ಸಲೀಸಾಗಿ ಸದನ ಸವಾಲು ಗೆದ್ದ ಸಿಎಂ; ಪ್ರತಿಪಕ್ಷಗಳ ಸಹಕಾರವೇ ಶ್ರೀರಕ್ಷೆ
ನಾಯಕರಿಗೆ ತಕ್ಕ ಉತ್ತರ ನೀಡುವ ಪ್ರಯತ್ನ ನಡೆಸಿದ್ದಾರೆ.
Team Udayavani, Sep 25, 2021, 10:29 AM IST
ಬೆಂಗಳೂರು: ವಿಧಾನ ಮಂಡಲದ ಅಧಿವೇಶನವನ್ನು ಎದುರಿಸಿ ಯಶಸ್ವಿಯಾಗುವುದು ಪ್ರತಿಯೊಬ್ಬ ನಾಯಕರಿಗೂ ಸವಾಲಿನ ಕೆಲಸ. ಅನಿರೀಕ್ಷಿತವಾಗಿ ದೊರೆತ ಮುಖ್ಯಮಂತ್ರಿ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ, ಹತ್ತು ದಿನಗಳ ಮೊದಲ ಅಧಿವೇಶನವನ್ನು ಸದ್ದುಗದ್ದಲವಿಲ್ಲದೇ ನಡೆಸಿ, ಪ್ರತಿಪಕ್ಷಗಳನ್ನು ನಿಭಾಯಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಈ ಮೂಲಕ ನಾಯಕತ್ವದ ಬಗ್ಗೆ ಬಿಜೆಪಿ ನಾಯಕರಿಗಿದ್ದ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
ದಾಖಲೆಗಳ ಮೂಲಕವೇ ಉತ್ತರ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮಾಡಿದ ಆರೋಪಗಳಿಗೆ ಇತಿಹಾಸದಲ್ಲಿನ ದಾಖಲೆಗಳ ಸಮೇತ ಉತ್ತರ ನೀಡಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಆಗಿರುವ ಬೆಲೆ ಏರಿಕೆ, ಹಣದುಬ್ಬರ ಹೆಚ್ಚಳ, ಅಂತಾರಾಷ್ಟ್ರೀಯ ಮಟ್ಟದಲ್ಲಿನ ತೈಲ ಬೆಲೆ ಏರಿಕೆ, ಆಗಿನ ಸಂದರ್ಭದಲ್ಲಿ ಸರ್ಕಾರಗಳು ತೆಗೆದುಕೊಂಡ ನಿಲುವುಗಳನ್ನು ದಾಖಲೆ ಸಮೇತ ಕೊಟ್ಟು ಅವರನ್ನು ತಣ್ಣಗೆ ಕೂಡಿಸುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ.
ಕಾವ್ಯಕ್ಕೆ ಕಾವ್ಯದ ಮೂಲಕವೇ ಉತ್ತರ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಲೆ ಏರಿಕೆಯ ವಿಷಯದ ಸಂದರ್ಭದಲ್ಲಿ ಕುಮಾರವ್ಯಾಸದ ಕಾವ್ಯದ ಮೂಲಕ ನಾಯಕನಾದವನು ಹೇಗಿರಬೇಕು ಎಂದು ಆರೋಪಿಸಿದ್ದರೆ, ಕುಮಾರವ್ಯಾಸನ ಕಾವ್ಯದ ಮೂಲಕವೇ ತಮ್ಮ ನಾಯಕತ್ವ ಹೇಗಿದೆ ಎನ್ನುವುದನ್ನು ಸಮರ್ಥಿಸಿಕೊಳ್ಳುವ ಮೂಲಕ ಪ್ರತಿಪಕ್ಷದ ನಾಯಕರಿಗೆ ತಕ್ಕ ಉತ್ತರ ಕೊಡಬಲ್ಲೆ ಎಂಬ ಸಂದೇಶ ರವಾನಿಸಿದರು.
ಸಚಿವರ ಬೆನ್ನಿಗೆ: ಪ್ರಶ್ನೋತ್ತರ ಕಲಾಪ, ನಿಲುವಳಿ ಸೂಚನೆ ಮೇಲಿನ ಉತ್ತರ, ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಂಬಂಧ ಪಟ್ಟ ಇಲಾಖೆಗಳ ಸಚಿವರು ಸಮರ್ಥವಾಗಿ ಉತ್ತರ ನೀಡಲು ಅಸಹಾಯಕರಾದ ಸಂದರ್ಭ ಎದುರಾದಾಗ ತಕ್ಷಣವೇ ಸಚಿವರ ಬೆನ್ನಿಗೆ ನಿಲ್ಲುವ ಮೂಲಕ ಸಿಎಂ ಬೊಮ್ಮಾಯಿ ಪ್ರತಿಪಕ್ಷಗಳ ಶಾಸಕರು ಹಾಗೂ ನಾಯಕರಿಗೆ ತಕ್ಕ ಉತ್ತರ ನೀಡುವ ಪ್ರಯತ್ನ ನಡೆಸಿದ್ದಾರೆ. ಧಾರ್ಮಿಕ ಕಟ್ಟಡಗಳ ಸಂರಕ್ಷಣೆಯನ್ನು ಮುಜರಾಯಿ
ಸಚಿವರ ಬದಲಾಗಿ ಸ್ವತಃ ತಾವೇ ಮಂಡನೆ ಮಾಡಿ, ಪ್ರತಿಪಕ್ಷ ಕಾಂಗೆಸ್ ಸದಸ್ಯರ ಆರೋಪಗಳಿಗೆ ತಕ್ಕ ಉತ್ತರ ನೀಡುವ ಮೂಲಕ ಅತ್ಯಂತ ಸೂಕ್ಷ್ಮ ವಿಧೇಯಕಕ್ಕೂ ಯಾವುದೇ ರೀತಿಯ ಗೊಂದಲ ಇಲ್ಲದಂತೆ ಅಂಗೀಕಾರ ಪಡೆದು ಜಾಣ್ಮೆ ಮೆರೆದಿದ್ದಾರೆ.
ಪ್ರತಿಪಕ್ಷಗಳ ಸಹಕಾರವೇ ಶ್ರೀರಕ್ಷೆ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ನಂತರ ಬಿಜೆಪಿಯಲ್ಲಿದ್ದ ಶಾಸಕರ ಅಸಮಾಧಾನ ಪ್ರಮಾಣ ತಣ್ಣಗಾದಂತೆ ಕಾಣಿಸುತ್ತಿದೆ. ತಮ್ಮ ಕ್ಷೇತ್ರಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ದೊರೆಯದಿದ್ದರೂ, ಹದಿನೈದು ದಿನದಲ್ಲಿ ಎರಡು ಶಾಸಕಾಂಗ ಸಭೆಗಳನ್ನು ಕರೆದರೂ ಯಾರೂ ನಾಯಕತ್ವದ ವಿರುದ್ಧ ಬಹಿರಂಗವಾಗಿ ಮಾತನಾಡದೇ ಸಹಕಾರ ತೋರಿರುವುದೂ ಕೂಡ ಸಿಎಂ ಬೊಮ್ಮಾಯಿ ಅವರಿಗೆ ಶ್ರೀರಕ್ಷೆಯಾಗಿ ಪರಿಣಮಿಸಿತು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಾಯಕರ ಪರೋಕ್ಷ ಸಹಕಾರವೂ ಸಿಎಂಗೆ ವರವಾಗಿ ಪರಿಣಮಿಸಿದಂತೆ ಕಾಣಿಸುತ್ತದೆ. ಬಸವರಾಜ ಬೊಮ್ಮಾಯಿ ಅವರು ಆರ್ಎಸ್ಎಸ್ ಮೂಲದವರಾಗಿರದೇ ಜನತಾ ಪರಿವಾರದ ಮೂಲಕ ಸಮಾಜವಾದಿ ಚಿಂತನೆಯ ಹಿನ್ನೆಲೆಯಿಂದ ಬಂದವರಾಗಿರುವುದರಿಂದ ಹಾಗೂ ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಅವರ ಪುತ್ರರಾಗಿದ್ದಾರೆ ಎನ್ನುವ ಕಾರಣಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಗಮ ಕಲಾಪ ನಡೆಯಲು ಸಹಕಾರ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ