Tourists ಸ್ವರ್ಗ ರಾಣಿಝರಿ: ಮೂಡಿಗೆರೆ ಸುತ್ತಮುತ್ತ ಪ್ರವಾಸಿಗರ ದಟ್ಟಣೆ ಹೆಚ್ಚಳ


Team Udayavani, Jul 16, 2023, 11:32 AM IST

3-chikkamagaluru

ಕೊಟ್ಟಿಗೆಹಾರ: ಮಲೆನಾಡಿನ ಹಸಿರ ಸೆರಗಿನಲ್ಲಿ ಐತಿಹಾಸಿಕ ತಾಣವೊಂದು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ. ಅದರಲ್ಲೂ ಬಲ್ಲಾಳರಾಯನ ದುರ್ಗದ ರಾಣಿಝರಿ ಪ್ರವಾಸಿಗರ ಪಾಲಿನ ಸ್ವರ್ಗವಾಗಿದೆ.

ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಬಲ್ಲಾಳರಾಯನ ದುರ್ಗ ತಪ್ಪಲಿನಲ್ಲಿ ಈ ರಾಣಿಝರಿ ಎಂಬ ಪ್ರಪಾತ ಪ್ರವಾಸಿಗ ಯುವಕ ಯುವತಿಯರ ಮನೆ ಮಾತಾಗಿದೆ.

ರಾಣಿಝರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾಜೂರು, ನೆರೆಯ ಗ್ರಾಮಗಳು ಕಾಣಿಸುತ್ತದೆ. ಹಸಿರ ಪ್ರಪಾತದ ಕಣಿವೆ ಎಂತಹವರ ಎದೆಯನ್ನೊಮ್ಮೆ ನಡುಗಿಸುವಂತಿದೆ. ಸಾವಿರಾರು ಅಡಿಯ ಪ್ರಪಾತದ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದವರು ರಾಣಿಝರಿಯನ್ನು ಮರೆಯುವುದಿಲ್ಲ.

ರಾಣಿ ಝರಿಗೂ ರಾಣಿ ಚೆನ್ನಮ್ಮಾಜಿಗೂ ಅವಿನಾಭಾವದ ಸಂಬಂಧವಿದೆ. ಬಲ್ಲಾಳರಾಯನ ದುರ್ಗದ ಕೋಟೆಗಳು ಅವನತಿಯ ಅಂಚಿನಲ್ಲಿದ್ದರೂ ಕೂಡ ಇಲ್ಲಿನ ಹಸಿರು ಹೊದಿಕೆಯ ಭೂಸಿರಿ ಪ್ರವಾಸಿಗರ ನೆಚ್ಚಿನ ತಾಣ. ಕಣ್ಣಿನಂಚಿನುದ್ದಕ್ಕೂ ಹಸಿರಾದ ಪರ್ವತದ ಶ್ರೇಣಿಗಳ ನೋಟ ಅವರ್ಣನೀಯ. ಹಾಗೆಯೇ ಬಲ್ಲಾಳರಾಯನ ದುರ್ಗ ನೋಡಲು ಬಂದ ಪ್ರವಾಸಿಗರಿಗೆ ತಂಗಲು ಅನೇಕ ಹೋಂ ಸ್ಟೇಗಳು, ಕಾಫಿ ಕಾರ್ನರ್ ಗಳು ತಲೆ ಎತ್ತಿವೆ.

ರಾಣಿ ಝರಿಯಿಂದ ಬಲ್ಲಾಳರಾಯನ ದುರ್ಗ ನಾಲ್ಕು ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಬೇಕು. ಮೊದಲು ರಾಣಿ ಝರಿ ನೋಡಿ ಪ್ರವಾಸಿಗರು ಬಲ್ಲಾಳರಾಯನ ದುರ್ಗದ ಹಾದಿ ಹಿಡಿಯುತ್ತಾರೆ. ಒಂದನೇ ಬಲ್ಲಾಳನ ಕೋಟೆ ಈಗ ಅಳಿವಿನಂಚಿನಲ್ಲಿ ಅರಣ್ಯ ಸೊಬಗು ಮಾತ್ರ ಪ್ರವಾಸಿಗರ ಸ್ವರ್ಗವಾಗಿಯೇ ಉಳಿದಿದೆ.

ಬಲ್ಲಾಳರಾಯನ ದುರ್ಗದ ರಾಣಿ ಝರಿ ಸುತ್ತಮುತ್ತಲಿನ ಪರಿಸರ ಮೋಜು ಮಸ್ತಿ ಮಾಡುವವರನ್ನು ನಿಯಂತ್ರಿಸಿ ಪರಿಸರ ಆಸ್ವಾಧಕರಿಗೆ ಮುಕ್ತ ತಾಣವಾಗಲಿ ಎಂಬುದು ಪರಿಸರ ಪ್ರಿಯರ ಆಶಯವಾಗಿದೆ.

‘ ಬಲ್ಲಾಳರಾಯನ ದುರ್ಗ ಹಾಗೂ ರಾಣಿ ಝರಿ ಹಸಿರ ಮಂಜಿನಲ್ಲಿ ಮಿಂದು ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ನಮ್ಮ ರಾಜ್ಯದಲ್ಲೇ ಇಂತಹ ಸ್ಥಳಗಳು ಇರುವಾಗ ನಾವು ಬೇರೆ ರಾಜ್ಯಗಳಿಗೆ ಹೋಗಿ ನೋಡುವ ಅವಶ್ಯಕತೆ ಇರುವುದಿಲ್ಲ. ಜನರಿಗೆ ಇಲ್ಲಿ ಮನಸಿಗೆ ಮುದ ನೀಡುವ ಸ್ಥಳವೆಂದರೆ ತಪ್ಪಾಗಲಾರದು’ – ಶಶಾಂಕ್, ಪ್ರವಾಸಿ, ಮೈಸೂರು

 

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.