ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ವಿನಾಯಿತಿ ಪಟ್ಟಿ  , ತೆರಿಗೆ ವಂಚನೆ ಪರಿಶೀಲನೆ, ಐಟಿ ವ್ಯವಸ್ಥೆ ಸುಧಾರಣೆ ಉದ್ದೇಶ

Team Udayavani, Sep 28, 2021, 6:30 AM IST

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಹೊಸದಿಲ್ಲಿ: ಪ್ರಸ್ತುತ ತೆರಿಗೆ ಸ್ಲ್ಯಾಬ್ ಗಳು, ಜಿಎಸ್‌ಟಿಯಿಂದ ವಿನಾ ಯಿತಿ ಹೊಂದಿರುವ ಸರಕುಗಳ ಪರಿಶೀಲನೆ, ತೆರಿಗೆ ತಪ್ಪಿಸುವ ಸಂಭಾವ್ಯ ಮೂಲಗಳ ಪತ್ತೆ ಮತ್ತು ಐಟಿ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಶಿಫಾರಸು ಮಾಡಲು ಕೇಂದ್ರ ವಿತ್ತ ಸಚಿವಾಲಯವು ಸೋಮವಾರ ಎರಡು ಸಮಿತಿಗಳನ್ನು ರಚಿಸಿದೆ. ಏಳು ಸದಸ್ಯರಿರುವ ರಾಜ್ಯ ಹಣಕಾಸು ಸಚಿವರ ಸಮಿತಿಯ ನೇತೃತ್ವವನ್ನು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ.

ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಾಲ್ಕು ವರ್ಷಗಳ ಬಳಿಕ ಈಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಿಎಸ್‌ಟಿ ದರ ಸ್ವರೂಪವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹೆಜ್ಜೆಯಿರಿಸಿವೆ. ಅದರಂತೆ ವಿವಿಧ ತೆರಿಗೆ ಸ್ಲ್ಯಾಬ್  ಗಳ ವಿಲೀನ, ಪ್ರಸ್ತುತ ಇರುವಸ್ಲ್ಯಾಬ್  ಗಳ ಪರಿಷ್ಕರಣೆಗೆ ಮುಂದಾಗಿವೆ.

ಸಂಸದೀಯ ಸಮಿತಿಯ ಕೆಲಸ ತೆರಿಗೆ ತಪ್ಪಿಸುವಿಕೆಯ ಮೂಲಗಳನ್ನು ಪತ್ತೆಹಚ್ಚಿ, ಉದ್ದಿಮೆ ಪ್ರಕ್ರಿಯೆ ಮತ್ತು ಐಟಿ ವ್ಯವಸ್ಥೆಯಲ್ಲಿ ಏನೇನು ಬದಲಾವಣೆ ತರಬಹುದು ಎಂಬ ಬಗ್ಗೆ ಸಲಹೆ ನೀಡಲಿದೆ. ಆ ಮೂಲಕ ತೆರಿಗೆ ಸೋರಿಕೆ ತಡೆಯಲಿದೆ. ಜತೆಗೆ ಕೇಂದ್ರ ಮತ್ತು ರಾಜ್ಯ ತೆರಿಗೆ ಆಡಳಿತ ವ್ಯವಸ್ಥೆಯ ನಡುವೆ ಸಮನ್ವಯ ಸಾಧಿಸುವ ಕೆಲಸವನ್ನೂ ಈ ಸಮಿತಿ ಮಾಡಲಿದೆ.

ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಸೆ. 17ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಎರಡು ಸಮಿತಿಗಳ ರಚನೆ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು.

ಎರಡು ತಿಂಗಳುಗಳಲ್ಲಿ ವರದಿ
ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿಯಲ್ಲಿ ಪ. ಬಂಗಾಲ ವಿತ್ತ ಸಚಿವ ಅಮಿತ್‌ ಮಿತ್ರಾ, ಕೇರಳದ ವಿತ್ತ ಸಚಿವ  ಬಾಲಗೋಪಾಲ, ಬಿಹಾರ ಡಿಸಿಎಂ ತಾರಕಿಶೋರ್‌ ಪ್ರಸಾದ್‌  ಇರಲಿದ್ದಾರೆ. ಮುಂದಿನ 2 ತಿಂಗಳುಗಳಲ್ಲಿ ಸಮಿತಿ ವರದಿ ಸಲ್ಲಿಸಲಿದೆ. ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನೇತೃತ್ವದಲ್ಲಿ 8 ಸದಸ್ಯರ ಸಚಿವರ ಸಮಿತಿ ರಚಿಸಲಾಗಿದೆ. ಇದರಲ್ಲಿ ದಿಲ್ಲಿಯ ಡಿಸಿಎಂ ಮನೀಶ್‌ ಸಿಸೋಡಿಯಾ, ತಮಿಳುನಾಡಿನ ಹಣಕಾಸು ಸಚಿವ ಪಳನಿವೇಳ್‌ ತ್ಯಾಗರಾಜನ್‌, ಛತ್ತೀಸ್‌ಗಢದ ಹಣಕಾಸು ಸಚಿವ ಟಿ.ಎಸ್‌. ಸಿಂಗ್‌ ದಿಯೋ ಮತ್ತಿತರರಿದ್ದಾರೆ. ಈ ಸಮಿತಿಯು ಜಿಎಸ್‌ಟಿ ವ್ಯವಸ್ಥೆ ಸುಧಾರಣೆ ಕುರಿತು ಸಲಹೆ ನೀಡಲಿದೆ.

ಬೊಮ್ಮಾಯಿ ಸಮಿತಿಯ ಕೆಲಸವೇನು?
– ತೆರಿಗೆ ದರಗಳ ಪರಿಷ್ಕರಣೆ ಸಲಹೆ
-ಸರಕು ಮತ್ತು ಸೇವೆಗಳ ವರ್ಗೀಕರಣ ಸಂಬಂಧಿತ ವಿವಾದ ತಗ್ಗಿಸುವುದು
-ಕೇಂದ್ರ, ರಾಜ್ಯ ಸರಕಾರಗಳ ಆದಾಯ ಸಂಗ್ರಹ ಹೆಚ್ಚಳಕ್ಕೆ ಉತ್ತೇಜನ
– ತತ್‌ಕ್ಷಣದ ಮತ್ತು ಅಲ್ಪಾವಧಿ-ಮಧ್ಯಮಾವಧಿಯಲ್ಲಿ ಅಗತ್ಯ ಬದಲಾವಣೆಗಳ ನೀಲನಕ್ಷೆ ಒದಗಿಸುವುದು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.