ಚಿತ್ತಾಪುರ: ಗುಂಡು ಹೊಡೆದುಕೊಂಡು ಪೋಲಿಸ್ ಪೇದೆ ಅತ್ಮಹತ್ಯೆ
Team Udayavani, May 4, 2023, 1:47 PM IST
ವಾಡಿ: ಚುನಾವಣೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೋರ್ವರು ಗುಂಡು ಹೊಡೆದುಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರ ಗುರುವಾರ ಚಿತ್ತಾಪುರ ಪಟ್ಟಣದಲ್ಲಿ ಸಂಭವಿಸಿದೆ.
ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 2012/23ನೇ ಬ್ಯಾಚ್ ನ ಪೇದೆ, ಶಹಾಬಾದ ಮಡ್ಡಿ ಏರಿಯಾ ನಿವಾಸಿ ಮಲ್ಲಿಕಾರ್ಜುನ ಪತ್ತೇಪೂರ (38) ಮೃತಪಟ್ಟವರು.
ಚಿತ್ತಾಪುರ ತಹಶಿಲ್ದಾರರ ಕಚೇರಿಯಲ್ಲಿ ಚುನಾವಣೆ ಕರ್ತವ್ಯದಲ್ಲಿದ್ದ ಪೇದೆ ಮಲ್ಲಿಕಾರ್ಜುನ, ಇತರ ಸಿಬ್ಬಂದಿಗಳೊಂದಿಗೆ ಬುಧವಾರ ರಾತ್ರಿ ಗಸ್ತು ತಿರುಗುತ್ತಿದ್ದರು. ಮಧ್ಯರಾತ್ರಿ ಸುಮಾರು 2.30 ಗಂಟೆಗೆ ತಹಶಿಲ್ದಾರ್ ಕಚೇರಿಯ ಕಟ್ಟಡದ ಮೇಲೆ ಹೋಗಿದ್ದಾರೆ ಎನ್ನಲಾಗಿದ್ದು, ಬೆಳಗಿನ ಜಾವ ಕೈಯಲ್ಲಿ ಬಂದೂಕು ಇದ್ದು, ಗಂಟಲಿನ ಮೂಲಕ ತಲೆಯಿಂದ ಗುಂಡು ಪಾರಾದ ಸ್ಥಿತಿಯಲ್ಲಿ ಪೊಲೀಸ್ ಪೇದೆಯ ಮೃತದೇಹ ಪತ್ತೆಯಾಗಿದೆ.
ಕಸ ಗುಡಿಸಲು ಹೋದ ಪೌರಕಾರ್ಮಿಕ ಮಹಿಳೆಯೊಬ್ಬರಿಂದ ಘಟನೆ ಬೆಳಕಿಗೆ ಬಂದಿದೆ. ಇದು ಕೊಲೆಯೋ ಅಥವ ಆತ್ಮಹತ್ಯೆಯೋ ಎಂಬುದರ ನಿಖರವಾಗಿ ತಿಳಿದುಬಂದಿಲ್ಲ. ಘಟನೆಯಿಂದ ಖಾಕಿ ಪಾಳೆಯದಲ್ಲಿ ತಲ್ಲಣ ಉಂಟುಮಾಡಿದೆ.
ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂತ್, ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್ ಐ ನಂದಕುಮಾರ, ತಹಶಿಲ್ದಾರ ಪಾಷಾವಲಿ ಭೇಟಿ ನೀಡಿದ್ದಾರೆ. ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ