ತೆಂಗು ಬೆಳೆಗಾರರಿಗೆ ಅನಗತ್ಯ ಭಯ ಬೇಡ

ಎಣ್ಣೆ ಗಿರಣಿಗಳಿಗೂ ಕಾರ್ಯಾಚರಿಸಲು ಅನುಮತಿ

Team Udayavani, Apr 20, 2020, 5:57 AM IST

ತೆಂಗು ಬೆಳೆಗಾರರಿಗೆ ಅನಗತ್ಯ ಭಯ ಬೇಡ

ಕುಂದಾಪುರ/ಉಡುಪಿ: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರಿಗೆ ನೆರವಾಗಲು ಉಭಯ ಜಿಲ್ಲೆಗಳ ಜಿಲ್ಲಾಡಳಿತ ಮುಂದಾ ಗಿದ್ದು, ಎಣ್ಣೆ ಮಿಲ್‌, ಪೌಡರ್‌ ಉತ್ಪತ್ತಿ ಘಟಕ ಸೇರಿದಂತೆ ತೆಂಗಿನ ಉತ್ಪನ್ನಗಳ ತಯಾರಿಕಾ ಘಟಕ ಕಾರ್ಯಾಚರಿಸಲು ಈಗಾಗಲೇ ಅನುಮತಿ ನೀಡಿದೆ.

ಕರಾವಳಿ ಜಿಲ್ಲೆಯಲ್ಲಿ ಉತ್ಪಾದನೆ ಯಾಗುವ ತೆಂಗಿನ ಕಾಯಿಗಳ ಪೈಕಿ ಶೇ.30 ರಷ್ಟು ಸ್ಥಳೀಯ ಎಣ್ಣೆ ಮಿಲ್‌ಗ‌ಳಿಗೆ ಕೊಬ್ಬರಿ ರೂಪದಲ್ಲಿ ಬಳಕೆಯಾದರೆ, ಶೇ. 30 ರಿಂದ 40 ರಷ್ಟು ತೆಂಗಿನ ಕಾಯಿಯ ಪೌಡರ್‌ ಆಗಿ ಬಳಕೆಯಾಗುತ್ತದೆ. ಇನ್ನು ಉಳಿದ ಪ್ರಮಾಣದ ತೆಂಗಿನ ಕಾಯಿ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತದೆ. ಈಗ ಒಟ್ಟಾರೆ ಶೇ. 15 ರಿಂದ 20 ರಷ್ಟು ತೆಂಗು ಉತ್ಪಾದನೆಗೆ ಮಾತ್ರ ಮಾರುಕಟ್ಟೆ ಸಿಗುತ್ತಿದೆ.
ಈಗ ತೆಂಗಿನ ಪೌಡರ್‌ ಉತ್ಪತ್ತಿ ಘಟಕ ಕೂಡ ಆರಂಭಿಸಲು ಉಭಯ ಜಿಲ್ಲಾಡಳಿತ ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಕುಂದಾಪುರದಲ್ಲಿ 4, ಬೈಂದೂರಲ್ಲಿ 3, ಹೆಬ್ರಿ, ಉಡುಪಿ ಸೇರಿದಂತೆ 8- 10 ಘಟಕಗಳಿವೆ. ಉಡುಪಿ ಜಿಲ್ಲೆಯಲ್ಲಿ 15 ರಿಂದ 20 ಬೃಹತ್‌ ಎಣ್ಣೆ ಮಿಲ್‌ಗ‌ಳು, 50 ರಷ್ಟು ಸಣ್ಣ ಎಣ್ಣೆ ಮಿಲ್‌ಗ‌ಳಿವೆ.

ತೆಂಗಿನ ಕಾಯಿಯ ಹೂವನ್ನು
ಯಂತ್ರದ ಮೂಲಕ ಪೌಡರ್‌ ಮಾರ್ಪ ಡಿಸಿ, ಅದನ್ನು ಡಬ್ಬದಲ್ಲಿ ಪ್ಯಾಕ್‌ ಮಾಡಿ, ದೇಶದ ವಿವಿಧೆಡೆಗೆ ಹಾಗೂ ಕೊಲ್ಲಿ ರಾಷ್ಟ್ರಗಳಿಗೂ ರಫ್ತು ಮಾಡಲಾಗುತ್ತಿತ್ತು. ಆದರೆ ತೆಂಗಿನ ಪೌಡರ್‌ ಉತ್ಪತ್ತಿ ಘಟಕ ಗಳಿಗೆ ಅನುಮತಿ ಸಿಗದ ಕಾರಣ ಸಮಸ್ಯೆ ಯಾಗಿತ್ತು. ಈಗ ಜಿಲ್ಲಾಡಳಿತ ಅನುಮತಿ ನೀಡಿದ್ದು, ಸಾಕಷ್ಟು ಮಂದಿ ತೆಂಗು ಬೆಳೆ ಗಾರರಿಗೆ ಪ್ರಯೋಜನವಾಗಲಿದೆ.

ಪರ್ಯಾಯ ಕ್ರಮ ಅಗತ್ಯ
ತೆಂಗು ಬೆಳೆಗಾರರು ಸದ್ಯಕ್ಕೆ ಪರ್ಯಾಯ ಕ್ರಮಕ್ಕೆ ಗಮನ ಕೊಡು ವುದು ಉತ್ತಮ. ಕೊಬ್ಬರಿ ಒಣಗಿಸಿ, ಅದನ್ನು ಭದ್ರವಾಗಿ ಪ್ಯಾಕ್‌ ಮಾಡಿದರೆ 3 ತಿಂಗಳವರೆಗೂ ಇಟ್ಟುಕೊಳ್ಳಬಹುದು. ಕೊಬ್ಬರಿಯಾಗಿಸಿ, ಸಿಹಿ ತಿನಿಸುಗಳ ತಯಾರಿಕೆಗೆ ಬಳಸಬಹುದು. ಅನಾನಸುವನ್ನು ಡ್ರೈಯರ್‌ ಮಾಡಿ ದಂತೆ ತೆಂಗಿನ ಕಾಯಿಯನ್ನು ಕೂಡ ಎಣ್ಣೆ ಮಿಲ್‌ನಲ್ಲಿ ಡ್ರೈಯರ್‌ ಮಾಡಿದರೆ ಕೆಲ ತಿಂಗಳವರೆಗೆ ಇಡಬಹುದು ಎನ್ನುತ್ತಾರೆ ಉಡುಪಿ ಭಾರತೀಯ ಕಿಸಾನ್‌ ಸಂಘದ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ.

ಗೋದಾಮಿನಲ್ಲಿ ಅವಕಾಶ ಕಲ್ಪಿಸಿ
ತೆಂಗು ಬೆಳೆಗಾರರು ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ. ಪ್ರಸುತ ಉತ್ತಮ ಬಿಸಿಲು ಇರುವುದರಿಂದ ಕೊಬ್ಬರಿ ಮಾಡುವುದು ಉತ್ತಮ ನಿರ್ಧಾರ. ಸರಕಾರ ಬೆಂಬಲ ಬೆಲೆ ನೀಡಿ ತೆಂಗು ಖರೀದಿಸಬೇಕು. ಜತೆಗೆ ಎಂಪಿಎಂಸಿ ಗೋದಾಮಿನಲ್ಲಿ ತೆಂಗು ಶೇಖರಣೆಗೆ ಅವಕಾಶ ಕಲ್ಪಿಸಿದರೆ ತೆಂಗು ಬೆಳೆಗಾರರು ತಮ್ಮ ಬೆಳೆಯನ್ನು ಸುರಕ್ಷಿತವಾಗಿ ಶೇಖರಿಸಿಡಬಹುದಾಗಿದೆ . ಎಣ್ಣೆ ಮಿಲ್‌ಗ‌ಳು ಹಿಂದಿನ ಅವಧಿಯಲ್ಲಿ ಕೆಲಸ ನಿರ್ವಹಿಸುವಂತಾಗಬೇಕು ಎಂದು ಉಡುಪಿ ಜಿಲ್ಲಾ ಕಿಸಾನ್‌ ಸಂಘದ ಪ್ರ.ಕಾರ್ಯದರ್ಶಿ ಕುದಿ ಶ್ರೀನಿವಾಸ್‌ ಭಟ್‌ ತಿಳಿಸಿದರು.

22,506 ಹೆಕ್ಟೇರ್‌ ತೆಂಗು
ಉಡುಪಿ ಜಿಲ್ಲೆಯಲ್ಲಿ 22,506 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಸಲಾಗಿದೆ. ಕಾರ್ಕಳದಲ್ಲಿ 6,574 ಹೆಕ್ಟೇರ್‌ನಲ್ಲಿ 7.88 ಕೋ. ತೆಂಗಿನ ಕಾಯಿ, ಕುಂದಾಪುರದಲ್ಲಿ 7216 ಹೆಕ್ಟೇರ್‌ನಲ್ಲಿ 8.65 ಕೋ. ತೆಂಗಿನ ಕಾಯಿ, ಉಡುಪಿ 8,716 ಹೆಕ್ಟೇರ್‌ 10.45 ಕೋ. ತೆಂಗಿನ ಕಾಯಿಗಳ ಇಳುವರಿ ದೊರಕುತ್ತಿದೆ. ಜಿಲ್ಲೆಯ ತೆಂಗು ಬೆಳೆಗಾರರ ಸೊಸೈಟಿಗಳಲ್ಲಿ ನೋಂದಾಯಿಸಿದ 4,820 ಬೆಳೆಗಾರರಿದ್ದಾರೆ. ತೆಂಗಿನ ಕಾಯಿಗೆ ಕೆ.ಜಿ.ಗೆ ಈಗ 35 ರಿಂದ 36 ರೂ. ಇದ್ದರೆ ಕೊಬ್ಬºರಿ ಕೆ.ಜಿ.ಗೆ 100 ರಿಂದ 102 ರೂ. ಇದೆ. ಉತ್ತಮ ಬೆಲೆಯಿದ್ದರೂ, ಈಗ ಮಾರುಕಟ್ಟೆ ವ್ಯವಸ್ಥೆಯಿಲ್ಲ ಎಂಬುದು ಬೆಳೆಗಾರರ ಕೊರಗು.

ಎಣ್ಣೆ ಮಿಲ್‌ಗ‌ಳಿಗೆ ಸಂಜೆಯವರೆಗೂ ಕಾರ್ಯಾಚರಿಸಬಹುದು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ, ಮಾಲಕರು ಬೆಳಗ್ಗೆ 11 ಗಂಟೆಗೆ ಮುಚ್ಚುತ್ತಿದ್ದಾರೆ ಎಂಬ ದೂರುಗಳಿವೆ. ಇದೇ ಸಂದರ್ಭದಲ್ಲಿ ಕೊರೊನಾ ಭೀತಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ ಎಂಬ ಅಭಿಪ್ರಾಯವೂ ಇದೆ.

ಈ ಬಗ್ಗೆ ಪ್ರಶ್ನೆಗಳಿದ್ದರೆ ಉಭಯ ಜಿಲ್ಲೆಗಳ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ದ.ಕ.ದ ಕೆ.ಆರ್‌. ನಾಯ್ಕ (9448999226), ಉಡುಪಿಯ ಭುವನೇಶ್ವರಿ (9448999225) ಅವರನ್ನು ಸಂಪರ್ಕಿಸಬಹುದು.

ಎಣ್ಣೆ, ಅಕ್ಕಿ ಮಿಲ್‌ಗೆ ನಿರ್ಬಂಧವಿಲ್ಲ
ತೆಂಗು ಬೆಳೆಗಾರರಿಗೆ ಅನುಕೂಲವಾಗಲೆಂದು ಎಣ್ಣೆಮಿಲ್‌ಗ‌ಳಿಗೆ ಈಗಾಗಲೇ ಬೆಳಗ್ಗೆಯಿಂದ ಸಂಜೆಯವರೆಗೂ ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ. ಇನ್ನು ಅಕ್ಕಿ ಮಿಲ್‌ಗ‌ಳಿಗೂ ಕೂಡ ತೆರೆಯಲು ಅನುಮತಿಯಿದೆ. ಆಹಾರ ಸಾಮಗ್ರಿ ನೆಲೆಯಲ್ಲಿ ತೆಂಗಿನ ಕಾಯಿಯ ಪೌಡರ್‌ ಉತ್ಪತ್ತಿ ಘಟಕ ತೆರೆಯಲು ಅನುಮತಿ ನೀಡಲಾಗಿದೆ. ಯಾರಾದರೂ ಅಡ್ಡಿಪಡಿಸಿದರೆ ನನ್ನ ಗಮನಕ್ಕೆ ತನ್ನಿ.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ದ.ಕ.ದಲ್ಲೂ ಅನುಮತಿ
ತೆಂಗಿನ ಉತ್ಪನ್ನ ತಯಾರಿಕಾ ಎಲ್ಲ ಘಟಕಗಳು, ಎಣ್ಣೆ ಮಿಲ್‌ಗ‌ಳಿಗೆ ದ.ಕ. ಜಿಲ್ಲೆಯಲ್ಲಿ ಅನುಮತಿಯಿದೆ. ಆದರೆ ಅವರು ಸೀಮಿತ ಕಾರ್ಮಿಕರು, ಸಾಮಾಜಿಕ ಅಂತರ ಮತ್ತಿತರ ಕೆಲ ನಿಬಂಧನೆಗಳನ್ನು ಅನುಸರಿಸಬೇಕು.
– ಕೆ.ಆರ್‌. ನಾಯ್ಕ, ಉಪ ನಿರ್ದೇಶಕರು,
ತೋಟಗಾರಿಕಾ ಇಲಾಖೆ, ದ.ಕ.

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೇ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ: 76187 74529

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.