ಜನರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು: ಸಂಸದ ಅಣ್ಣಾ ಸಾಹೇಬ ಜೊಲ್ಲೆ
ಪ್ರವಾಹ ಭೀತಿ
Team Udayavani, Jul 15, 2022, 12:07 PM IST
ಚಿಕ್ಕೋಡಿ: ಕೃಷ್ಣಾ ಮತ್ತು ಉಪನದಿಗಳಿಗೆ ಪ್ರವಾಹ ಎದುರಾದರೇ ಜನರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಸುರಕ್ಷಿತ ಸ್ಥಳಗಲ್ಲಿ ಕಾಳಜಿ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಅವರು ಇಲ್ಲಿನ ಲೋಕೋಪಯೋಗಿ ಸಭಾ ಭವನದಲ್ಲಿ ನಡೆದ ಪ್ರವಾಹ ಮುನ್ನೆಚ್ಚರಿಕೆ ಕುರಿತ ಸಭೆಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅಧ್ಯಕ್ಷತೆ ವಹಿಸಿ ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ, ನಿಪ್ಪಾಣಿ ಮತ್ತು ಹುಕ್ಕೇರಿ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಕಾಳಜಿ ಕೇಂದ್ರದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಮತ್ತಿತರ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಸಿದ್ದತೆ ಮಾಡಿಕೊಳ್ಳಬೇಕು ಎಂದರು.
ಕೋಯ್ನಾ ಮತ್ತು ಇತರೆ ಜಲಾಶಯ ಮೇಲೆ ನಿಗಾ ಇಡಬೇಕು. ಕಳೆದ ಪ್ರವಾಹದಲ್ಲಿ ಮಾಡಿರುವ ತಪ್ಪುಗಳು ಮತ್ತೇ ಆಗಬಾರದು. ಎಲ್ಲ ಇಲಾಖೆಗಳು ಜಂಟಿಯಾಗಿ ಕೆಲಸ ಕಾರ್ಯ ನಿರ್ವಹಿಸಬೇಕು. ಎಲ್ಲಾ ಕೆಲಸಗಳನ್ನು ಒಬ್ಬರ ಮೇಲೆ ಹಾಕಿ ಜಾರಿಕೊಳ್ಳುವ ಮನೋಭಾವ ಇರಬಾರದು. ಸದ್ಯದ ಪರಿಸ್ಥಿತಿಯಲ್ಲಿ ಪ್ರವಾಹ ಉಂಟಾಗುವ ಮುನ್ಸೂಚನೆ ಇಲ್ಲ. ಮುಂದಿನ ವಾರದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಪ್ರವಾಹದ ಸಾಧ್ಯತೆ ಇರುತ್ತದೆ ಎಂದರು.
ಅತಿವೃಷ್ಠಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಸಿಗುವಂತೆ ಮಾಡಬೇಕು. ಯಾರದೋ ಒತ್ತಡಕ್ಕೆ ಮಣಿದು ಮನೆ ಇದ್ದವರಿಗೆ ಮನೆ ಕೊಡುವ ವ್ಯವಸ್ಥೆ ನಿಲ್ಲಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಗೋಕಾಕ ಡಿವೈಎಸ್ ಪಿ. ಮನೋಜಕುಮಾರ ನಾಯಿಕ, ಅಥಣಿ ಡಿವೈಎಸ್ ಪಿ. ಗಿರೀಶ ಎಸ್.ವಿ., ಚಿಕ್ಕೋಡಿ ಡಿವೈಎಸ್ ಪಿ ಬಸವರಾಜ ಎಲಿಗಾರ, ತಹಶಿಲ್ದಾರ ಸಿ.ಎಸ್.ಕುಲಕರ್ಣಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ