ಚಿಲಿ: ಸೋಂಕು ಮುಕ್ತ ಪ್ರಮಾಣ ಪತ್ರ ವಿವಾದ


Team Udayavani, Apr 28, 2020, 4:59 PM IST

ಚಿಲಿ: ಸೋಂಕು ಮುಕ್ತ ಪ್ರಮಾಣ ಪತ್ರ ವಿವಾದ

ಮಣಿಪಾಲ: ಕೆಲ ವಾರಗಳಿಂದ ಕೋವಿಡ್‌-19 ವಿರುದ್ಧ ಸೆಣಸಾಡಿ ಚೇತರಿಸಿಕೊಂಡ ಕೆಲ ದೇಶಗಳು ಸಹಜ ಸ್ಥಿತಿಯತ್ತ ಮರುಳುತ್ತಿವೆ. ಅಲ್ಲದೇ ನಿಧಾನವಾಗಿ ಒಂದೊಂದೇ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ದೈನಂದಿನ ಚಟುವಟಿಕೆಗಳಿಗೆ ತೆರೆದುಕೊಳ್ಳುತ್ತಿದೆ. ಇದೀಗ ದಕ್ಷಿಣ ಅಮೆರಿಕಾ ಭಾಗದಲ್ಲಿರುವ ಚಿಲಿ ಸರಕಾರವೂ ನಿಯಮಗಳ ಸಡಿಲಿಕೆಯತ್ತ ಮುಖ ಮಾಡಿದೆ.
ಜತೆಗೆ ಸೋಂಕು ಮುಕ್ತ ಎಂಬ ಪ್ರಮಾಣ ಪತ್ರವನ್ನೂ ನೀಡಲು ಆರಂಭಿಸಿದೆ. ಕೋವಿಡ್‌-19 ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡ ಜನರಿಗೆ ಈ ಪ್ರಮಾಣ ಪತ್ರವನ್ನು ನೀಡಲಿದ್ದು, ಅವರು ಹಿಂದಿನಂತೆ ಕೆಲಸಕ್ಕೆ ಮರಳಲು ಅವಕಾಶ ಮಾಡುವುದಾಗಿ ಅಲ್ಲಿನ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಜನರು ಮತ್ತೆ ಸೋಂಕಿಗೆ ತುತ್ತಾಗುವುದಿಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹಾಗಾಗಿ ಸೋಂಕು ಮುಕ್ತ ಎಂದು ಪ್ರಮಾಣ ಪತ್ರ ಕೊಡುವುದು ಅಸಮಂಜಸ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಒ) ಅಭಿಪ್ರಾಯ ಪಟ್ಟಿತ್ತು. ಜತೆಗೆ ಎಲ್ಲ ದೇಶಗಳಿಗೂ ಅಂಥದೊಂದು ಪದ್ಧತಿಯನ್ನು ಅನುಸರಿಸಬೇಡಿ ಎಂದು ಸಲಹೆ ನೀಡಿತ್ತು.ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸದ ಚಿಲಿ ಸರಕಾರ, ಪ್ರಮಾಣ ಪತ್ರ ನೀಡುತ್ತಿರುವುದು ಟೀಕೆಗೆ ಗುರಿಯಾಗಿದೆ. ಸೋಂಕು ಮುಕ್ತ ಪ್ರಮಾಣ ಪತ್ರಗಳನ್ನು ನೀಡುವುದರಿಂದ ಮತ್ತಷ್ಟು ದುಷ್ಪರಿಣಾಮಗಳು ಎದುರಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಅಪಾಯಕ್ಕೆ ತಳ್ಳುತ್ತಿದೆ ಎಂಬ ವಾದ ಕೇಳಿ ಬಂದಿದೆ.

ಆದರೆ ಈ ಟೀಕೆಯನ್ನು ತಳ್ಳಿಹಾಕಿರುವ ಸರಕಾರವು, “ಸೋಂಕಿನಿಂದ ಅನಾರೋಗ್ಯಕ್ಕೆ ತುತ್ತಾದ ವ್ಯಕ್ತಿ ಮತ್ತೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ ಎಂಬುದು ನಮಗೆ ತಿಳಿದಿದೆ. ಜನರಲ್ಲಿ ಕೋವಿಡ್‌ -19 ಅನ್ನು ಮಣಿಸುವ ಶಕ್ತಿ ಇದೆಯೇ ಎಂಬುದನ್ನು ಪ್ರಮಾಣಪತ್ರ ಖಚಿತಪಡಿಸುವುದಿಲ್ಲ.

ಬದಲಾಗಿ ಅವರು ರೋಗದಿಂದ ಚೇತರಿಸಿಕೊಂಡಿದ್ದು, ಕ್ವಾರಂಟೇನ್‌ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂಬುದನ್ನು ಮಾತ್ರ ಖಚಿತಪಡಿಸಲಿದೆ ಎಂದು ತಿಳಿಸಿದ್ದಾರೆ.

ಚಿಲಿಯಲ್ಲಿ ಇದುವರೆಗೆ 13 000 ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 189 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 7 ಸಾವಿರದಷ್ಟು ಮಂದಿ ಗುಣಮುಖರಾಗಿದ್ದಾರೆ. ಮಾರ್ಚ್‌ 20 ರ ಬಳಿಕ ಸೋಂಕು ಪ್ರಕರಣ ಪತ್ತೆಯಾಗುವ ಸಂಖ್ಯೆ ಹೆಚ್ಚುತ್ತಿದೆ.

ಟಾಪ್ ನ್ಯೂಸ್

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

1

Abu Dhabi: ಅಬುಧಾಬಿಯಲ್ಲಿ ಬಿಯರ್‌ ಅಂಗಡಿ!

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.