ಈ ಅಧಿವೇಶನದಲ್ಲೇ ಕನ್ನಡ ನಾಮಫಲಕ ಮಸೂದೆ- ಅಧ್ಯಾದೇಶ ವಾಪಸ್ ಬೆನ್ನಲ್ಲೇ ಸ್ಪಷ್ಟೀಕರಣ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭರವಸೆ
Team Udayavani, Feb 1, 2024, 2:23 AM IST
ಬೆಂಗಳೂರು: ವಿಧಾನಸಭೆ ಅಧಿವೇಶನವು ಫೆ. 12ರಿಂದ ಆರಂಭ ವಾಗಲಿದ್ದು, ಅಧಿವೇಶನದಲ್ಲೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ ಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ದ್ದಾರೆ. ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಅಧ್ಯಾದೇಶಕ್ಕೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಅದಕ್ಕೆ ರಾಜ್ಯಪಾಲರು ಅಂಕಿತ ಹಾಕುವ ಮುನ್ನವೇ ಅಧಿವೇಶನ ಕರೆದ ಕಾರಣ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳಿಸಿದ್ದಾರೆ ಮುಖ್ಯಮಂತ್ರಿ ಹೇಳಿದರು.
ಈ ವಿಚಾರ ಸಂಬಂಧ ರಾಜಭವನ ಹಾಗೂ ಮುಖ್ಯಮಂತ್ರಿ ಕಚೇರಿ ಯಿಂದಲೇ ಸ್ಪಷ್ಟನೆ ನೀಡಲಾಗಿದೆ. ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನುವುದು ಸ್ಪಷ್ಟನೆಯ ಮುಖ್ಯ ಅಂಶ.
ಕೆಲವು ಪತ್ರಿಕಾ ವರದಿಗಳಲ್ಲಿ ರಾಜ್ಯ ಪಾಲರು ಅಧ್ಯಾದೇಶ ತಿರಸ್ಕರಿಸಿ ದ್ದಾರೆಂದು ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯಪಾಲರು ಅಧ್ಯಾದೇಶ ತಿರಸ್ಕರಿಸಿಲ್ಲ.
ಈ ಅಧ್ಯಾದೇಶವನ್ನು ರಾಜ್ಯಪಾಲರು ರಾಜಕೀಯ ಕಾರಣಕ್ಕಾಗಿ ವಾಪಸ್ ಕಳುಹಿಸಿಲ್ಲ. ಮಸೂದೆಗೆ ಯಾರಿಂದಲೂ ವಿರೋಧವಿಲ್ಲ. ನಾವು ಜ. 5ರಂದೇ ಅಧ್ಯಾದೇಶವನ್ನು ರಾಜಭವನಕ್ಕೆ ಕಳುಹಿಸಿದ್ದೆವು. ಆದರೆ ಅನಾರೋಗ್ಯ ಹಾಗೂ ಪ್ರವಾಸ ಹಿನ್ನೆಲೆಯಲ್ಲಿ ಸಹಿ ಹಾಕಲು ಸಾಧ್ಯವಾಗಿರಲಿಲ್ಲ. ಈಗ ಅಧಿವೇಶನ ಕರೆದಿರುವುದರಿಂದ ಉಭಯ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಿರಿ ಎಂದು ವಾಪಸ್ ಕಳಿಸಿದ್ದಾರೆ.
- ಶಿವರಾಜ್ ತಂಗಡಗಿ, ಕನ್ನಡ -ಸಂಸ್ಕೃತಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ