ಕಾಫಿ ಪ್ಲಾಂಟೇಶನ್ ಒತ್ತುವರಿ ಜಮೀನು: ಗುತ್ತಿಗೆ ನಿಯಮ ರಚನೆಗೆ ಒಪ್ಪಿಗೆ
Team Udayavani, Feb 21, 2023, 6:21 AM IST
ಬೆಂಗಳೂರು: ಕಾಫಿ ಪ್ಲಾಂಟೇಷನ್ ಒತ್ತುವರಿ ಕಂದಾಯ ಜಮೀನು ಗುತ್ತಿಗೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕಾಫಿ ಬೆಳೆಗಾರರ ಜತೆ ಸೋಮವಾರ ಸಭೆ ನಡೆಸಿದ ಅವರು, ಕಾಫಿ ಪ್ಲಾಂಟೇಷನ್ ಬೆಳೆಗಾರರಿಗೆ ಒತ್ತುವರಿ ಕಂದಾಯ ಜಮೀನು ಗುತ್ತಿಗೆ ಆಧಾರದಲ್ಲಿ ನೀಡುವ ಸಂಬಂಧ ನಿಯಮ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಒಂದು ವರ್ಷದ ಗುತ್ತಿಗೆಗೆ ಒಂದರಿಂದ ಹತ್ತು ಎಕರೆವರೆಗೆ ಎರಡು ಸಾವಿರ ರೂ., 10 ರಿಂದ 20 ಎಕರೆವರೆಗೆ ಎರಡೂವರೆ ಸಾವಿರ ರೂ. ಶುಲ್ಕ ವಿಧಿಸುವ ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ, ಪಂಗಡದವರಿಗೆ ಸಾಮಾನ್ಯ ವರ್ಗದ ಬೆಳೆಗಾರರಿಗೆ ಶುಲ್ಕದ ಶೇ 50 ಭಾಗ ವಿಧಿಸುವ ಬಗ್ಗೆ ಸಭೆಯಲ್ಲಿ ಚರ್ಚೆನಡೆಸಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.
ಗುತ್ತಿಗೆ ಆಧಾರದಲ್ಲಿ ಮೇಲೆ ನೀಡಿದ ಜಮೀನುಗಳಿಗೆ ಸಾಲ ಸೌಲಭ್ಯವನ್ನು ರಾಷ್ಟ್ರೀಕೃತ, ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕ್ಗಳಿಂದ ಕೊಡುವ ಕುರಿತು ಹಾಗೂ ಗುತ್ತಿಗೆ ಪಡೆದವರ ಮರಣ ನಂತರ ವಾರಸುದಾರರಿಗೆ ಗುತ್ತಿಗೆ ವರ್ಗಾವಣೆ ಮಾಡಬೇಕು ಹಾಗೂ ಸರ್ಕಾರದ ಕರಾರಿನಂತೆ ಮುಂದುವರೆಸಿಕೊಂಡು ಹೋಗುವ ಬಗ್ಗೆ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಪ್ಲಾಂಟೇಷನ್ ಬೆಳೆಗಾರರಿಗೆ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಕುರಿತು ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ವಿಶೇಷವಾಗಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ಕರೆದು ಅಭಿನಂದಿಸಲಾಗುವುದು ಎಂದು ಕಾಫಿ ಪ್ಲಾಂಟರ್ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್ ತಿಳಿಸಿದರು.
ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂ, ಪ್ರಧಾನ ಕಾರ್ಯದರ್ಶಿ ಕೆ.ಬಿ.ಕೃಷ್ಣಪ್ಪ, ಕಾಫಿ ಪ್ಲಾಂಟರ್ಷ್ ಫೆಡರೇಶನ್ ಅಧ್ಯಕ್ಷ ಪ್ರಕಾಶ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?