ಕಾಯಕಜೀವಿಗಳಿಗೆ “ವಿಮೆ’ಯ ರಕ್ಷೆ

ವಿದ್ಯುತ್‌ ಚಾಲಿತ ವಾಹನ ಬಳಕೆಗೆ ಮತ್ತಷ್ಟು ಉತ್ತೇಜನ

Team Udayavani, Feb 18, 2023, 6:50 AM IST

ಕಾಯಕಜೀವಿಗಳಿಗೆ “ವಿಮೆ’ಯ ರಕ್ಷೆ

ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಬಹುತೇಕ ಎಲ್ಲ ಕಾರ್ಮಿಕರಿಗೆ ಇನ್ನು “ವಿಮೆಯ ಭದ್ರತೆ’ ಸಿಗಲಿದೆ. ಇದು 2023-24ರ ಸಾಲಿನ ಬಜೆಟ್‌ನ ವಿಶೇಷತೆಗಳಲ್ಲಿ ಒಂದು.

ಸಾರಿಗೆ ಸಿಬ್ಬಂದಿಗೆ ಈ ಮೊದಲೇ ವಿಮೆ ಭದ್ರತೆ ಒದಗಿಸಿದ್ದ ಸರ್ಕಾರ ಇದೀಗ ಈ ಕ್ಷೇತ್ರದಲ್ಲಿನ ಅಸಂಘಟಿತ ಕಾರ್ಮಿಕರಾದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಲಾರಿ ಚಾಲಕರಿಗೆ ವಿಮೆ ಭದ್ರತೆ ಒದಗಿಸುವ ಘೋಷಣೆ ಮಾಡಿದೆ.

ಇಷ್ಟು ಮಾತ್ರವಲ್ಲದೇ ಇ ಕಾಮರ್ಸ್‌ ಸಂಸ್ಥೆ (ಅಮೆಜಾನ್‌, ಸ್ವಿಗ್ಗಿ, ಝೊಮ್ಯಾಟೋ ಇತ್ಯಾದಿ)ಗಳ ಡೆಲಿವರಿ ಸೇವೆಗಳನ್ನು ಒದಗಿಸುವವರನ್ನು (ಗಿಗ್‌ ವರ್ಕ ರ್ಸ್‌) ವಿಮಾ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಿದೆ.

ಆಟೋ, ಟ್ಯಾಕ್ಸಿ ಮತ್ತು ಲಾರಿ ಚಾಲಕರು ಮತ್ತು ಇ ಕಾಮರ್ಸ್‌ ಡೆಲಿವರಿ ಸೇವೆಗಳನ್ನು ನೀಡುವವರು ಮೃತಪಟ್ಟರೆ ತಲಾ 2 ಲಕ್ಷ ರೂ ವಿಮಾ ಸೌಲಭ್ಯ, ಒಂದು ವೇಳೆ ಅಪಘಾತದಲ್ಲಿ ಮರಣ ಹೊಂದಿದರೆ ಮತ್ತೆ 2 ಲಕ್ಷ ರೂ.ನಂತೆ ಒಟ್ಟು 4 ಲಕ್ಷ ರೂ ಗಳ ವಿಮಾ ಸೌಲಭ್ಯ ಕಲ್ಪಿಸಲು “ಮುಖ್ಯಮಂತ್ರಿ ವಿಮಾ ಯೋಜನೆ’ ರಚಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಮೂಲಕ 16.50 ಲಕ್ಷ ಚಾಲಕರಿಗೆ ನೆರವು ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಆದರೆ ಈ ಯೋಜನೆಗೆ ಅಗತ್ಯವಾದ ಹಣಕಾಸು ಮೊತ್ತವನ್ನು ಬಜೆಟ್‌ನಲ್ಲಿ ಉಲ್ಲೇಖೀಸಲಾಗಿಲ್ಲ.

1,200 ಹೊಸ ಬಸ್‌ಗೆ 500 ಕೋಟಿ ರೂ
ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ಈಗಾಗಲೇ ಬಸ್‌ಗಳ ತೀವ್ರ ಕೊರತೆಯಿದ್ದು ಗ್ರಾಮೀಣ ಕರ್ನಾಟಕದ ಸಾರಿಗೆ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇಷ್ಟು ಮಾತ್ರವಲ್ಲದೆ ಹೊಸ ಗುಜರಿ ನೀತಿ ಜಾರಿಯಲ್ಲಿರುವುದರಿಂದ ಸಾವಿರಾರು ಹಳೆಯ ಬಸ್‌ಗಳನ್ನು ಸೇವೆಯಿಂದ ಹಿಂತೆಗೆದುಕೊಳ್ಳುವ ಅನಿವಾರ್ಯತೆ ಸಾರಿಗೆ ನಿಗಮಕ್ಕಿದೆ. ಆದುದರಿಂದ ಬಸ್‌ಗಳ ಸಂಖ್ಯೆ ಇನ್ನಷ್ಟು ಕುಸಿತವಾಗಿ ರಾಜ್ಯದ ಸಾರಿಗೆ ವ್ಯವಸ್ಥೆ ಹಳಿ ತಪ್ಪುವ ಆತಂಕ ಸೃಷ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ 1,200 ಹೊಸ ಬಸ್‌ಗಳನ್ನು ಖರೀದಿಸಲು ಮುಂದಾಗಿದ್ದು 500 ಕೋಟಿ ರೂ ನೆರವನ್ನೂ ಘೋಷಿಸಿದೆ. ರಾಜ್ಯದ ಸಾರಿಗೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಮೊತ್ತವನ್ನು ಹೊಸ ಬಸ್‌ ಖರೀದಿಗೆ ವಿನಿಯೋಗಿಸಲಾಗುತ್ತಿದೆ.

ತುಮಕೂರು, ಹಾವೇರಿ, ಯಲಹಂಕ, ಕಸ್ತೂರಿನಗರ, ಸಕಲೇಶಪುರ, ಕೆಜಿಎಫ್, ಚಿಂತಾಮಣಿ, ಸಾಗರ, ಗೋಕಾಕ್‌, ರಾಣೆಬೆನ್ನೂರು, ದಾಂಡೇಲಿ, ಶಿರಸಿ ಮತ್ತು ಭಾಲ್ಕಿ ನಗರಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀûಾ ಪಥಗಳನ್ನು ನಿರ್ಮಿಸಲು ರಸ್ತೆ ಸುರಕ್ಷತಾ ನಿಧಿಯ ಅನುದಾನದಿಂದ ಒಟ್ಟು 85 ಕೋಟಿ ರೂ.ಗಳನ್ನು ಖರ್ಚು ಮಾಡುವುದಾಗಿ ಸರ್ಕಾರ ಹೇಳಿದೆ.

ರಾಜ್ಯದೆಲ್ಲೆಡೆ ಚಾರ್ಜಿಂಗ್‌ ಸ್ಟೇಷನ್‌
ವಿದ್ಯುತ್‌ ಚಾಲಿತ ವಾಹನಗಳನ್ನು ಉತ್ತೇಜಿಸುವ ರಾಜ್ಯ ಸರ್ಕಾರದ ಇರಾದೆಗೆ ಬಜೆಟ್‌ ಪುಷ್ಟಿ ನೀಡಿದ್ದು, ಸರ್ಕಾರಿ ಕಚೇರಿಗಳು ಮತ್ತು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಡಿಪೋಗಳಲ್ಲಿ ಹಸಿರು ತೆರಿಗೆ ನಿಧಿಯ ಅನುದಾನದಡಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲು ಮುಂದಾಗಿದೆ. ಜೊತೆಗೆ ಸಾರಿಗೆ ನಿಗಮಗಳಲ್ಲಿ ವಿದ್ಯುತ್‌ ಚಾಲಿತ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಲಾಗಿದೆ. ಸಾರಿಗೆ ಇಲಾಖೆಯಲ್ಲಿ ಇ-ಚಲನ್‌ ವ್ಯವಸ್ಥೆಯಡಿ ಪ್ರವರ್ತನ ಚಟುವಟಿಕೆಗಳಲ್ಲಿ ಸಂಗ್ರಹವಾದ ರಾಜಿ ದಂಡವನ್ನು ಪಾವತಿಸಿಕೊಳ್ಳುವ ವ್ಯವಸ್ಥೆ ಸದ್ಯ ರಾಜಾಜಿನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಾತ್ರವಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.