ಸಿಟಿ ಬಸ್ ಪ್ರಯಾಣ ದರ ಪರಿಷ್ಕರಣೆ ಸಾಧ್ಯತೆ
ಸಾರಿಗೆ ಪ್ರಾಧಿಕಾರ ಆಯುಕ್ತರ ನೇತೃತ್ವದಲ್ಲಿ ಬಸ್ ಮಾಲಕರ ಸಂಘದ ಸಭೆ
Team Udayavani, May 9, 2020, 6:07 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಕೋವಿಡ್-19 ಲಾಕ್ಡೌನ್ನಿಂದಾಗಿ ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರು ನಗರದಲ್ಲಿ ಸಿಟಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಬಸ್ ಓಡಾಟಕ್ಕೆ ಅನುಮತಿ ನೀಡಿದ ಬಳಿಕ ಬಸ್ ಪ್ರಯಾಣ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.
ಕಳೆದ ಕೆಲವು ತಿಂಗಳ ಹಿಂದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಖಾಸಗಿ ಸರ್ವೀಸ್-ಸಿಟಿ ಬಸ್ಗಳ ಪ್ರಯಾಣ ದರ ಹೆಚ್ಚಿಸುವಂತೆ ಬಸ್ ಮಾಲಕರ ಒಕ್ಕೂಟವು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಕೋವಿಡ್-19 ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಸಾರಿಗೆ ಪ್ರಾಧಿಕಾರ ಆಯುಕ್ತರ ನೇತೃತ್ವದಲ್ಲಿ ಬಸ್ ಮಾಲಕರ ಸಂಘದ ಸಭೆ ನಡೆದಿದ್ದು, ಇದರಲ್ಲಿ ಬಸ್ ದರ ಪರಿಷ್ಕರಣೆ ಕುರಿತಂತೆ ತೀರ್ಮಾನಕ್ಕೆ ಬರಲಾಗಿದೆ.
ರಾಜ್ಯ ಸರಕಾರ 2013ರಿಂದ ಸರ್ವೀಸ್ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಲಿಲ್ಲ. ಆದರೆ, ಡಿಸೇಲ್ ಮೇಲಿನ ಸೆಸ್ ದರ ಆಧಾರದಲ್ಲಿ 2018ರ ಎಪ್ರಿಲ್ನಲ್ಲಿ ಮಂಗಳೂರಿನಲ್ಲಿ ಓಡಾಡುವ ಸಿಟಿ ಬಸ್ ದರ ಮೊದಲ ಸ್ಟೇಜ್ಗೆ 1 ರೂ.ನಂತೆ ಹೆಚ್ಚಿಸಲಾಗಿತ್ತು. ಅದೇ ರೀತಿ ಟೋಲ್ ದರ ಹೆಚ್ಚಳವಾದ ಕಾರಣ ಟೋಲ್ ಮುಖಾಂತರ ಸಾಗುವ ಸರ್ವೀಸ್ ಬಸ್ ದರವನ್ನು ಕಳೆದ ಕೆಲವು ತಿಂಗಳ ಹಿಂದೆ ಪ್ರಥಮ ಸ್ಟೇಜ್ಗೆ 1 ರೂ. ಹೆಚ್ಚಳ ಮಾಡಲಾಗಿತ್ತು.
ಸ್ಟೇಜ್ಗೆ ಎರಡು ರೂ. ಹೆಚ್ಚಳಕ್ಕೆ ಮನವಿ
ಮಂಗಳೂರಿನಲ್ಲಿ ಓಡಾಡುವ ಖಾಸಗಿ ಬಸ್ಗಳಿಗೆ ಮೊದಲ ಸ್ಟೇಜ್ಗೆ 8 ರೂ. ದರ ನಿಗದಿಪಡಿಸಲಾಗಿದ್ದು, ಇದನ್ನು 10 ರೂ.ಗೆ ಏರಿಕೆ ಮಾಡಬೇಕೆಂಬ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ಸರ್ವೀಸ್ ಬಸ್ ಪ್ರಯಾಣದಲ್ಲಿ ಒಂದು ಕಿ.ಮೀ.ಗೆ ಒಬ್ಬ ಪ್ರಯಾಣಿಕರಿಂದ 1.2 ರೂ. ನಷ್ಟ ಉಂಟಾಗುತ್ತಿದೆ. ಅದನ್ನು ಸರಿದೂಗಿಸಲು ದರ ಪರಿಷ್ಕರಣೆ ಮಾಡಬೇಕೆಂಬ ಮನವಿಯನ್ನೂ ಮಾಡಲಾಗಿದೆ.
ನಿರ್ದೇಶನ ಬಂದಿಲ್ಲ
ಸಾರಿಗೆ ಆಯುಕ್ತರ ನೇತೃತ್ವದಲ್ಲಿ ಬಸ್ ಮಾಲಕರ ಸಂಘದ ಸಭೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ. ಈ ಸಭೆಯಲ್ಲಿ ಯಾವೆಲ್ಲ ವಿಷಯ ಚರ್ಚೆಯಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಬಸ್ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಸದ್ಯಕ್ಕೆ ಯಾವುದೇ ನಿರ್ದೇಶನ ಬಂದಿಲ್ಲ. ಈ ವಿಚಾರ ಆರ್ಟಿಇ ಸಭೆಯಲ್ಲಿ ನಿರ್ಧಾರವಾಗಲಿದೆ.
- ಆರ್.ಎಂ. ವರ್ಣೇಕರ್
ಮಂಗಳೂರು ಆರ್ಟಿಒ
ದರ ಪರಿಷ್ಕರಣೆಗೆ ಅವಕಾಶ
ಸಾರಿಗೆ ಪ್ರಾಧಿಕಾರ ಆಯುಕ್ತರ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆದಿದ್ದು, ಕೆಲವೊಂದು ಮಾರ್ಗಸೂಚಿ ನೀಡಿದ್ದಾರೆ. ಅದರಂತೆ, ಲಾಕ್ಡೌನ್ ತೆರವು ಬಳಿಕ ಬಸ್ ಸಂಚಾರ ಅನುಮತಿ ನಿರ್ಧಾರ ಜಿಲ್ಲಾಡಳಿತ ನೀಡಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಶೇ. 50ರಷ್ಟು ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬಹುದು. ರಸ್ತೆ ತೆರಿಗೆ ವಿಸ್ತರಣೆಗೆ ಮಾತ್ರ ಅವಕಾಶ ನೀಡಲಾಗಿದೆ. ದರ ಪರಿಷ್ಕರಣೆಗೆ ಅವಕಾಶ ನೀಡಿದ್ದಾರೆ.
- ದಿಲ್ರಾಜ್ ಆಳ್ವ, ಅಧ್ಯಕ್ಷರು, ಸಿಟಿ ಬಸ್ ಮಾಲಕರ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ