ಚೀನ, ದ.ಕೊರಿಯಾದಲ್ಲಿ ಮತ್ತೆ ಕೋವಿಡ್ ಸೋಂಕಿನ ಹಾವಳಿ


Team Udayavani, Jun 28, 2020, 2:01 PM IST

ಚೀನ, ದ.ಕೊರಿಯಾದಲ್ಲಿ ಮತ್ತೆ ಕೋವಿಡ್ ಸೋಂಕಿನ ಹಾವಳಿ

ಮಣಿಪಾಲ : ಇತ್ತೀಚೆಗೆಯಷ್ಟೇ ಕೋವಿಡ್‌ ವೈರಸ್‌ ದಾಳಿ ಕಡಿಮೆಯಾಗಿ ಸ್ವಲ್ಪ ನಿರಾಳವಾಗುತ್ತಿದ್ದ ರಾಷ್ಟ್ರಗಳಲ್ಲಿ ಎರಡನೇ ಹಂತದ ಸೋಂಕು ಹಾವಳಿ ಪ್ರಾರಂಭವಾಗಿದೆ. ಅದರಲ್ಲೂ ಪ್ರಮುಖವಾಗಿ ಕೋವಿಡ್‌-19 ತವರೂರು ಎಂದೇ ಕುಖ್ಯಾತಿ ಪಡೆದಿದ್ದ ಚೀನ, ದಕ್ಷಿಣ ಕೊರಿಯಾಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಲೇ ಇದೆ. ಇತ್ತ ಅಮೆರಿಕದಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗದಿರುವುದು ಆಂತಕ ಮೂಡಿಸಿದೆ.

ಡ್ರ್ಯಾಗನ್‌ಗೆ ತಟ್ಟಿದ 2ನೇ ಸೋಂಕಿನ ಅಲೆ
ಚೀನದಲ್ಲೂ 2ನೇ ಬಾರಿಗೆ ಸೋಂಕು ಹರಡುತ್ತಿದ್ದು, ನಿರಂತರವಾಗಿ ಪಾಸಿಟಿವ್‌ ಪ್ರಕರಣಗಳು ದಾಖಲಾಗುತ್ತಲೇ ಇವೆ. ಶನಿವಾರ ಒಂದೇ ದಿನ 21 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳು ಸ್ಥಳೀಯ ಹಿನ್ನೆಲೆಯದ್ದೇ ಆಗಿವೆ. ಈ ಹಿನ್ನಲೆಯಲ್ಲಿ ಆಡಳಿತಾಧಿಕಾರಿಗಳು ಮತ್ತೂಮ್ಮೆ ಲಾಕ್‌ಡೌನ್‌ ಮಂತ್ರದ ಮೊರೆ ಹೋಗಿದ್ದು, ಕೆಲ ಸ್ಥಳೀಯ ಪ್ರದೇಶಳಗಳ ಅಂಗಡಿ ಮುಂಗಟ್ಟುಗಳು ಸೇರಿದಂತೆ ಶಾಲೆ ಕಾಲೇಜುಗಳನ್ನು ಬಂದ್‌ ಮಾಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚೀನದಲ್ಲಿ ಎರಡಂಕಿಯ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.

ದಕ್ಷಿಣ ಕೊರಿಯಾಕ್ಕೆ ತಲೆನೋವು
ಸಿಯೋಲ್‌ ನಗರದಲ್ಲಿ ಎರಡನೇ ಹಂತದ ಸೋಂಕಿನ ಹಾವಳಿ ಪ್ರಾರಂಭವಾಗಿದ್ದು, ಪ್ರತ್ಯೇಕ ಸಿಯೋಲ್‌ ಸುತ್ತ ಮುತ್ತ ಪ್ರದೇಶಗಳಲ್ಲಿ ಸುಮಾರು 35 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಪ್ರಮುಖವಾಗಿ ದೇಶದಲ್ಲಿ ಪಬ್‌, ರೆಸ್ಟೋರೆಂಟ್‌, ಚರ್ಚ್‌ ಸೇರಿದಂತೆ ವಲಸೆ ಕಾರ್ಮಿಕರಿಂದ ಸೋಂಕು ಹರಡುತ್ತಿದ್ದು, ಆರೋಗ್ಯಾಧಿಕಾರಿಗಳಿಗೆ ಸೋಂಕಿನ ಮೂಲ ಪತ್ತೆ ಹಚ್ಚುವುದೇ ದೊಡ್ಡ ತಲೆ ನೋವಾಗಿದೆ.

ಅಮೆರಿಕದಲ್ಲಿ ಲಗಾಮಿಲ್ಲ
ಅಮೆರಿಕದ ಪ್ರಕರಣಗಳ ಸಂಖ್ಯೆ 25 ಲಕ್ಷ ದಾಟಿದ್ದು, ಸೋಂಕು ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ 20-40 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಮೃತರಾದವರ ಸಂಖ್ಯೆಯಲ್ಲೂ ಮೊದಲ ಸ್ಥಾನದಲ್ಲಿದೆ. ಈವರೆಗೆ 1.26 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದಾಗಿ ಮೃತರಾಗಿದ್ದಾರೆ. ಈಗಿನ ಲೆಕ್ಕಾಚಾರದ ಪ್ರಕಾರ ಸಾವಿನ ಪ್ರಮಾಣ 2 ಲಕ್ಷ ದಾಟುವ ಸಂಭವವಿದೆ. ಪ್ರತಿಯೋರ್ವ ಸೋಂಕಿತನಿಂದ ಕನಿಷ್ಠ 10 ಮಂದಿಗೆ ಸೋಂಕು ತಗುಲುತ್ತಿದೆ ಎಂದು ವರದಿ ಹೇಳಿದೆ. ಇನ್ನು ಹೆಚ್ಚಿನ ಸಂಖ್ಯೆಯ ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಸರಕಾರ ವಿಫ‌ಲವಾಗಿದ್ದು, ದೇಶದ ಶೇ. 6ರಷ್ಟು ಜನರು ಸೋಂಕಿಗೆ ತುತ್ತಾಗಿದ್ದರೂ ಲಾಕ್‌ಡೌನ್‌ ನಿಯಮಗಳನ್ನು ಹಿಂದೆಗೆದುಕೊಳ್ಳಲಾಗಿದೆ ಎಂದು ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆಂಡ್‌ ಪ್ರಿವೆನ್‌ಶನ್‌ (ಸಿಡಿಸಿ) ನಿರ್ದೇಶಕ ಡಾ.ರಾಬರ್ಟ್‌ ರೆಡ್‌ ಪೀಲ್ಡ… ತಿಳಿಸಿ¨ªಾರೆ. ಅಮೆರಿಕದಲ್ಲಿ ಕೋವಿಡ್‌-19 ಸೋಂಕಿನ ಅಲೆ ಶುರುವಾಗಿ ಕಳೆದೊಂದು ತಿಂಗಳಲ್ಲಿ 10 ಸಾವಿರಕ್ಕಿಂತ ಹೆಚ್ಚೇ ಪ್ರಕರಣಗಳು ನಿತ್ಯವೂ ಕಂಡುಬಂದಿದ್ದವು. ಇದು ಅಲ್ಲಿನ ಆಡಳಿತವನ್ನು ಚಿಂತೆಗೀಡು ಮಾಡಿದೆ.

ಸೋಂಕಿಗೆ ಕಡಿವಾಣ ಹಾಕಿದ್ದೇವೆ ಎಂದು ಬಿಂಬಿಸಿಕೊಳ್ಳುತ್ತಿರುವ ಅಭಿವೃದ್ಧಿ ರಾಷ್ಟ್ರಗಳ ವಾಸ್ತವ ಚಿತ್ರಣ ಬೇರೆಯದ್ದೇ ಆಗಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.