China: ಅಕ್ಸಾಯಿ ಚಿನ್‌ನಲ್ಲಿ ಚೀನ ಕಳ್ಳ ಸುರಂಗ

ಉಪಗ್ರಹ ಚಿತ್ರಗಳಿಂದ ಡ್ರ್ಯಾಗನ್‌ ನಾಟಕ ಬಯಲು | ದೆಪ್ಸಾಂಗ್‌ನಿಂದ 60 ಕಿ.ಮೀ. ದೂರದಲ್ಲಿ ನಿರ್ಮಾಣ

Team Udayavani, Aug 30, 2023, 11:43 PM IST

aski

ಹೊಸದಿಲ್ಲಿ: ದೇಶದ ಅವಿಭಾಜ್ಯ ಅಂಗವಾಗಿ ರುವ ಅರುಣಾಚಲ ಪ್ರದೇಶವನ್ನು ತನಗೆ ಸೇರಿದ್ದು ಎಂದು ನಕ್ಷೆ ಪ್ರಕಟಿಸಿದ ಕಪಟಿ ಚೀನ, ಮತ್ತೂಂದು ದುಸ್ಸಾಹಸ ಪ್ರದರ್ಶಿ ಸಿದೆ. ಭಾರತಕ್ಕೆ ಬಹುತೇಕ ಸೇರಿರುವ ಅಕ್ಸಾಯಿ ಚಿನ್‌ನಲ್ಲಿ ರಹಸ್ಯವಾಗಿ ಸುರಂಗ ಮಾರ್ಗ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಪಗ್ರಹ ಛಾಯಾಚಿತ್ರಗಳು ಮತ್ತು ಮಾಹಿತಿ ಗಳಿಂದ ದೃಢಪಟ್ಟಿದೆ. ಅಲ್ಲಿ ಯೋಧರಿಗೆ ನಿಲ್ಲಲು ಮತ್ತು ಭಾರೀ ಪ್ರಮಾಣ ದಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ಮಾಡುವ ನಿಟ್ಟಿನಲ್ಲಿ ವ್ಯವಸ್ಥೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದೂ ದೃಢಪಟ್ಟಿದೆ.

ಪೂರ್ವ ಲಡಾಖ್‌ನ ದೆಪ್ಸಾಂಗ್‌ ತಪ್ಪಲು ಪ್ರದೇಶದಿಂದ 60 ಕಿ.ಮೀ. ಉತ್ತರದಲ್ಲಿರುವ ನದಿಯ ಸಮೀಪ ಈ ರಹಸ್ಯ ಸುರಂಗ ಮತ್ತು ಬಂಕರ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಟ್ಟು ಹನ್ನೊಂದು ಸ್ಥಳಗಳಲ್ಲಿ ಇಂಥ ಸುರಂಗ ಮತ್ತು ಬಂಕರ್‌ಗಳ ನಿರ್ಮಾಣ ಮಾಡಲಾಗುತ್ತಿದೆ. ನದಿಯ ಎರಡೂ ಕಿನಾರೆಗಳಲ್ಲಿ ನಿರ್ಮಾಣ ಕಾರ್ಯ ಶುರುವಾಗಿದೆ. ರಕ್ಷಣ ಕ್ಷೇತ್ರದ ವಿಶೇಷ ತಜ್ಞರ ಪ್ರಕಾರ ಭಾರತೀಯ ಸೇನೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳಿಂದ ಹತಾಶೆಗೊಂಡ ಚೀನ ಇಂಥ ಕ್ರಮ ಕೈಗೊಂಡಿದೆ.

ಭಾರತೀಯ ವಾಯುಪಡೆ ಕೂಡ ಲಡಾಖ್‌ನಲ್ಲಿ ತನ್ನ ನೆಲೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ನ್ಯೋಮಾ ಎಂಬಲ್ಲಿ ಇರುವ ವಿಮಾನ ಇಳಿದಾಣ ಪ್ರದೇಶವನ್ನು ಅತ್ಯಾಧುನಿಕ ಗೊಳಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಕ್ಷಣ ವಿಶ್ಲೇಷಕ ಸ್ಯಾಮ್‌ ಟ್ರಿಕ್‌ “ಲಡಾಖ್‌ನಲ್ಲಿ ಭಾರತೀಯ ಸೇನೆ ನಡೆಸಲಿರುವ ಸಂಭಾವ್ಯ ದಾಳಿ ತಡೆಯುವ ನಿಟ್ಟಿನಲ್ಲಿ ಇಂಥ ಸಾಹಸ’ ಎಂದು ಹೇಳಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಕೂಡ ಲಡಾಖ್‌ ಪ್ರದೇಶದಲ್ಲಿ ಭಾರೀ ಪ್ರಮಾಣದ ಸೇನಾ ನಿಯೋಜನೆ ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಯನ್ನೂ ಮಾಡಿತ್ತು.

ಸಾಮಾನ್ಯ ಕ್ರಮವಂತೆ!: ಅರುಣಾಚಲ ಪ್ರದೇಶದ ಕೆಲವು ಭಾಗಗಳನ್ನು ತನ್ನ ನಕ್ಷೆಗೆ ಸೇರಿಸಿದ್ದನ್ನು ಚೀನ ತಣ್ಣಗೆ ಸಮರ್ಥಿಸಿಕೊಂಡಿದೆ. ಮಂಗಳವಾರ ಕೇಂದ್ರ ಸರಕಾರ ಚೀನ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಿಸಿಕೊಂಡು ನಕ್ಷೆಗೆ ಆಕ್ಷೇಪ ಮಾಡಿತ್ತು. ಅದಕ್ಕೆ ಬುಧವಾರ ಬೀಜಿಂಗ್‌ನಲ್ಲಿ ಪ್ರತಿಕ್ರಿಯೆ ನೀಡಿದ ಚೀನ ವಿದೇಶಾಂಗ ಸಚಿವಾಲಯದ ವಕ್ತಾರರು, ನಕ್ಷೆ ಬಿಡುಗಡೆ ಮಾಡುವ ಪ್ರಕ್ರಿಯೆ ಹೊಸತೇನೂ ಅಲ್ಲ. ಇವೆಲ್ಲ ಮಾಮೂಲಿ ಪ್ರಕ್ರಿಯೆ ಎಂದು ನಿರ್ಲಕ್ಷ್ಯದ ಉತ್ತರ ನೀಡಿದೆ.

ಕಾಂಗ್ರೆಸ್‌-ಚೀನ ನಡುವೆ ಒಪ್ಪಂದ ಆಗಿದೆಯಾ?
ಹೊಸದಿಲ್ಲಿ: ಲಡಾಖ್‌ನ ಹೆಚ್ಚಿನ ಪ್ರದೇಶವನ್ನು ಚೀನ ಅತಿಕ್ರಮಿಸಿಕೊಂಡಿದೆ ಎಂಬ ವಯನಾಡ್‌ ಸಂಸದ ರಾಹುಲ್‌ ಗಾಂಧಿಯವರ ಹೇಳಿಕೆ ಪೂರ್ಣ ಸುಳ್ಳು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ. ಹೊಸದಿಲ್ಲಿ ಯಲ್ಲಿ ಮಾತನಾಡಿದ ಅವರು, “ನಮ್ಮ ದೇಶದ ನೆಲವನ್ನು ಚೀನ ಅತಿ ಕ್ರಮಿಸಿದ್ದು ಜವಾಹರ್‌ಲಾಲ್‌ ನೆಹರೂ ಕಾಲದಲ್ಲಿ ಎಂಬ ವಿಚಾರ ವನ್ನು ರಾಹುಲ್‌ ಗಾಂಧಿ ತಿಳಿದ ು ಕೊಳ್ಳಲಿ. ಅನಂತರ ಆ ಪ್ರದೇಶದಲ್ಲಿ ಚೀನ ತನ್ನ ಕುತ್ಸಿತ ಚಟುವಟಿಕೆಗಳನ್ನು ನಡೆಸುತ್ತಿತ್ತು. ಚೀನ ನಮ್ಮ ದೇಶದ ನೆರೆಯ ರಾಷ್ಟ್ರ ವಾಗಿ ರುವುದು ಮತ್ತು ಸ್ವಾತಂತ್ರಾéನಂತರ ಕಾಂಗ್ರೆಸ್‌ ನಡೆಸಿದ ಪಾಪವೇ ಹಾಲಿ ಸಮಸ್ಯೆಗೆ ಕಾರಣ. ಟಿಬೆಟ್‌ ವಿಚಾರದಿಂದ ಶುರುವಾಗಿ ಇದುವರೆಗೆ ಅವರು ಇದೇ ನಿಲುವನ್ನೇ ಅನುಸರಿಸಿದರು’ ಎಂದು ಆರೋಪಿಸಿದರು. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಿಗೆ ನೀತಿ ನಿಯಮಗಳ ಅರಿವೇ ಇಲ್ಲ ಎಂದರು ಸಚಿವ ಜೋಶಿ.

ಒಪ್ಪಂದ ಮಾಡಿಕೊಂಡಿವೆಯೇ?: ದೇಶದ ರಕ್ಷಣ ಪಡೆಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾತನಾಡುವ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಚೀನದ ಕಮ್ಯೂನಿಸ್ಟ್‌ ಪಾರ್ಟಿ ನಡುವೆ 2008ರಲ್ಲಿ ಒಪ್ಪಂದ ವಾಗಿ ದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಅದರಲ್ಲಿ ದೇಶದ ಹಿತಾಸಕ್ತಿಗೆ ವಿರುದ್ಧ ವಾಗಿ ಕೆಲಸ ಮಾಡುವಂಥ ಅಂಶಗಳಿ ವೆಯೇ ಎಂದು ಪಕ್ಷದ ವಕ್ತಾರ ಗೌರವ್‌ ಭಾಟಿಯಾ ಪ್ರಶ್ನೆ ಮಾಡಿದ್ದಾರೆ. ನೆಹರೂ ಪ್ರಧಾನಿ ಯಾಗಿದ್ದಾಗ ಚೀನ ಸೇನೆ ದೇಶದ 43 ಸಾವಿರ ಚದರ ಕಿ.ಮೀ. ಪ್ರದೇಶವನ್ನು ವಶಪಡಿಸಿಕೊಂಡಿತು. ರಾಹುಲ್‌ ಗಾಂಧಿ ಯವರು ಈ ವಿಚಾರಕ್ಕೆ ಸಂಬಂಧಿ ಸಿದಂತೆ ನೆಹರೂ ಅವರನ್ನು ದೇಶ ದ್ರೋಹಿ ಎಂದು ಪರಿಗಣಿಸುವರೇ ಎಂದು ಪ್ರಶ್ನಿಸಿದರು.

2008ರಲ್ಲಿ ಕಾಂಗ್ರೆಸ್‌ ಮತ್ತು ಚೀನದ ಕಮ್ಯೂನಿಸ್ಟ್‌ ಪಕ್ಷದ ನಡುವೆ ಆಗಿರುವ ಒಪ್ಪಂದದ ಬಗ್ಗೆ ನಾಯಕರು ವಿವರಗಳನ್ನು ಬಹಿರಂಗಪಡಿಸಲಿ. ಒಪ್ಪಂದದಲ್ಲಿ ರಾಹುಲ್‌ ಅವರು ದೇಶದ ವಿರುದ್ಧ ಗೂಢಚರ್ಯೆ ಮಾಡುವ‌ ಮತ್ತು ಯೋಧರ ಸ್ಥೈರ್ಯ ಕುಗ್ಗಿಸುವಂತೆ ಮಾತನಾಡುವಂತೆ ಮಾಡುವ ಅಂಶ ಒಳಗೊಂಡಿರಬಹುದು. ಜತೆಗೆ ದೇಶದ ಪ್ರಧಾನಿಯನ್ನು ಅವಹೇಳನ ಮಾಡುವ ವಿಚಾರವೂ ಇದೆಯೇ ಎಂದು ಭಾಟಿಯಾ ಪ್ರಶ್ನೆ ಮಾಡಿದ್ದಾರೆ.

ಚೀನ ಹಿಡಿತ ಇಡೀ ಲಡಾಖ್‌ಗೆ ಗೊತ್ತಿದೆ: ರಾಹುಲ್‌
ಅರುಣಾಚಲ ಪ್ರದೇಶ ಚೀನ ವ್ಯಾಪ್ತಿಗೆ ಸೇರಿದ ಬಗ್ಗೆ ನಕ್ಷೆ ಬಿಡುಗಡೆ ಮಾಡಿರುವ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಬೇಕು ಎಂದು ವಯನಾಡ್‌ ಸಂಸದ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಲಡಾಖ್‌ನಲ್ಲಿ ಒಂದು ಇಂಚು ನೆಲವನ್ನೂ ಚೀನ ಅತಿಕ್ರಮಿಸಿಕೊಂಡಿಲ್ಲ ಎಂದು ಪ್ರಧಾನಿ ಹೇಳುತ್ತಿರುವುದೆಲ್ಲ ಸುಳ್ಳು. ಅಲ್ಲಿನ ಪ್ರದೇಶ ಚೀನ ವಶದಲ್ಲಿರುವುದು ಲಡಾಖ್‌ನ ಎಲ್ಲರಿಗೂ ಗೊತ್ತು. ಮ್ಯಾಪ್‌ ವಿಚಾರ ನಿಜಕ್ಕೂ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಪ್ರತಿಕ್ರಿಯೆ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.