ರಸ್ತೆ ದಾಟಲು ಮಕ್ಕಳ ಹರಸಾಹಸ

ನಿತ್ಯ ರಸ್ತೆಗೆ ಅಡ್ಡಲಾಗಿ ಹಗ್ಗ ಹಿಡಿಯುವ ಶಿಕ್ಷಕರು ; ಕಾರಟಗಿಯಲ್ಲಿ ಉಲ್ಬಣಗೊಳ್ಳುತ್ತಿದೆ ಸಂಚಾರ ದಟ್ಟಣೆ

Team Udayavani, Jun 27, 2022, 12:51 PM IST

5

ಕಾರಟಗಿ: ಪಟ್ಟಣದ ಹಳೆ ಬಸ್‌ ನಿಲ್ದಾಣದ ಉನ್ನತೀಕರಿಸಿದ ಸರಕಾರಿ ಶಾಲೆಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಗೆ ರಸ್ತೆ ದಾಟಿಸುವ ಅನಿವಾರ್ಯತೆ ಬಂದೊದಗಿದೆ.

ಪಟ್ಟಣ ತಾಲೂಕು ಕೇಂದ್ರವಾಗುತ್ತಿದ್ದಂತೆ ಜನಸಂಖ್ಯೆ ಕೂಡ ಹೆಚ್ಚುತ್ತಿದ್ದು, ಅದರೊಂದಿಗೆ ವಾಹನ ದಟ್ಟಣೆ ಕೂಡ ಹೆಚ್ಚುತ್ತಿದೆ. ಹಾಗೆಯೆ ಖಾಸಗಿ ಶಾಲೆಗಳ ಅಬ್ಬರ ಒಂದೆಡೆಯಾದರೆ ಖಾಸಗಿ ಶಾಲೆಯ ವಾಹನಗಳ ಓಡಾಟವೂ ಮೀತಿ ಮೀರಿದೆ. ಇದೆಲ್ಲದರ ಪರಿಣಾಮ ನಿತ್ಯ ಪಟ್ಟಣದಲ್ಲಿ ಟ್ರಾಫಿಕ್‌ ಸಮಸ್ಯೆ ನಿಯಂತ್ರಿಸಲಾಗದೇ ಪೊಲೀಸ್‌ ಇಲಾಖೆ ಸುಮ್ಮನಾಗಿದೆ.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಬೈಕ್‌ಗಳು, ಬಸ್‌, ಲಾರಿ ಟ್ಯಾಕ್ಸಿ, ಟಾಂಟಂ, ಆಟೋ ಸೇರಿದಂತೆ ಹಲವಾರು ವಾಹನಗಳ ಓಡಾಟದಿಂದ ಟ್ರಾಫಿಕ್‌ ಸಮಸ್ಯೆ ಉಲ್ಬಗೊಳ್ಳುತ್ತಿದೆ. ಹೀಗಾಗಿ ಶಾಲಾ ಮಕ್ಕಳು ರಸ್ತೆ ದಾಟಲು ಹರಸಾಹಸ ಪಡಬೇಕಾಗಿದೆ. ಇದನ್ನರಿತ ಹಳೆ ಬಸ್‌ ನಿಲ್ದಾಣದ ಉನ್ನತೀಕರಿಸಿದ ಶಾಲಾ ಶಿಕ್ಷಕರು ಮಕ್ಕಳನ್ನು ಸರದಿಯ ಮೂಲಕ ನಿಲ್ಲಿಸಿ ಎರಡು ಬದಿಗಳಲ್ಲಿ ಹಗ್ಗ ಹಿಡಿದುಕೊಂಡು ಮಕ್ಕಳನ್ನು ರಸ್ತೆ ದಾಟಿಸುವ ಕೆಲಸ ಮಾಡುತ್ತಿದ್ದಾರೆ.

ಹಂಪ್ಸ್ ಗಳಿಲ್ಲ: ರಸ್ತೆ ನಿರ್ಮಾಣ ಮಾಡುವಾಗ ಅವಶ್ಯವಿದ್ದೆಡೆ ಹಂಪ್ಸ್‌ಗಳನ್ನು ಹಾಕಿಲ್ಲ. ಝಿಬ್ರಾ ಕ್ರಾಸಿಂಗ್‌ ಕೂಡ ಹಾಕಿಲ್ಲ. ಹೀಗಾಗಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟಲು ಪಡುವ ಕಷ್ಟ ಅಷ್ಟಿಷ್ಟಲ್ಲ. ಪೊಲೀಸ್‌ ಇಲಾಖೆಗೆ ಹಲವಾರು ಬಾರಿ ಟ್ರಾಫಿಕ್‌ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳುವಂತೆ ಹಲಬಾರು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಕೆಲವೊಮ್ಮೆ ಅಪಘಾತಗಳು ನಡೆದು ಜೀವಹಾನಿ ಸಂಭವಿಸಿವೆ. ಆದರೂ ಕಠಿಣಕ್ರಮಕ್ಕೆ ಇಲಾಖೆ ಮುಂದಾಗಿಲ್ಲ ಎನ್ನುವುದು ಪ್ರಜ್ಞಾವಂತರ ಆರೋಪ.

ಪಟ್ಟಣದ ರಾಜ್ಯ ಹೆದ್ದಾರಿ ಸೇರಿದಂತೆ ನವಲಿ ರಸ್ತೆ, ಬೂದಗುಂಪ ರಸ್ತೆಗಳ ಅಕ್ಕಪಕ್ಕದಲ್ಲಿ ತಳ್ಳು ಬಂಡಿ, ಗೂಡಂಗಡಿ, ಡಬ್ಟಾ ಅಂಗಡಿಗಳ ವ್ಯಾಪಾರಸ್ಥರು ರಸ್ತೆಯ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೆ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್‌ ಸ್ಥಳವಿಲ್ಲದೇ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಯಾಗಿ ನಿತ್ಯ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್‌ ಸಮಸ್ಯೆಯಾಗುತ್ತದೆ. ಪುರಸಭೆ, ಪೊಲೀಸ್‌ ಇಲಾಖೆ ಇದರ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪಟ್ಟಣದ ಜನತೆ ಆಗ್ರಹಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಶಾಲೆಗಳು ಆರಂಭಗೊಂಡು ಜನರ ಓಡಾಟವೂ ಹೆಚ್ಚಿದೆ. ವಾಹನಗಳ ಒಡಾಟವು ಹೆಚ್ಚಿದೆ. ಹೀಗಾಗಿ ರಾಜ್ಯ ಹೆದ್ದಾರಿಯಲ್ಲಿ ಮಕ್ಕಳು ಮಹಿಳೆಯರು ಓಡಾಡುವುದು ದುಸ್ತರವಾಗಿದ್ದು ಮಕ್ಕಳ ಹಿತದೃಷ್ಟಿಯಿಂದ ನಿತ್ಯ ಮಕ್ಕಳನ್ನು ರಸ್ತೆ ದಾಟಿಸುವ ಕೆಲಸ ಮಾಡುತ್ತಿದ್ದೇವೆ. –ಶಾಮಸುಂದರ್‌ ಇಂಜನಿ, ಶಾಲೆಯ ಮುಖ್ಯಗುರು

ಕಾರಟಗಿ ಮತ್ತು ಕನಕಗಿರಿ ನೂತನ ತಾಲೂಕುಗಳ ಪೊಲೀಸ್‌ ಠಾಣೆಗಳಿಗೆ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಶೀಘ್ರದಲ್ಲೇ ಸಿಬ್ಬಂದಿ ನೇಮಕವಾಗುತ್ತದೆ. ಕಾರಟಗಿ ಪಟ್ಟಣದ ಟ್ರಾಫಿಕ್‌ ಸಮಸ್ಯೆಯನ್ನು ಸೋಮವಾರದಿಂದಲೇ ನಿಯಂತ್ರಣಕ್ಕೆಮುಂದಾಗುವಂತೆ ಸೂಚಿಸುತ್ತೇನೆ. –ರುದ್ರೇಶ ಉಜ್ಜೀನಕೊಪ್ಪ,ಡಿವೈಎಸ್‌ಪಿ

ಕಾರಟಗಿ ಸರಕಾರಿ ಶಾಲೆ ಮುಂಭಾಗದ ಅಂಗಡಿ ಮುಂಗಟ್ಟುಗಳು, ತಳ್ಳು ಬಂಡಿಗಳಿಂದ ರಸ್ತೆ ಅತಿಕ್ರಮಣವಾಗಿ ಪಾದಚಾರಿ ರಸ್ತೆಯಿಲ್ಲದೇ ವಿದ್ಯಾರ್ಥಿಗಳು ರಸ್ತೆ ದಾಟಲಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಪುರಸಭೆ ಹಾಗೂ ಪೊಲೀಸ್‌ ಇಲಾಖೆಗೆ ಪತ್ರ ಬರೆದು ಪಾದಚಾರಿ ರಸ್ತೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವುಂತೆ ಹಾಗೂ ಸಂಚಾರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಪತ್ರ ಬರೆಯುತ್ತೆನೆ. –ಸೋಮಶೇಖರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ

„ದಿಗಂಬರ ಎನ್‌. ಕುರ್ಡೆಕರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.