Chikkamagaluru: ವಕೀಲರು – ಪೊಲೀಸ್ ಸಂಘರ್ಷ- ನ್ಯಾಯವಾದಿ ಪ್ರೀತಮ್ ಹೇಳಿಕೆ ದಾಖಲು
ಸಿಐಡಿ ಡಿಐಜಿಪಿ ವಂಶಿಕೃಷ್ಣ ನೇತೃತ್ವದಲ್ಲಿ ತನಿಖೆ ಆರಂಭ
Team Udayavani, Dec 7, 2023, 10:19 PM IST
ಚಿಕ್ಕಮಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿಯಲ್ಲಿರುವ ವಕೀಲರು ಮತ್ತು ಪೊಲೀಸರ ನಡುವಿನ ಗಲಾಟೆ ಪ್ರಕರಣದ ತನಿಖೆಯು ಸಿಐಡಿ ಡಿಐಜಿಪಿ ವಂಶಿಕೃಷ್ಣ ನೇತೃತ್ವದಲ್ಲಿ ಪ್ರಾರಂಭವಾಗಿದ್ದು, ಹಲ್ಲೆಗೊಳಗಾದ ಯುವ ವಕೀಲ ಪ್ರೀತಮ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್, ಡಿವೈಎಸ್ಪಿ ಉಮೇಶ್ ಹಾಗೂ ಕಾನೂನು ಸಲಹೆಗಾರ ಕಾಳೆ ಅವರು ಬುಧವಾರ ನಗರಕ್ಕೆ ಆಗಮಿಸಿದ್ದರು. ಗುರುವಾರ ಸಿಐಡಿ ಡಿಐಜಿಪಿ ವಂಶಿಕೃಷ್ಣ ಅವರು ನಗರದ ಪ್ರವಾಸಿ ಮಂದಿರದಲ್ಲಿ ಪ್ರೀತಮ್ ಹೇಳಿಕೆಯನ್ನು ದಾಖಲಿಸಿಕೊಂಡರು.
ನಗರದ ಮಾರ್ಕೆಟ್ ರಸ್ತೆಯಲ್ಲಿ ತಾನು ಬೈಕ್ನಲ್ಲಿ ತೆರಳುತ್ತಿದ್ದಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಸಿಬಂದಿ ತನ್ನನ್ನು ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದರು ಎಂದು ಪ್ರೀತಮ್ ದೂರಿನಲ್ಲಿ ತಿಳಿಸಿದ್ದು, ಅಂದು ನಡೆದ ಘಟನೆಯ ಸಮಗ್ರ ಮಾಹಿತಿಯನ್ನು ಅವರು ವಂಶಿಕೃಷ್ಣ ಅವರಿಗೆ ತಿಳಿಸಿದರು. ತನಿಖೆಯ ಮುಂದಿನ ಭಾಗವಾಗಿ, ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಆರು ಮಂದಿ ಪೊಲೀಸ್ ಸಿಬಂದಿಯನ್ನು ಶುಕ್ರವಾರ ವಿಚಾರಣೆ ನಡೆಸಿ, ಅವರ ಹೇಳಿಕೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…