ಮೂಲಸೌಕರ್ಯಗಳ ಕೊರತೆ : ಅಧಿಕಾರಿಗಳಿಂದ ಗಂಗಾವತಿಯ ಸಿಟಿ ಆಸ್ಪತ್ರೆಗೆ ಬೀಗ
Team Udayavani, Sep 20, 2021, 12:51 PM IST
ಗಂಗಾವತಿ : ಮೂಲಸೌಕರ್ಯಗಳ ಕೊರತೆ ಮತ್ತು ಆಸ್ಪತ್ರೆಯನ್ನು ನವೀಕರಣ ಮಾಡದ ಕಾರಣ ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯನ್ನು ಜಿಲ್ಲಾಡಳಿತ ಸೀಜ್ ಮಾಡಿದೆ.
ವಲಯದ ಬಹುತೇಕ ರೋಗಿಗಳ ಶಸ್ತ್ರಚಿಕಿತ್ಸೆ ಮತ್ತು ಚಿಕಿತ್ಸೆಯನ್ನು ನೀಡಿದ ಹೆಸರಿನಲ್ಲಿ ಪ್ರವೀಣ್ ಎನ್ನುವ ವೈದ್ಯರ ಹೆಸರಿದ್ದು ಇವರು ಸರ್ಕಾರಿ ವೈದ್ಯರಾಗಿರುವ ಕಾರಣ ಮತ್ತು ಸಿಟಿ ಆಸ್ಪತ್ರೆಯಲ್ಲಿ ಸರಕಾರದ ನಿಯಮಾವಳಿ ಪ್ರಕಾರ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಈಗಾಗಲೇ ಮೂಲ ಸೌಕರ್ಯ ಕಲ್ಪಿಸುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ ಸಿಟಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಜುಲೈ 2021ಕ್ಕೆ ಆಸ್ಪತ್ರೆಯ ನವೀಕರಣ ಮುಗಿದಿದ್ದು ನವೀಕರಣ ಇಲ್ಲದೆ ಆಸ್ಪತ್ರೆಯನ್ನ ನಡೆಸಲಾಗುತ್ತಿತ್ತು ಆನ್ ಲೈನ್ ಮೂಲಕ ನವೀಕರಣಕ್ಕಾಗಿ ಆಸ್ಪತ್ರೆಯವರು ಅರ್ಜಿ ಸಲ್ಲಿಸಿದ್ದು ಜಿಲ್ಲಾಡಳಿತ ಈ ಆಸ್ಪತ್ರೆಯನ್ನು ಶಾಶ್ವತವಾಗಿ ಮುಚ್ಚುವಂತೆ ತಾಲೂಕು ಆಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿಗೆ ನೋಟಿಸ್ ನೀಡಿತ್ತು .
ಸೋಮವಾರ ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ರಾಘವೇಂದ್ರ ತಹಸೀಲ್ದಾರ್ ಯು. ನಾಗರಾಜ ನೇತೃತ್ವದಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಗೆ ಬೀಗ ಹಾಕಿ ಸೀಲ್ ಮಾಡಿದ್ದಾರೆ.
ಇದನ್ನೂ ಓದಿ :ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರ ವಿರೋಧ
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಘವೇಂದ್ರ ಉದಯವಾಣಿ ಜತೆ ಮಾತನಾಡಿ ಜಿಲ್ಲಾಡಳಿತದ ಸೂಚನೆ ಮೇರೆಗೆ ನವೀಕರಣ ಮಾಡದೇ ಇರುವ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾದ ಕಾರಣ ಸಿಟಿ ಆಸ್ಪತ್ರೆಯನ್ನು ಬೀಗ ಹಾಕಿ ಸೀಲ್ ಮಾಡಲಾಗಿದೆ. ಇಲ್ಲಿದ್ದ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಗೆ ಬೀಗ ಹಾಕಿದ ಬಗೆ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA