CJI: ಮಹಿಳಾ ಜಡ್ಜ್ಗೇ ಕಿರುಕುಳ- ವರದಿ ಕೇಳಿದ ಸುಪ್ರೀಂ ಸಿಜೆಐ
ನನಗೆ ಸಾಯಲು ಅನುಮತಿ ಕೊಡಿ ಎಂದು ಕೇಳಿದ್ದ ಜಡ್ಜ್- ಮು.ನ್ಯಾ. ಚಂದ್ರಚೂಡ್ಗೆ ಬರೆದ ಎರಡು ಪುಟಗಳ ಪತ್ರ ವೈರಲ್
Team Udayavani, Dec 15, 2023, 8:22 PM IST
ನವದೆಹಲಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದ ವಿಚಾರ ಈಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ವರೆಗೆ ತಲುಪಿದೆ. “ನನಗೆ ಸಾಯಲು ಅನುಮತಿ ಕೊಡಿ” ಎಂದು ಪ್ರಧಾನವಾಗಿ ಉಲ್ಲೇಖೀಸಿ ಬರೆಯಲಾಗಿರುವ ಎರಡು ಪುಟಗಳ ಪತ್ರ ಜಾಲತಾಣಗಳಲ್ಲಿ ವೈರಲ್ ಆಗಿರುವಂತೆಯೇ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲಹಾಬಾದ್ ಹೈಕೋರ್ಟ್ನಿಂದ ಪ್ರಕರಣದ ತನಿಖೆಯ ಬಗ್ಗೆ ಯಥಾ ಸ್ಥಿತಿ ವರದಿಯನ್ನು ಕೇಳಿದ್ದಾರೆ.
ಮೂಲತಃ ಬಂದಾ ಜಿಲ್ಲೆಯ ಮಹಿಳಾ ನ್ಯಾಯಾಧೀಶೆಗೆ ಬಾರಾಬಂಕಿಯಲ್ಲಿ ಆರು ತಿಂಗಳ ಹಿಂದೆ ಕರ್ತವ್ಯದಲ್ಲಿ ಇದ್ದಾಗ ಪುರುಷ ನ್ಯಾಯಾಧೀಶರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. “ನನಗೆ ಇನ್ನು ಜೀವಿಸಬೇಕಾದ ಅಗತ್ಯ ಕಾಣುವುದಿಲ್ಲ. ಜೀವತ್ಛವವಾಗಿ ಒಂದೂವರೆ ವರ್ಷದಿಂದ ಇದ್ದೇನೆ. ಹೀಗಾಗಿ ಆತ್ಮವಿಲ್ಲದ ಮತ್ತು ಜೀವವಿಲ್ಲದ ದೇಹವನ್ನು ಗೌರವಯುತವಾಗಿ ಮುಕ್ತಾಯಗೊಳಿಸಲು ಅನುಮತಿ ನೀಡಿ’ ಎಂದು 2 ಪುಟಗಳ ಪತ್ರದಲ್ಲಿ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಖುದ್ದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರೇ ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ಗೆ ಪತ್ರ ಬರೆದು ಆಂತರಿಕ ದೂರು ಸಮಿತಿ (ಐಸಿಸಿ) ನಡೆಸುತ್ತಿರುವ ತನಿಖೆಯ ಯಥಾ ಸ್ಥಿತಿಯನ್ನು ನೀಡುವಂತೆ ಸೂಚನೆ ನೀಡಿದ್ದಾರೆ. ಅದರ ಆಧಾರದಲ್ಲಿ ಮುಂದಿನ ಕ್ರಮವನ್ನು ಸಿಜೆಐ ಕೈಗೊಳ್ಳುವ ಸಾಧ್ಯತೆಗಳಿವೆ.
ಇದೇ ವೇಳೆ, ಪ್ರಕರಣದ ಬಗ್ಗೆ ನ್ಯಾ. ಹೃಷಿಕೇಶ್ ರಾಯ್ ನೇತೃತ್ವದ ನ್ಯಾಯಪೀಠದ ಮುಂದೆ ಮಹಿಳಾ ನ್ಯಾಯಾಧೀಶೆ ಸಲ್ಲಿಸಿರುವ ಅರ್ಜಿಯೂ ಡಿ.13ರಂದು ವಿಚಾರಣೆಗೆ ಬಂದಿತ್ತು. ಈ ಸಂದರ್ಭದಲ್ಲಿ ಐಸಿಸಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವ ಆದೇಶ ನೀಡುವುದಿಲ್ಲ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ