ಅನುದಾನ ಕೊರತೆ: ಕೋರ್ಟ್‌ಗೆ ಹೊಸ ಕಟ್ಟಡ ಭಾಗ್ಯ ಮರೀಚಿಕೆ


Team Udayavani, Jan 10, 2021, 12:30 PM IST

ಅನುದಾನ ಕೊರತೆ: ಕೋರ್ಟ್‌ಗೆ ಹೊಸ ಕಟ್ಟಡ ಭಾಗ್ಯ ಮರೀಚಿಕೆ

ಚಿಕ್ಕೋಡಿ: ಸಂವಿಧಾನ ಬರೆದ ಡಾ.ಅಂಬೇಡ್ಕರ ವಾದ ಮಂಡಿಸಿದ ನ್ಯಾಯಾಲಯಕ್ಕೆ ಹೈಟಿಕ್‌ ಸ್ಪರ್ಶ ನೀಡಲು ಸರ್ಕಾರ ಮುಂದಾಗಿದೆ. ಆದರೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮೂರು ವರ್ಷ ಕಳೆದರೂ ಹೊಸ ಕಟ್ಟಡ ಭಾಗ್ಯ ಮರೀಚಿಕೆಯಾಗಿದೆ.

ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ನಗರದಲ್ಲಿ ಹೈಟೆಕ್‌ ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ 32 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿದೆ. ಕಳೆದ 2018ರಲ್ಲಿ ಹೊಸ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ
ನೆರವೇರಿಸಿದೆ. ಆದರೆ ಇಲ್ಲಿಯವರಿಗೆ ಕಟ್ಟಡ ಕಾಮಗಾರಿ ಆರಂಭಿಸದೇ ಇರುವುದು ದುರ್ದೈವದ ಸಂಗತಿ.

ಜಿಲ್ಲಾ ಘೋಷಣೆಗೆ ತುದಿಗಾಲ ಮೇಲೆ ನಿಂತಿರುವ ಚಿಕ್ಕೋಡಿ ನಗರದಲ್ಲಿ ಹೈಟೆಕ್‌ ನ್ಯಾಯಾಲಯದ ಕಟ್ಟಡ ನಿರ್ಮಿಸಲು ರಾಜ್ಯ ಸರ್ಕಾರ ಮೊದಲು ಹಂತದಲ್ಲಿ 19 ಕೋಟಿ ರೂ. ಮಂಜೂರು ನೀಡಿತ್ತು. ಆದರೆ ಮತ್ತೂಮ್ಮೆ ಕ್ರಿಯಾ ಯೋಜನೆ ರೂಪಿಸಿದಾಗ
32 ಕೋಟಿ ರೂ.ಗೆ ಅನುದಾನ ಹೆಚ್ಚಿಸಿದೆ. ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿಕೊಟ್ಟಿದೆ. ಒಂದು ವರ್ಷದಲ್ಲಿ ಕಟ್ಟಡ ಕಾಮಗಾರಿ ಮುಗಿಸಿಯೇ ಬಿಡುತ್ತೇವೆಂದು ಭರವಸೆ ನೀಡಿದ ಲೋಕೋಪಯೋಗಿ ಇಲಾಖೆ ಈಗ ಸುಮ್ಮನಾಗಿದೆ. ನ್ಯಾಯಾಲಯದ ಕಟ್ಟಡ ಕಾಮಗಾರಿ ನನೆಗುದಿಗೆ ಜನಪ್ರತಿನಿಧಿ ಗಳ ಇಚ್ಛಾಶಕ್ತಿ ಕೊರತೆಯೇ ಕಾರಣ ಎನ್ನುತ್ತಾರೆ ವಕೀಲರು.

ಸುಸಜ್ಜಿತ ಕಟ್ಟಡದ ಗುರಿ: ಸಂವಿಧಾನ ಬರೆದ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಚಿಕ್ಕೋಡಿ ನ್ಯಾಯಾಲಯಕ್ಕೆ ಬಂದು ವಾದ ಮಂಡಿಸಿದ ಹಿನ್ನೆಲ್ಲೆಯಲ್ಲಿ ರಾಜ್ಯದಲ್ಲಿಯೇ ಮಾದರಿ ನ್ಯಾಯಾಲಯದ ಕಟ್ಟಡ ನಿರ್ಮಾಣವಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಇದರಿಂದ ನಗರದ ಹೃದಯ ಭಾಗದಲ್ಲಿ ಇರುವ ಈಗಿನ ನ್ಯಾಯಾಲಯದ ಆವರಣದಲ್ಲಿಯೇ ಎರಡು ಎಕರೆ ಜಾಗದಲ್ಲಿ ಐದು ಕೋರ್ಟ್‌ ಹಾಲ್‌, ವಕೀಲರ ಸಂಘದ ಕಚೇರಿ, ಗ್ರಂಥಾಲಯ ಸೇರಿದಂತೆ ಮುಂದಿನ 15 ರಿಂದ 20 ವರ್ಷದ ಭವಿಷ್ಯದಲ್ಲಿ
ಅನುಕೂಲವಾಗುವ ಹಾಗೆ ನೂತನ ಕಟ್ಟಡ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 32 ಕೋಟಿ ರೂ. ಮಂಜೂರು ನೀಡಿದೆ.

ಶಿಥಿಲಾವಸ್ಥೆಯಲ್ಲಿ ಕಟ್ಟಡ: ಈಗಾಗಲೇ ಚಿಕ್ಕೋಡಿ ನಗರದಲ್ಲಿ ಏಳನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಹಿರಿಯ ದಿವಾಣಿ ನ್ಯಾಯಾಲಯ, ಪ್ರಥಮ ದಿವಾಣಿ ನ್ಯಾಯಾಲಯ, ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ, ಎರಡನೆ ಹೆಚ್ಚುವರಿ ದಿವಾಣಿ
ನ್ಯಾಯಾಲಯ ಹೀಗೆ ಐದು ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತವೆ. ಎರಡರಿಂದ ಮೂರು ನ್ಯಾಯಾಲಯದ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ಕಂಡಿವೆ. ಕಳೆದ ನಾಲ್ಕೈದು ವರ್ಷದ ಹಿಂದೆ ನ್ಯಾಯಾಧೀಶರು ಕುಳಿತುಕೊಳ್ಳುವ ಆಸನದ ಮೇಲ್ಭಾಗದಲ್ಲಿ ಛಾವಣಿ ಕುಸಿತು ಕಂಡು ಭಾರಿ ಚರ್ಚೆಗೆ ಕಾರಣವಾಗಿತ್ತು. ಈಗ ಹೊಸ ಕಟ್ಟಡ ಕಾಮಗಾರಿ ಆರಂಭಿಸಲು ಸರ್ಕಾರ ಹಾಗೂ ನ್ಯಾಯಾಂಗ ಇಲಾಖೆ ಮನಸ್ಸು ಮಾಡಿದೆ. ಆದರೂ ಹೊಸ ಕಟ್ಟಡದ ಕಾಮಗಾರಿ ಆರಂಭವಾಗದಿರುವುದಕ್ಕೆ ನಮಗೂ ಬೇಸರ ಮೂಡಿಸಿದೆ ಎನ್ನುತ್ತಾರೆ ಚಿಕ್ಕೋಡಿ ವಕೀಲರ ಸಂಘದ ಅಧ್ಯಕ್ಷ ನಾಗೇಶ ಕಿವಡ.

ಸುಂದರ ಹಾಗೂ ಸುಸಜ್ಜಿತ ನ್ಯಾಯಾಲಯ ಕಟ್ಟಡ ನಿರ್ಮಿಸಲು ಸರ್ಕಾರ ಹಾಗೂ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಆದರೂ ಹೊಸ ಕಟ್ಟಡ ಕಾಮಗಾರಿ ಭಾಗ್ಯ ಆರಂಭವಾಗಿಲ್ಲ, ಕಾರಣ ತಿಳಿದಿಲ್ಲ.

– ಕಲ್ಮೇಶ ಕಿವಡ, ಉಪಾಧ್ಯಕ್ಷರು, ರಾಜ್ಯ ವಕೀಲರ ಪರಿಷತ್‌ ಬೆಂಗಳೂರು.

– ಮಹಾದೇವ ಪೂಜೇರಿ

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.