ಅಂಗನವಾಡಿಗಳ ಮೇಲೆ ಬಾಲವಿಕಾಸ ಸಮಿತಿ ನಿಗಾ


Team Udayavani, May 17, 2020, 7:49 AM IST

anganavadi2

ಬೆಂಗಳೂರು: ಅಂಗನವಾಡಿಗಳಲ್ಲಿ ಪಾರದರ್ಶ ಕತೆ ತರಲು ಬಾಲವಿಕಾಸ ಸಮಿತಿ ರಚಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸರ್ಕಾರದ 30ಕ್ಕೂ ಅಧಿಕ ಯೋಜನೆಗಳು ಅಂಗನವಾಡಿ  ಕಾರ್ಯಕರ್ತೆಯರ ಮೂಲಕ ತಲುಪಲಿದ್ದು, ಗ್ರಾಮೀಣ ಭಾಗದಲ್ಲಿ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲವೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 62,540 ಅಂಗನವಾಡಿ ಗಳು, 3,331  ಮಿನಿ ಅಂಗನವಾಡಿಗಳು ಸೇರಿ 66 ಸಾವಿರ ಅಂಗನವಾಡಿಗಳಿದ್ದು, 6 ತಿಂಗ ಳಿಂ ದ 6 ವರ್ಷದ 38. 64 ಲಕ್ಷ ಮಕ್ಕಳಿ ದ್ದಾರೆ. ಇದರಲ್ಲಿ ಅರ್ಧದಷ್ಟು ಅಂಗನವಾ ಡಿಗೆ ಹೋಗುತ್ತಿದ್ದು, ಬಹುತೇಕ ಮಕ್ಕಳು ವಿವಿಧ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಅದಕ್ಕಾಗಿ ಸರ್ಕಾರ ಬಾಲವಿಕಾಸ ಸಮಿತಿ ರಚಿಸಿದ್ದು, ಸಮಿತಿಯು ಅಂಗನವಾಡಿಗಳ ಕಾರ್ಯವೈಖರಿ ಬಗ್ಗೆ ನಿಗಾ ವಹಿಸಲಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮೇಲೆ ಅವ್ಯವಹಾರ  ಆರೋಪ ಕೇಳಿಬಂದರೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುವ ಅಧಿಕಾರ ನೀಡಲಾಗಿದೆ.

ಆರ್ಥಿಕ ವ್ಯವಹಾರಗಳ ನಿರ್ವಹಣೆ: ಮಕ್ಕಳಿಗೆ ಹಾಗೂ ಮಾತೃ ಪೂರ್ಣ ಯೋಜನೆಯ ಫಲಾನುಭವಿ ಗಳಿಗೆ ಸ್ಥಳಿಯವಾಗಿ ತರಕಾರಿ, ಮೊಟ್ಟೆ, ಚಿಕ್ಕಿ ಖರೀದಿ,ಅಂಗನವಾಡಿ ದಿನಾಚರಣೆ ವೆಚ್ಚ  ಕ್ಕಾಗಿ ಹಾಗೂ ಬಾಲಸ್ನೇಹಿ ಯೋಜನೆಯಡಿ  ಬಿಡುಗಡೆ ಮಾಡಲಾಗುವ ಅಥವಾ ಯೋಜನೆಯ ಉದ್ದೇಶ ಈಡೇರಿಕೆಗಾಗಿ ಯಾವುದೇ ಅನುದಾನವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿ ಹೆಸರಿನಲ್ಲಿ ಜಂಟಿ ಖಾತೆ ತೆರೆದು ನಿರ್ವಹಣೆ  ಮಾಡುವ ಅಧಿಕಾರ ಸಮಿತಿಗೆ ನೀಡಲಾಗಿದೆ.

ಸಮಿತಿಯಲ್ಲಿ ಯಾರು ಇರುತ್ತಾರೆ?: ಅಂಗನವಾಡಿ ಕೇಂದ್ರದ ಯಾವುದಾದರೂ ಒಂದು ಫಲಾನುಭವಿ ಮಗು ವಿನ ತಾಯಿ (ಅಧ್ಯಕ್ಷೆ), ಸಂಬಂಧ ಪಟ್ಟ ವಾರ್ಡ್‌ನ ಸದಸ್ಯರು, ಅಂಗನವಾಡಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಹಾಗೂ ಹಿರಿಯ  ಪ್ರಾಥಮಿಕ ಶಾಲೆಯ ಮುಖ್ಯೋ ಪಾಧ್ಯಾಯರು, ಆಶಾ ಕಾರ್ಯಕರ್ತೆ, ಅಂಗನವಾಡಿ ವ್ಯಾಪ್ತಿಯಲ್ಲಿನ ಪ್ರಾಯ ಪೂರ್ವ ಬಾಲಕಿ, ಅಂಗನವಾಡಿಯ ಇಬ್ಬರು ಮಕ್ಕಳ ಪೋಷಕರು (ಪರಿಶಿಷ್ಟ ಜಾತಿ ಮತ್ತು ಪಂಗಡದವರು), ಅಂಗನ  ವಾಡಿ ಫಲಾನುಭವಿಯಾದ ಒಂದು ಮಗುವಿನ ಅಜ್ಜಿ, ಅಂಗನವಾಡಿ ಫಲಾನುಭವಿಯಾದ ಮಗುವಿನ ತಂದೆ, ಸಮು ದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆ ಯ ಪ್ರತಿನಿಧಿ, ಸ್ತ್ರೀ ಶಕ್ತಿ ಗುಂಪಿನ ಒಬ್ಬರು ಪ್ರತಿನಿಧಿ (ಸದಸ್ಯರು),  ಅಂಗನವಾಡಿ ಕಾರ್ಯಕರ್ತೆ ( ಸದಸ್ಯ ಕಾರ್ಯದರ್ಶಿ ) ಸಮಿತಿಯಲ್ಲಿ ಇರಲಿದ್ದಾರೆ.

ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂ ತಿಯರು ಸೇರಿ ಇನ್ನಿತರರಿಗೆ ವಿವಿಧ ಯೋಜನೆಗಳು ತಲುಪಲಿದ್ದು, ಇದರಲ್ಲಿ ಅವ್ಯವಹಾರ ನಡೆಯು ತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಬಾಲವಿಕಾಸ ಸಮಿತಿ ರಚಿಸಲಾಗಿದೆ.
-ಕೆ.ಎ.ದಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ನಿರ್ದೇಶಕ

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.