ಕುಂಬಳೆಯಲ್ಲಿ ಹೊಡೆದಾಟ:ಪೊಲೀಸರಿಂದ ಲಾಠಿ ಪ್ರಹಾರ
Team Udayavani, Mar 19, 2023, 5:20 AM IST
ಕುಂಬಳೆ: ಕುಂಬಳೆ ಬಸ್ ನಿಲ್ದಾಣ ಪರಿಸರದಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇಲ್ಲಿನ ಜಿಎಚ್ಎಸ್ಎಸ್ನ ವಿದ್ಯಾರ್ಥಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ವಿದ್ಯಾರ್ಥಿನಿಯರ ಬಗ್ಗೆ ಉಂಟಾದ ವಾಗ್ವಾದವೇ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಎಸೆಸೆಲ್ಸಿ ಪರೀಕ್ಷೆ ಮುಗಿದು ಪೇಟೆಗೆ ತಲುಪಿದ ಹತ್ತನೇ ವಿದ್ಯಾರ್ಥಿಗಳ ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಹಿಂದೆಯೂ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿತ್ತು. ಕೆಲವು ವಿದ್ಯಾರ್ಥಿಗಳಿಗೆ ಟಿ.ಸಿ. ನೀಡಿ ಶಾಲೆಯಿಂದ ಹೊರ ಹಾಕಿದ್ದರಿಂದ ಹೊಡೆದಾಟ ನಿಯಂತ್ರಣಕ್ಕೆ ಬಂದಿತ್ತು.
ನಾಪತ್ತೆಯಾಗಿದ್ದ ಯುವತಿ : ವಿವಾಹಿತೆಯಾಗಿ ಪತ್ತೆ
ಬದಿಯಡ್ಕ: ನಾಪತ್ತೆಯಾಗಿದ್ದ ಯುವತಿ ಅನ್ಯ ಧರ್ಮೀಯ ಯುವಕನ ಜತೆ ವಿವಾಹವಾಗಿದ್ದು, ಈ ದಂಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರನ್ನು ಸ್ವ ಇಚ್ಛೆಯಂತೆ ತೆರಳಲು ತಿಳಿಸಿದಾಗ ಯುವತಿ ಯುವಕನ ಜತೆ ತೆರಳಿದ್ದಾಳೆ. ಪಿಲಾಂಕಟ್ಟೆಯ ನಿವಾಸಿ 19 ವರ್ಷದ ಫಾತಿಮಾ ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ನಡೆಸಿದ ತನಿಖೆಯಲ್ಲಿ ಈಕೆ ಪಾಣತ್ತೂರು ಚೆಂಬೇರಿ ನಿವಾಸಿ ಚಾಲಕನ ಜತೆ ವಿವಾಹವಾಗಿರುವುದನ್ನು ಪತ್ತೆಹಚ್ಚಲಾಗಿದೆ. ಯುವಕ ಬಸ್ ಹಾಗೂ ಕಲ್ಲಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಇವರು ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…