Lok Sabha Election”ಮಂಡ್ಯದಿಂದ ಸ್ಪರ್ಧೆಗೆ ಒತ್ತಡ ಇದೆ, ಇಂದು ಸಂಜೆ ಅಂತಿಮ’
Team Udayavani, Mar 25, 2024, 7:25 AM IST
ಬೆಂಗಳೂರು: ಮೈತ್ರಿ ಪಕ್ಷಗಳಿಂದ ಮಂಡ್ಯದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲಕ್ಕೆ ಸೋಮವಾರ, ಮಾ. 25ರಂದು ತೆರೆಬೀಳುವ ಸಾಧ್ಯತೆ ಇದೆ. ಈ ಸಂಬಂಧ ಜೆಡಿಎಸ್ ನಾಯಕರು, ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆದಿದ್ದು, ಅಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಇದನ್ನು ಸ್ವತಃ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಿಂದ ತಾವೇ ಕಣಕ್ಕಿಳಿಯಬೇಕು ಎಂದು ಒತ್ತಾಯಿಸಿ ಅಭಿಮಾನಿಗಳು, ಕಾರ್ಯಕರ್ತರು ಭಾನುವಾರ ಕುಮಾರಸ್ವಾಮಿ ಅವರ ನಿವಾಸದ ಮುಂದೆ ಜಮಾಯಿಸಿ ಪಟ್ಟುಹಿಡಿದರು. ಈ ಸಂದರ್ಭದಲ್ಲಿ ಅವರು ಒಂದು ದಿನದಲ್ಲಿ ಮಂಡ್ಯ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ನಿರಾಸೆ ಉಂಟುಮಾಡುವುದಿಲ್ಲ ಎಂದು ಭರವಸೆ ನೀಡಿದರು.
ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡುವುದಿಲ್ಲ ಎಂದು ಈ ಹಿಂದೆ ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ ಅವರು, ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ಸೋಮವಾರ ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ಯಾವುದೇ ಕಾರಣಕ್ಕೂ ನಿರಾಸೆ ಉಂಟುಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಮಂಡ್ಯದಲ್ಲಿ ನನಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು.
ಇದಕ್ಕೆ ಮುನ್ನ ಮಾತನಾಡಿದ ನಿಖೀಲ್ ಕುಮಾರಸ್ವಾಮಿ, ಮಂಡ್ಯದಲ್ಲಿ ತಂದೆಯವರೇ ಸ್ಪರ್ಧಿಸಲಿ ಎಂದು ಒತ್ತಡ ಇದೆ. ಸೋಮವಾರ ಸಂಜೆಯೊಳಗೆ ಅಂತಿಮ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ