ಭ್ರೂಣಹತ್ಯೆ ಕೊಲೆಗೆ ಸಮ- ತಡೆಗೆ ಸಮಗ್ರ ನೀತಿ, ಜಂಟಿ ಕಾರ್ಯಾಚರಣೆಗೆ ಸರಕಾರ ನಿರ್ಧಾರ
Team Udayavani, Dec 15, 2023, 12:59 AM IST
ಬೆಳಗಾವಿ: ಹೆಣ್ಣುಭ್ರೂಣ ಹತ್ಯೆಯನ್ನು ಕೊಲೆಗೆ ಸಮಾನ ಅಪ ರಾಧ ಎಂದು ಪರಿಗಣಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ತಡೆಗೆ ಸಮಗ್ರ ನೀತಿ ರೂಪಿಸುವ ಜತೆಗೆ ಪೊಲೀಸ್ ಇಲಾಖೆಯ ಜತೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.
ಭ್ರೂಣ ಹತ್ಯೆ ಪ್ರಕರಣ ಬಗ್ಗೆ ವಿಧಾನಸಭೆಯಲ್ಲಿ ನಡೆದ ಅರ್ಧ ತಾಸು ಕಾಲಾವಧಿಯ ಚರ್ಚೆಗೆ ಉತ್ತರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ವಿಷಯ ತಿಳಿಸಿದ್ದಾರೆ. ಭ್ರೂಣಹತ್ಯೆ ತಪ್ಪಿತಸ್ಥರ ವಿರುದ್ಧ ಐಪಿಎಸ್ ಸೆಕ್ಷನ್ಗಳನ್ನು ಹಾಕುವುದಕ್ಕೆ ಕಾಯ್ದೆ ತಿದ್ದುಪಡಿ ಅಗತ್ಯವಿದ್ದು, ಮುಂದಿನ ಅಧಿವೇಶನದಲ್ಲಿ ಸೂಕ್ತ ತಿದ್ದುಪಡಿ ಜಾರಿಗೆ ತರಲಾಗು ವುದು ಎಂದರು.
ಭ್ರೂಣಹತ್ಯೆ ತಡೆಯಬೇಕಿದ್ದರೆ ಆರೋಪಿಗಳ ಜತೆಗೆ ಇದಕ್ಕೆ ಸಹಕರಿಸುವ ಕುಟುಂಬ, ವ್ಯಕ್ತಿಗಳಿಗೂ ದಂಡನೆಯಾಗಬೇಕಿದೆ. ಐಪಿಸಿ ಅಡಿ ಪ್ರಕರಣ ದಾಖಲಿಸಿದಾಗ ಮಾತ್ರ ಭಯ ಸೃಷ್ಟಿಯಾಗುತ್ತದೆ. ಹಿಂದೆ ಸೆಕ್ಷನ್ 312ರ ಅನ್ವಯ ಪ್ರಕರಣ ದಾಖಲಿಸಲಾಗುತ್ತಿತ್ತು. ಇದರಿಂದ ಆರೋಪಿಗಳು ಸುಲಭವಾಗಿ ಜಾಮೀನು ಪಡೆಯುತ್ತಿದ್ದಾರೆ. ಸೆಕ್ಷನ್ 315, 316ರ ಅನ್ವಯ ಪ್ರಕರಣ ದಾಖಲಿಸಲು ಈಗ ಸೂಚನೆ ನೀಡಲಾಗಿದ್ದು, 302 ಅನ್ವಯ ಪ್ರಕರಣ ದಾಖಲಿಸಲು ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಕಾನೂನು ಇಲಾಖೆ ಜತೆ ಸೇರಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸಮಗ್ರ ನೀತಿ ರೂಪಿಸಲಾಗುವುದು ಎಂದು ವಿವರಿಸಿದರು.
ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ನೀಡಿದ ಸಲಹೆಯನ್ನು ಸಚಿವರು ಪುರಸ್ಕರಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ