ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್


Team Udayavani, Apr 8, 2020, 1:08 AM IST

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ವೈರಸ್ ಹಾವಳಿಯನ್ನು ಹತ್ತಿಕ್ಕುವ ಸಲುವಾಗಿ ಭಾರತದಲ್ಲಿ 21 ದಿನಗಳ ಲಾಕ್‌
ಡೌನ್‌ ಜಾರಿಯಲ್ಲಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲೂ ಜನಜೀವನ ಮನೆಗಳಿಗೇ
ಸೀಮಿತವಾಗಿಬಿಟ್ಟಿದೆ. ಆದರೆ ಹೀಗೆ ಏಕಾಏಕಿ ಎಲ್ಲರೂ ಮನೆಯಲ್ಲೇ ಕೂರುವಂತಾಗಿರುವುದರಿಂದ ಬಗೆಬಗೆಯ ಸೈಡ್‌ ಎಫೆಕ್ಟ್ಸ್ ಕೂಡ ಕಾಣಿಸಲಾರಂಭಿಸಿವೆ. ಇದರಲ್ಲಿ ಪ್ರಮುಖವಾದದ್ದೆಂದರೆ, ಕೆಲವು ದಿನಗಳಿಂದ ಜಗತ್ತಿನಾದ್ಯಂತ ಜನರಲ್ಲಿ ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಪ್ರಮಾಣ ಹೆಚ್ಚುತ್ತಿರುವುದು.

ಇಂಡಿಯನ್‌ ಸೈಕಿಯಾಟ್ರಿ ಸೊಸೈಟಿಯ ಒಂದು ಸಮೀಕ್ಷೆಯ ಪ್ರಕಾರ, ಮಾನಸಿಕ ಒತ್ತಡದಿಂದ ಬಳಲುತ್ತಿರುವವರ ಹಾಗೂ ತತ್ಪರಿಣಾಮವಾಗಿ ಮನೋವೈದ್ಯರ ಬಳಿ ತೆರಳುತ್ತಿರುವವರ ಸಂಖ್ಯೆ ಶೇ. 20ರಷ್ಟು ಅಧಿಕವಾಗಿದೆಯಂತೆ. ಇದು ಒಂದು ವಾರದಲ್ಲಿ ದಾಖಲಾದ ಅಂಕಿಅಂಶಗಳು ಎನ್ನುವುದು ಗಮನಿಸಬೇಕಾದ ಸಂಗತಿ!
ಈ ಅಧ್ಯಯನ ವರದಿಯನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ. ಸತತ 24 ಗಂಟೆ ಮನೆಯಲ್ಲೇ ಇರುವುದರಿಂದಾಗಿ ನಮ್ಮ ಸ್ವಭಾವದಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುವುದು ಹಾಗೂ ಈ ಹೊಸ ಜೀವನ ಶೈಲಿಗೆ ಒಗ್ಗಿಕೊಳ್ಳುವವರೆಗೂ ಕಿರಿ ಕಿರಿಯಾಗುವುದು, ಬೇಸರವಾಗುವುದು, ಆತಂಕವಾಗುವುದು ಸಹಜವೇ.

ಕೋವಿಡ್ 19 ವೈರಸ್ ನಿಂದಾಗಿ ಭಾರತೀಯ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದೆ. ಅನೇಕ ಉದ್ಯೋಗಗಳು ರಾತೋ ರಾತ್ರಿ ನಿಂತುಬಿಟ್ಟಿವೆ. ಜನರಿಗೆ ಭವಿಷ್ಯದ ಬಗ್ಗೆ ಅತಂತ್ರತೆ ಕಾಡಲಾರಂಭಿಸಿದೆ. ಕೆಲಸ ಇರುತ್ತದೋ ಹೋಗುತ್ತದೋ ಎಂಬ ಭಯ ಹಾಗೂ ಆಹಾರ ಪದಾರ್ಥಗಳ ಲಭ್ಯತೆಯ ಬಗೆಗಿನ ‘ಅನಗತ್ಯ’ ಆತಂಕಗಳು ಒಂದೆಡೆಯಾದರೆ, ಕೊರೊನಾ ಸೋಂಕಿನ ಸಾವು-ನೋವುಗಳ ಸುದ್ದಿಗಳು ಅವರನ್ನು ಮತ್ತಷ್ಟು ಕಂಗಾಲಾಗಿಸುತ್ತಿವೆ. ಇದನ್ನು ಹೊರತುಪಡಿಸಿಯೂ ಆಧುನಿಕ ಜಗತ್ತಿನ ಗದ್ದಲದ ಬದುಕಲ್ಲಿ ವ್ಯಸ್ತವಾಗಿದ್ದ ಜನರಿಗೆ ಏಕಾಏಕಿ ಕಟ್ಟಿ ಹಾಕಿದಂತಾಗಿರುವುದರಿಂದ ಒಂಟಿತನವೂ ಕಾಡಲಾರಂಭಿಸಿದೆ.

ಸೋಷಿಯಲ್‌ ಮೀಡಿಯಾ ಬಂದಾಗಿನಿಂದ ನಾವೆಲ್ಲ ಹತ್ತಿರವಾಗಿದ್ದೇವೆ ಎಂಬ ವಾದವಿದೆಯಾದರೂ, ಇದರ ಹೊರತಾಗಿಯೂ ಜನರು ಒಂಟಿತನದ ಭಾವನೆಯಲ್ಲಿ ಒದ್ದಾಡುತ್ತಿರುವುದು ದುರಂತವೇ ಸರಿ. ಮಕ್ಕಳು – ವೃದ್ಧರಾದಿಯಾಗಿ ಎಲ್ಲರೂ ಒಂದು ರೀತಿಯ ಈ ರೀತಿಯ ಭಾವನೆ ಅನುಭವಿಸುತ್ತಿರುವುದರಿಂದ ಮಾನಸಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗುವುದು ಸಹಜವೇ.

ಅದರಲ್ಲೂನಿತ್ಯ ಹೊರಗೆ ಸುತ್ತಾಡುತ್ತಾ, ಹತ್ತಾರು ಜನರೊಂದಿಗೆ ಹರಟುತ್ತಾ ಇರುತ್ತಿದ್ದ ಹಿರಿಯರನ್ನೂ ಕೂಡ ಕೋವಿಡ್ 19 ವೈರಸ್ ಹಾವಳಿ ಹೈರಾಣು ಮಾಡುತ್ತಿದೆ. ಆದಾಗ್ಯೂ ಎಲ್ಲರೂ ಅರ್ಥಮಾಡಿಕೊಳ್ಳಬೇಕಾದ ವಿಷಯವೆಂದರೆ, ಸುತ್ತಲೂ ಹತ್ತು ಜನರಿದ್ದರೂ ಮನುಷ್ಯನಿಗೆ ಒಂಟಿ ಭಾವ ಕಾಡುವುದು ಸಹಜವೇ. ಆದರೆ, ಅದರಿಂದ ತಪ್ಪಿಸಿಕೊಳ್ಳುವುದಕ್ಕೆ ನಾವು ಸೋಷಿಯಲ್‌ ಮೀಡಿಯಾಕ್ಕೆ ಮೊರೆ ಹೋಗಬೇಕಾದ ಅಗತ್ಯವಿಲ್ಲ.

ಸತ್ಯವೇನೆಂದರೆ, ಏಕಾಂತವೆನ್ನುವುದು ನಮ್ಮನ್ನು ನಾವು ಅರ್ಥಮಾಡಿಕೊಳ್ಳಲು, ನಾವು ನಡೆದು ಬಂದ ಹಾದಿಯನ್ನು ವಿಶ್ಲೇಷಿಸಲು, ತಪ್ಪುಗಳನ್ನು ತಿದ್ದಿಕೊಳ್ಳಲು, ಭವಿಷ್ಯಕ್ಕೆ ನೀಲ ನಕ್ಷೆ ರಚಿಸಲು, ಸೂಕ್ತ ತಯಾರಿ ಮಾಡಿಕೊಳ್ಳಲು ಎದುರಾದ ಸದವಕಾಶವೂ ಹೌದು. ಮನುಷ್ಯ ಸಂಘಜೀವಿ, ಅವನಿಗೆ ಇನ್ನೊಬ್ಬ ಮನುಷ್ಯನ ಒಡನಾಟ ಬಹುಮುಖ್ಯ. ಆದರೆ ಈಗ ಕೊರೊನಾ ಹರಡುವ ಪರಿ ಹೇಗಿದೆಯೆಂದರೆ, ಒಬ್ಬರನ್ನು ಕಂಡರೆ ಇನ್ನೊಬ್ಬರು ಹೆದರುವಂತಾಗಿದೆ.

ಹೀಗೆರುವುದು, ಈ ಕ್ಷಣದ ಅಗತ್ಯ ಎನ್ನುವ ಸತ್ಯವನ್ನು ಒಪ್ಪಿಕೊಳ್ಳೋಣ. ಲಾಕ್‌ ಡೌನ್‌ ಬಗ್ಗೆ ಕೊರಗದೆ, ಇದು ನಮ್ಮ ಆತ್ಮಾವಲೋಕನಕ್ಕೆ ಸಿಕ್ಕಿದ ಅವಕಾಶವೆಂದು ಭಾವಿಸೋಣ. ಮಾನಸಿಕ ಒತ್ತಡದಿಂದ – ಖಿನ್ನತೆಯಿಂದ ದೂರವಾಗುವುದಕ್ಕೆ ಮನೆಯವರೊಂದಿಗೆ ಮಾತನಾಡುವುದು ಉತ್ತಮ ಮಾರ್ಗ ಎನ್ನುವುದೂ ನೆನಪಿರಲಿ.

ಪರಿಸ್ಥಿತಿಯನ್ನು ಹತೋಟಿಗೆ ತರಲು ಸರಕಾರ, ಆರೋಗ್ಯ ಇಲಾಖೆಗಳು, ವೈದ್ಯಕೀಯ ಸಿಬ್ಬಂದಿ ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ. ನಾವು ಮನೆಯಲ್ಲಿದ್ದು ನಮ್ಮ ದೈಹಿ ಕ-ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಈ ಹೋರಾಟಕ್ಕೆ ನಮ್ಮದೇ ಆದ ರೀತಿಯಲ್ಲಿ ಕೊಡುಗೆ ಕೊಡೋಣ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.