ. ಇದರ ನಡುವೆ ಮಂಗಳವಾರ ಸೋಂಕಿತರಲ್ಲಿ ಒಟ್ಟು 51 ಮಂದಿ ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 443 ಮಂದಿ ಇದುವರೆಗೂ ಸೋಂಕಿನಿಂದ ಗುಣಮುಖರಾಗಿದ್ದು 993 ಮಂದಿ ಪೈಕಿ ಇನ್ನೂ 528 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇವೆ. ಒಟ್ಟಾರೆ 993 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 348, ಬಾಗೇಪಲ್ಲಿ 137, ಚಿಂತಾಮಣಿ 153, ಗೌರಿಬಿದನೂರು 270, ಗುಡಿಬಂಡೆ 26, ಶಿಡ್ಲಘಟ್ಟ 59 ಪ್ರಕರಣಗಳನ್ನು ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ