ಭಾಲ್ಕಿ: ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ
Team Udayavani, Jan 9, 2021, 2:12 PM IST
ಭಾಲ್ಕಿ: ತಾಲೂಕಿನ ಜಿರಗ್ಯಾಳ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸೂಕ್ತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ತಡೆಹಿಡಿದ ಘಟನೆ ನಡೆದಿದೆ.
ಮೆಹಕರ ಪೊಲೀಸ್ ಠಾಣೆ ವ್ಯಾಪ್ತಿಯ ಜೀರಗ್ಯಾಳ ಗ್ರಾಮದ 12 ವರ್ಷದ ಬಾಲಕಿಯನ್ನು ಅದೇ ಗ್ರಾಮದ 24 ವರ್ಷದ ವ್ಯಕ್ತಿಗೆ ಕೊಟ್ಟು ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಕುರಿತು ಮಾಹಿತಿ ತಿಳಿದ ಮೆಹಕರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ನಂದಕುಮಾರ ವಿವಾಹ ತಡೆಗೆ ತಂಡ ರಚಿಸಿ, ದಾಳಿ ನಡೆಸಿದರು.
ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಹೇಳಿದರು. ಮಗಳಿಗೆ 18 ವರ್ಷ ತುಂಬುವವರೆಗೆ ವಿವಾಹ ಮಾಡುವುದಿಲ್ಲ ಎನ್ನುವ ಮುಚ್ಚಳಿಕೆ ಪತ್ರ
ಬರೆಸಿಕೊಂಡು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ:ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆ: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್
ಈ ಸಂದರ್ಭದಲ್ಲಿ ಗ್ರಾ.ಪಂ ಅಧಿಕಾರಿ ಚಂದ್ರಶೇಖರ ಬನ್ನಾಳೆ, ಎಎಸ್ಐ ಮಲ್ಲಿಕಾರ್ಜುನ, ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ವಿಜಯಲಕ್ಷ್ಮಿ, ಮುಖ್ಯಶಿಕ್ಷಕ ಮಾರುತಿರಾವ, ಭಾತಂಬ್ರಾ ಗ್ರಾಪಂ ಪಿಡಿಒ ಧನರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ