Politics: ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ
Team Udayavani, Oct 21, 2023, 11:02 PM IST
ಬೆಂಗಳೂರು: ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ಡಾ| ವಿವೇಕ್ ಜವಳಿ ಅವರ ತಂಡ ನನ್ನನ್ನು ಉತ್ತಮವಾಗಿ ಆರೈಕೆ ಮಾಡಿದ್ಧಾರೆ. ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕರ್ಲ್ ಸೈನ್ಸ್ ಅಧ್ಯಕ್ಷ ಡಾ| ವಿವೇಕ್ ಜವಳಿ ಮಾತನಾಡಿ, 5-ಗ್ರಾಫ್ಟ$Õಹೃದಯ ಬೈಪಾಸ್ ಅನ್ನು ನಿರ್ವಹಿಸುವುದು ನಮಗೆ ವಾಡಿಕೆಯಾಗಿದೆ. ಆದರೆ ಬೊಮ್ಮಾಯಿ ಅವರ ಅಚಲವಾದ ನಂಬಿಕೆ, ಅವರ ಧೈರ್ಯದ ಮನೋಭಾವಕ್ಕೆ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ ಎಂದರು.