ಮುಚ್ಚಿರುವ ಡೇ ಕೇರ್‌ ಸೆಂಟರ್‌: ಮಹಿಳಾ ಉದ್ಯೋಗಿಗಳ ಗೋಳು

ಕೆಲಸದಾಳು ಕೊರತೆ; ಕೋವಿಡ್‌ ವಾರಿಯರ್ಗೆ ಮತ್ತಷ್ಟು ಸಂಕಷ್ಟ

Team Udayavani, Jul 3, 2020, 6:31 AM IST

ಮುಚ್ಚಿರುವ ಡೇ ಕೇರ್‌ ಸೆಂಟರ್‌: ಮಹಿಳಾ ಉದ್ಯೋಗಿಗಳ ಗೋಳು

ಸಾಂದರ್ಭಿಕ ಚಿತ್ರ.

ವಿಶೇಷ ವರದಿ-ಮಹಾನಗರ: ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಡೇ ಕೇರ್‌ ಸೆಂಟರ್‌ಗಳು, ನರ್ಸರಿ, ಮೋಂಟೆಸ್ಸರಿ, ಅಂಗನವಾಡಿಗಳು ಮುಚ್ಚಿವೆ. ಇದರ ನೇರ ಪರಿಣಾಮ ಈಗ ಮಹಿಳಾ ಉದ್ಯೋಗಿಗಳ ಮೇಲಾಗುತ್ತಿದೆ.

ಬೆಳಗ್ಗೆ ಡ್ಯುಟಿಗೆ ಹೋಗುವ ಮೊದಲು ಮಕ್ಕಳನ್ನು ಡೇ ಕೇರ್‌ ಸೆಂಟರ್‌/ಮೋಂಟೆ ಸ್ಸರಿಗಳಲ್ಲಿ ಬಿಟ್ಟು ಹೋಗಿ ವಾಪಸಾಗುವಾಗ ಮಕ್ಕಳನ್ನು ಕರೆತರುತ್ತಿದ್ದ ಮಹಿಳಾ ನೌಕರರು ತೀವ್ರ ತೊಂದರೆಗೀಡಾಗಿದ್ದಾರೆ.

ನಗರದ ಸರಕಾರಿ, ಖಾಸಗಿ ಸಂಸ್ಥೆಗಳಲ್ಲಿ ನೂರಾರು ಮಂದಿ ಮಹಿಳೆಯರು ದುಡಿ ಯುತ್ತಿದ್ದಾರೆ. ಅವರಲ್ಲಿ ಅನೇಕ ಮಂದಿಯ ಮಕ್ಕಳು ಬೆಳಗ್ಗಿನಿಂದ ಸಂಜೆಯವರೆಗೆ ಡೇ ಕೇರ್‌ ಸೆಂಟರ್‌ನಲ್ಲೇ ಉಳಿಯುತ್ತಿದ್ದರು. ಮೂರು ತಿಂಗಳುಗಳಿಂದ ಡೇ ಕೇರ್‌ ಸೆಂಟರ್‌, ಅಂಗನವಾಡಿ, ನರ್ಸರಿಗಳು ಮುಚ್ಚಲ್ಪಟ್ಟಿವೆ. ಈ ಸಮಸ್ಯೆ ಎದುರಿಸುತ್ತಿರುವವರಲ್ಲಿ ಅಧಿಕಾರಿ ವರ್ಗದವರೂ ಗುಮಾಸ್ತರೂ ಇದ್ದಾರೆ. ಬಾಡಿಗೆ ರೂಮ್‌ಗಳಲ್ಲಿ ವಾಸ ವಿದ್ದು, ಉದ್ಯೋಗ ಮಾಡುತ್ತಿರುವ ಅನೇಕ ಮಂದಿಗೆ ಡೇ ಕೇರ್‌ ಸೆಂಟರ್‌ಗಳು
ಆಪದ್ಬಾಂಧವನಂತಿದ್ದವು.

ಕೋವಿಡ್‌ ಕರ್ತವ್ಯ ನಿರತರಿಗೆ ಹೆಚ್ಚು ಸಮಸ್ಯೆ
ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲದೆ ಸರಕಾರದ ಬಹುತೇಕ ಇಲಾಖೆಗಳ ಅಧಿಕಾರಿ, ಸಿಬಂದಿಗೆ ಕೋವಿಡ್‌ ನಿಯಂ ತ್ರಣಕ್ಕೆ ಸಂಬಂಧಿಸಿದ ವಿವಿಧ ಕರ್ತವ್ಯಗಳನ್ನು ನಿಯೋಜಿಸಲಾಗಿದೆ.

ಹೋಂ ಕ್ವಾರಂಟೈನ್‌ ನಿಗಾ ಕೂಡ ಇಂತಹ ಅಧಿಕಾರಿ, ನೌಕರರ ಮೇಲಿದೆ. ಅನೇಕ ಮಂದಿ ವೈದ್ಯರು, ವೈದ್ಯಕೀಯ ಸಿಬಂದಿ ಕೂಡ ತಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಬರಲಾರದ ಸ್ಥಿತಿಯಲ್ಲಿದ್ದಾರೆ. ಇವರು ಒಂದೆಡೆ ಆರೋಗ್ಯದ ಅಪಾಯ ಎದುರಿಸುತ್ತಿದ್ದರೆ, ಇನ್ನೊಂದೆಡೆ ಮಕ್ಕಳಿಗೂ ವ್ಯವಸ್ಥೆ ಇಲ್ಲದೆ ಅತಂತ್ರರಾಗಿದ್ದಾರೆ. ಇತ್ತ ಖಾಸಗಿ ಸಂಸ್ಥೆಗಳಲ್ಲಿ ದುಡಿಯುವವರಲ್ಲಿ ಕೆಲವರ ಉದ್ಯೋಗದ ಅವಧಿಯೂ ಅಧಿಕವಾಗಿದ್ದು, ಮತ್ತಷ್ಟು ಸಂಕಷ್ಟ ಎದುರಾಗಿದೆ.

ಕೆಲಸದಾಳುಗಳ ಕೊರತೆ
ಈಗ ಕೋವಿಡ್‌ ಆತಂಕದಿಂದಾಗಿ ಮನೆ ಕೆಲಸದವರ ಕೊರತೆಯೂ ಇದೆ. ನಗರದಲ್ಲಿ ಹೆಚ್ಚಿನವರು ಹೊರ ಜಿಲ್ಲೆಗಳಿಂದ ಬಂದವರು ಮನೆ ಕೆಲಸ ಮಾಡುತ್ತಿದ್ದರು. ಅಂಥವರು ಊರಿಗೆ ತೆರಳಿದವರು ವಾಪಸಾಗಿಲ್ಲ ಎನ್ನುತ್ತಾರೆ ಇಲಾಖೆಯೊಂದರ ಮಹಿಳಾ ಉದ್ಯೋಗಿ.

ಒಂದೆಡೆ ಕೆಲಸದಾಳುಗಳ ಕೊರತೆ ಇದ್ದರೆ ಇನ್ನೊಂದೆಡೆ ಸುರಕ್ಷತೆಯ ದೃಷ್ಟಿ ಯಿಂದ ಕೆಲಸದಾಳುಗಳಿಗೆ ಷರತ್ತನ್ನು ಕೂಡ ವಿಧಿಸಲಾಗುತ್ತಿದೆ. “ಬಸ್‌ ಅಥವಾ ಯಾವುದೇ ವಾಹನದಲ್ಲಿ ಹೋಗಿ ಬರ ಬಾರದು. ನಡೆದುಕೊಂಡೇ ಹೋಗ ಬೇಕು ಎಂದು ನಾನು ಮಕ್ಕಳನ್ನು ನೋಡಿಕೊಳ್ಳುವ ಮನೆಯವರು ಷರತ್ತು ವಿಧಿಸಿದ್ದಾರೆ. ಹಾಗಾಗಿ ನಿತ್ಯ 14 ಕಿ.ಮೀ.ಗಳಷ್ಟು ನಡೆದುಕೊಂಡು ಹೋಗುತ್ತಿದ್ದೇನೆ’ ಎನ್ನುತ್ತಾರೆ ಮಕ್ಕಳನ್ನು ನೋಡಿ ಕೊಳ್ಳುತ್ತಿರುವ ನಗರದ ಓರ್ವ ಮಹಿಳೆ.

ಈಗ ದುಬಾರಿ
ಹಿಂದೆ ಡೇ ಕೇರ್‌ ಸೆಂಟರ್‌ಗಳಿಗೆ ಅರ್ಧ ದಿನಕ್ಕಾದರೆ 3,000- 3,500 ರೂ., ಇಡೀ ದಿನವಾದರೆ 5,000 ರೂ.ಗಳವರೆಗೆ ಹಣ ಪಾವತಿಸ ಬೇಕಿತ್ತು. ಆದರೆ ಈಗ ಒಂದು ಮಗುವನ್ನು ನೋಡಿಕೊಳ್ಳಲು 8ರಿಂದ 15,000 ರೂ.ಗಳವರೆಗೂ ಪಾವತಿ ಮಾಡಬೇಕಾದ ಸ್ಥಿತಿ ಉಂಟಾಗಿದೆ. ಕೆಲವು ಮಂದಿ ಇಬ್ಬರು-ಮೂವರು ಮಹಿಳೆಯರು ಸೇರಿ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಒಬ್ಬರೇ ಮನೆ ಕೆಲಸದವರನ್ನು ನಿಯೋ ಜಿಸುತ್ತಿರುವುದು ಕಂಡು ಬಂದಿವೆ.

ಸರಕಾರದ ಮಟ್ಟದಲ್ಲಿ ವ್ಯವಸ್ಥೆಯಾಗಬೇಕು
ಅಂಗನವಾಡಿ, ನರ್ಸರಿ, ಡೇ ಕೇರ್‌ ಸೆಂಟರ್‌ಗಳನ್ನು ತೆರೆಯುವುದಕ್ಕೆ ಈಗ ಅನುಮತಿ ಇಲ್ಲ. ಕೆಲವು ಮಹಿಳಾ ಉದ್ಯೋಗಿಗಳಿಗೆ ತೊಂದರೆಯಾಗುತ್ತಿರಬಹುದು. ಇದಕ್ಕೆ ಸರಕಾರದ ಮಟ್ಟದಲ್ಲಿಯೇ ವ್ಯವಸ್ಥೆಯಾಗಬೇಕಿದೆ.
– ಉಸ್ಮಾನ್‌ ಎ., ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.