ಆರ್ಥಿಕ ಸ್ವಾವಲಂಬನೆ ಅಧ್ಯಯನಕ್ಕೆ ಸಮಿತಿ ರಚನೆ
Team Udayavani, Dec 2, 2021, 12:24 PM IST
ಬೆಂಗಳೂರು: ಇಂಧನ ಇಲಾಖೆ ಬೆನ್ನಲ್ಲೇ ರಾಜ್ಯ ಸಾರಿಗೆ ನಿಗಮಗಳ ಆರ್ಥಿಕ ಸ್ವಾವ ಲಂಬನೆ ಹಾಗೂ ಸಂಪನ್ಮೂಲ ಕ್ರೋಢೀಕರಣ ಗಳಿಗೆ ಸಂಬಂಧಿಸಿ ದಂತೆಯೂ ಅಧ್ಯಯನಕ್ಕೆ ಮುಂದಾಗಿ ರುವ ಸರ್ಕಾರ, ಇದಕ್ಕಾಗಿ ಸಮಿತಿಯನ್ನು ರಚಿಸಿ ಮಂಗಳವಾರ ಆದೇಶ ಹೊರಡಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ಏಕಸದಸ್ಯ ಸಮಿತಿ ರಚಿಸಲಾಗಿದ್ದು, ಇದು ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿದೆ. ಅದನ್ನು ಆಧರಿಸಿ ಸರ್ಕಾರ ಸಾರಿಗೆ ನಿಗಮಗಳ ಚೇತರಿಕೆಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.
ಸಮಿತಿಯು ಪ್ರಮುಖವಾಗಿ ಕೆಎಸ್ ಆರ್ಟಿಸಿ, ಎನ್ಡಬ್ಲ್ಯು ಕೆಆರ್ಟಿಸಿ, ಕೆಕೆ ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಮರುವಿನ್ಯಾಸ, ಭೂಮಿ, ಕಟ್ಟಡ ಮತ್ತಿತರ ಸ್ಥಿರಾಸ್ತಿಗಳು, ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಮತ್ತಿತರ ವಿಷಯಗಳನ್ನು ಪರಿಗಣಿಸಿ ಅಧ್ಯಯನ ನಡೆಸಲಿದೆ.
ಸಾರಿಗೆ ಕ್ಷೇತ್ರದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಿತಿ ಗುರುತಿಸುವ ಇತರೆ ಯಾವುದೇ ಅಂಶಗಳನ್ನು ಒಳಗೊಂಡು ಅಧ್ಯಯನ ನಡೆಸಬಹುದು. ಸಮಿತಿ ಎಲ್ಲ ನಾಲ್ಕೂ ನಿಗಮಗಳು ಸಹಕಾರ ನೀಡಬೇಕು. ಸಮಿತಿ ಅಧ್ಯಕ್ಷರ ಸಂಭಾವನೆ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸ ಲಾಗುವುದು ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ