ಮುಂಡಗೋಡ: ವಾರ್ಡ್ ಮಟ್ಟದಲ್ಲಿ ಪಾಠ ಪ್ರವಚನ ಶುರು
Team Udayavani, Aug 13, 2020, 10:52 AM IST
ಮುಂಡಗೋಡ: ತಾಲೂಕಿನಾದ್ಯಂತ ವಿದ್ಯಾಗಮ ನಿರಂತರ ಕಲಿಕಾ ಯೋಜನೆ ಅನುಷ್ಠಾನಗೊಂಡಿದ್ದು, ಶಿಕ್ಷಕರು ವಾರ್ಡ್ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಆರಂಭಿಸಿದ್ದಾರೆ. ಕೋವಿಡ್ ವೈರಸ್ನ ಮುಂಜಾಗೃತ ಕ್ರಮವಾಗಿ ಶಾಲೆಗಳು ಆರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಪ್ರತಿ ವಾರ್ಡ್ ಮಟ್ಟದಲ್ಲಿ ಒಬ್ಬ ಶಿಕ್ಷಕರಿಗೆ ನೇಮಿಸಿ ಆ ಭಾಗದ ವಿದ್ಯಾರ್ಥಿಗಳಿಗೆ ದೇವಸ್ಥಾನ ಅಥವಾ ಸಮುದಾಯ ಭವನಗಳಲ್ಲಿ ವಾರಕ್ಕೆ ಒಂದು ಅಥವಾ ಎರಡು ದಿನ ಪಾಠ ಮಾಡಿ ಹೋಂ ವರ್ಕ್ ನೀಡಲಾಗುತ್ತಿದೆ. ಒಂದು ವಾರದ ನಂತರ ವಿದ್ಯಾರ್ಥಿಗಳು ಮಾಡಿದ ಹೋಂ ವರ್ಕ್ಗಳನ್ನು ಶಿಕ್ಷಕರು ತಪಾಸಣೆ ನಡೆಸುತ್ತಾರೆ. ಮುಂದಿನ ಹೋಂ ವರ್ಕ್ ನ್ನು ವಿದ್ಯಾರ್ಥಿಗಳಿಗೆ ನೀಡುತ್ತಾರೆ. ಒಂದು ವೇಳೆ
ವಿದ್ಯಾರ್ಥಿಗಳು ಹೋಂ ವರ್ಕ್ ಮಾಡದಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೂಮ್ಮೆ ಅವಕಾಶ ನೀಡಲಾಗುತ್ತಿದೆ.
ಆನ್ಲೈನ್ನಲ್ಲಿ ಶಿಕ್ಷಣ: ಕೆಲ ಶಾಲೆಯವರು ವಾಟ್ಸ್ ಆ್ಯಪ್ ಗ್ರೂಪ್ ಗಳನ್ನು ಮಾಡಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡುತ್ತಿದ್ದಾರೆ. ಹೋಂ ವರ್ಕ್ ಮಾಡಿದ ವಿದ್ಯಾರ್ಥಿಗಳು ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ತಾವೂ ಮಾಡಿದ ಹೋಂ ವರ್ಕ್ ಹಾಕಬೇಕು. ಮೊಬೈಲ್ ಇಲ್ಲದ ವಿದ್ಯಾರ್ಥಿಗಳು ತಮ್ಮ ಸನಿಹದಲ್ಲಿನ ವಿದ್ಯಾರ್ಥಿಯೊಂದಿಗೆ ಸೇರಿ ಆನ್ಲೈನ್ ಶಿಕ್ಷಣ
ಪಡೆಯುವಂತೆ ಸೂಚಿಸಲಾಗುತ್ತಿದೆ.
ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ನಮ್ಮ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಈ ಅವಧಿಯಲ್ಲಿ ಕಾರ್ಯಕ್ರಮದಿಂದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ.
– ವಿ.ಎಸ್. ಪಟಗಾರ, ಬಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?