ಕೋವಿಡ್ ವೈರಸ್‌ನ ಮೂಲ ಪತ್ತೆಗೆ ಚೀನ ಸಹಕರಿಸಲಿ


Team Udayavani, Jun 14, 2021, 6:55 AM IST

ಕೋವಿಡ್ ವೈರಸ್‌ನ ಮೂಲ ಪತ್ತೆಗೆ ಚೀನ ಸಹಕರಿಸಲಿ

ಬ್ರಿಟನ್‌ನ ಬ್ರಿಟಿಷ್‌ ಆಫ್ ಕಾರ್ನ್ವಾಲ್‌ನಲ್ಲಿ ನಡೆಯುತ್ತಿರುವ ಜಿ-7 ರಾಷ್ಟ್ರಗಳ ಶೃಂಗದಲ್ಲಿ ಕೊರೊನಾ ಸಾಂಕ್ರಾಮಿಕದ ವಿರುದ್ಧದ ಹೋರಾಟ, ಲಸಿಕೆ ಉತ್ಪಾದನೆ, ಲಸಿಕೆಯ ಕಚ್ಚಾ ಪದಾರ್ಥಗಳ ಆಮದು ಮತ್ತು ರಫ್ತು ಮೇಲಣ ನಿರ್ಬಂಧಗಳ ಕುರಿತಂತೆ ವಿಸ್ತೃತವಾಗಿ ಚರ್ಚೆ ನಡೆದಿದೆ. ಕೋವಿಡ್‌ ವಿರುದ್ಧದ ಸಮರದಲ್ಲಿ ಪರಸ್ಪರ ಕೈಜೋಡಿಸಲು ಜಿ-7 ರಾಷ್ಟ್ರ ಗಳ ನಾಯಕರು ಸಮ್ಮತಿಸಿದ್ದಾರಲ್ಲದೆ ಬಡ ರಾಷ್ಟ್ರಗಳಿಗೆ ಒಂದು ಶತಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ನೀಡಲು ತೀರ್ಮಾನಿಸಿದ್ದಾರೆ.

ಇದರ ನಡುವೆ ಈ ಶೃಂಗದಲ್ಲಿ ಕೊರೊನಾ ವೈರಸ್‌ನ ಮೂಲ ಪತ್ತೆಯ ಕುರಿತಂತೆ ವಿಶ್ವದ ಪ್ರಬಲ ರಾಷ್ಟ್ರಗಳ ನಾಯಕರು ಸಮಗ್ರವಾಗಿ ಚರ್ಚೆ ನಡೆಸಿದ್ದು ವಿಶ್ವದ ಭವಿಷ್ಯದ ದೃಷ್ಟಿಯಿಂದ ಈ ಬಗ್ಗೆ ವಿಸ್ತೃತ ತನಿಖೆ ಮತ್ತು ಅಧ್ಯಯನ ನಡೆಸುವ ಅಗತ್ಯವಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. 2019ರಲ್ಲಿ ಕೊರೊನಾ ವೈರಸ್‌ ಚೀನದ ವುಹಾನ್‌ನಲ್ಲಿನ ಮಾಂಸ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಆ ಬಳಿಕ ವಾರಗಳ ಅಂತರದಲ್ಲಿ ಚೀನ ಮಾತ್ರವಲ್ಲದೆ ವಿಶ್ವದ ವಿವಿಧ ದೇಶಗಳಿಗೆ ಹರಡಲ್ಪಟ್ಟಿತ್ತು. ಸೋಂಕು ಪತ್ತೆ ಯಾಗಿ ಸರಿಸುಮಾರು ಒಂದೂವರೆ ವರ್ಷ ಕಳೆದರೂ ಸೋಂಕಿನ ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ವಿಶ್ವದ ಕೆಲವೊಂದು ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ರೂಪಾಂತರ ಹೊಂದಿ ಆರೇಳು ಅಲೆಗಳನ್ನು ಕಂಡಿದ್ದರೆ ಭಾರತದಲ್ಲಿ ಈಗಷ್ಟೇ ಎರಡನೇ ಅಲೆ ನಿಯಂತ್ರಣಕ್ಕೆ ಬರತೊಡಗಿದೆ.

ಆರಂಭದಲ್ಲಿ ಈ ವೈರಸ್‌ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿದೆ ಎಂದು ಹೇಳಲಾಗಿತ್ತು. ಆದರೆ ಸೋಂಕಿನ ತೀವ್ರತೆ ಮತ್ತು ಚೀನದ ವರ್ತ ನೆಗಳು ಈ ವೈರಸ್‌ನ ಮೂಲದ ಬಗೆಗೆ ಅನುಮಾನ ಮೂಡುವಂತೆ ಮಾಡಿ ದ್ದವು. ಮೊದಲನೇ ಅಲೆಯ ವೇಳೆಯೇ ಕೊರೊನಾ ವೈರಸ್‌ ಚೀನದ ಪ್ರಯೋಗಾಲಯದಲ್ಲಿ ಸೃಷ್ಟಿಯಾದ ಜೈವಿಕ ವೈರಾಣು ಎಂದು ಕೆಲ ವೊಂದು ವಿಜ್ಞಾನಿಗಳು ಸಂಶಯವನ್ನು ವ್ಯಕ್ತಪಡಿಸಿದ್ದರು. ಆದರೆ ಚೀನ ಇದನ್ನು ತಳ್ಳಿಹಾಕಿತ್ತು.

ತಿಂಗಳ ಹಿಂದೆ ರಕ್ಷಣ ತಜ್ಞರ ತಂಡ ಕೊರೊನಾ ವೈರಸ್‌ ಚೀನದ ವುಹಾ ನ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಯಿಂದ ಸೋರಿಕೆಯಾಗಿತ್ತು ಎಂಬ ಬಗ್ಗೆ ಕೆಲವೊಂದು ಸಾಕ್ಷ್ಯಾಧಾರಗಳನ್ನು ಬಹಿರಂಗಗೊಳಿಸಿತ್ತು. ಚೀನದ ವಿಜ್ಞಾನಿಗಳು ವಿಶ್ವದ ಇತರ ರಾಷ್ಟ್ರಗಳ ವಿರುದ್ಧ ಜೈವಿಕ ಸಮರಕ್ಕೆ ಸಜ್ಜಾ ಗುತ್ತಿದ್ದು ಇದರ ಭಾಗವಾಗಿ ಪ್ರಯೋಗಾಲಯದಲ್ಲಿ ಈ ವೈರಾಣು ವನ್ನು ಅಭಿವೃದ್ಧಿಪಡಿಸಲಾಗುತ್ತಿತ್ತು. ಈ ವೇಳೆ ವೈರಾಣು ಸೋರಿಕೆಯಾಗಿದೆ ಎಂದು ಆರೋಪಿಸಿತ್ತಲ್ಲದೆ ಕೆಲವೊಂದು ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿತ್ತು. ಇದಾದ ಬಳಿಕ ಕೊರೊನಾ ವೈರಾಣುವಿನ ಮೂಲ ಪತ್ತೆಗಾಗಿ ಚೀನದ ಮೇಲೆ ಜಾಗತಿಕವಾಗಿ ಒತ್ತಡ ಹೆಚ್ಚುತ್ತಲೇ ಸಾಗಿದ್ದು ಈ ನಿಟ್ಟಿನಲ್ಲಿ ಅಮೆರಿಕ, ಬ್ರಿಟನ್‌ ಸಹಿತ ವಿಶ್ವದ ಪ್ರಬಲ ರಾಷ್ಟ್ರಗಳು ನಿರಂತರ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿವೆ. ಈಗ ಜಿ-7ರಾಷ್ಟ್ರಗಳ ಶೃಂಗದಲ್ಲೂ ನಾಯಕರು ಈ ವಿಚಾರವಾಗಿ ಸ್ಪಷ್ಟ ಅಧ್ಯ ಯನ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಯೂ ದನಿಗೂಡಿಸಿದೆ. ಇವೆಲ್ಲದರ ಹೊರತಾಗಿಯೂ ಚೀನ ಇವೆಲ್ಲ ಅಸಂ ಬದ್ಧ ಎನ್ನುವ ಮೂಲಕ ತನ್ನ ಮೊಂಡುವಾದವನ್ನು ಮುಂದುವರಿಸಿದೆ. ಈ ಬಾರಿ ಚೀನ ಸೋಂಕಿನ ಮೂಲ ಪತ್ತೆಗೆ ಜಾಗತಿಕ ಸಮುದಾಯ ದೊಂದಿಗೆ ಕೈಜೋಡಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಏಕಾಂಗಿ ಯಾಗಲಿದೆ ಮಾತ್ರವಲ್ಲದೆ ಗಂಭೀರವಾದ ಪರಿಣಾಮಗಳನ್ನು ಎದುರಿಸ ಬೇಕಾದ ಪರಿಸ್ಥಿತಿಯನ್ನು ಮೈಮೇಲೆ ಎಳೆದುಕೊಳ್ಳಲಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.