ಕಾಡಾನೆ ದಾಳಿ : ಬಾಳೆ ತೋಟ ನಾಶ, ಅಪಾರ ಹಾನಿ ; ಆನೆಗಳ ಸ್ಥಳಾಂತರಕ್ಕೆ ಒತ್ತಾಯ
Team Udayavani, Mar 10, 2022, 6:35 PM IST
ಕೊಟ್ಟಿಗೆಹಾರ : ಬಾಳೂರು ಹೋಬಳಿಯ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಕೂಡಿಗೆ ಗ್ರಾಮದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆಗಳು ರೈತರ ಬಾಳೆ ತೋಟವನ್ನು ತುಳಿದು ನಾಶ ಮಾಡಿವೆ.
ಹೊಳೆಕೂಡಿಗೆಯ ಬಾಸಮ್ಮ ಹಾಗೂ ರಮೇಶ ಅವರ ಎರಡು ತೋಟಗಳಲ್ಲಿ ಮೂರು ಕಾಡಾನೆಗಳು ಸಂಚರಿಸಿ ಬಾಳೆಗಿಡಗಳನ್ನು ತಿಂದು ನಾಶ ಮಾಡಿವೆ. ತೋಟಗಳಲ್ಲಿಯೇ ಲದ್ದಿ ಹಾಕಿ ಹೋಗಿವೆ. ಕಳೆದ ಕೆಲವು ದಿನಗಳ ಹಿಂದೆಯೂ ಈಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಮತ್ತೇ ಕಾಡಾನೆ ದಾಳಿ ಗ್ರಾಮದಲ್ಲಿ ಮುಂದುವರೆದಿದ್ದು ಗ್ರಾಮಸ್ಥರು ಬೆಳೆ ಕಳೆದುಕೊಂಡು ನಷ್ಟ ಅನುಭವಿಸುವಂತಾಗಿದೆ.
ಕಾಡಾನೆಗಳ ಸ್ಥಳಾಂತರಕ್ಕೆ ಒತ್ತಾಯ
ಗ್ರಾಮೀಣ ಭಾಗದ ಬಣಕಲ್,ಗುತ್ತಿ,ದೇವರಮನೆ ಮತ್ತಿತರ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳವಿದೆ. ಹಳ್ಳಿಗಳಿಗೆ ಆಹಾರ ಹುಡುಕಿಕೊಂಡು ಕಾಡಾನೆಗಳು ಊರಿಗೆ ಬರುತ್ತಿದ್ದು ಬೆಳೆ ಹಾನಿ ಮಾಡಿ ರೈತರು ಕಂಗಾಲಾಗುತ್ತಿದ್ದಾರೆ. ಹಲವು ಕಡೆ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ತೋಟದ ಕಾರ್ಮಿಕರು,ಶಾಲಾ ಮಕ್ಕಳು ಭಯ ಪಡುವಂತಾಗಿದೆ. ಅರಣ್ಯ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗೆ ಓಡಿಸುವುದರ ಮುಖಾಂತರ ಅಥವಾ ಸ್ಥಳಾಂತರ ಮಾಡುವ ಮುಖಾಂತರ ಶಾಶ್ವತ ಪರಿಹಾರ ಒದಗಿಸಿ ಕಾಡಾನೆ ಹಾವಳಿಯನ್ನು ತಡೆಗಟ್ಟಬೇಕೆಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣಬಾಳೂರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ