NITTE ಪರಿಗಣಿತ ವಿ.ವಿ.ಯಲ್ಲಿ 6 ದಿನಗಳ ತರಬೇತಿಗೆ ಚಾಲನೆ
ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್
Team Udayavani, Feb 19, 2024, 11:56 PM IST
ಉಳ್ಳಾಲ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಸ್ಪರ ಜ್ಞಾನ ವಿನಿಮಯ ಹಾಗೂ ಕೌಶಲಗಳನ್ನು ಅರಿಯಲು ಕೋರ್ಸ್ ಸಹಕಾರಿ. ಎರಡನೇ ವರ್ಷ ನಿಟ್ಟೆ ವಿ.ವಿ.ಯಲ್ಲಿ ನಡೆಸುತ್ತಿರುವ ಕೋರ್ಸಿಗೆ ಆಡಳಿತ ಸಂಸ್ಥೆಯ ಉತ್ತಮವಾದ ಸಹಕಾರದಿಂದ ಸಾಧ್ಯವಾಗಿದೆ.
ಸರ್ಜನ್ಗಳು ಕೋರ್ಸಿನ ಸದುಪಯೋಗವನ್ನು ಪಡೆಯಬಹುದು ಎಂದು ಇಂಗ್ಲೆಂಡ್ನ ಸಿಸಿಆರ್ಐಎಸ್ಪಿ, ಆರ್ಸಿಎಸ್ನ ಕೋರ್ಸ್ ನಿರ್ದೇಶಕ ಡಾ| ಇಯಾನ್ ಮಹೇಶ್ವರನ್ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿ.ಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಬೆಳ್ಳಿಹಬ್ಬದ ಪ್ರಯುಕ್ತ ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಶ್ರಯದಲ್ಲಿ (ಸಿಸಿಆರ್ಐಎಸ್ಪಿ, ಕೋರ್ಸ್) ತೀವ್ರ ನಿಗಾದಲ್ಲಿರುವ ಶಸ್ತ್ರಚಿಕಿತ್ಸಾ ರೋಗಿಯ ಆರೈಕೆ ಕುರಿತು ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ 6 ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ಎನ್. ವಿನಯ ಹೆಗ್ಡೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿದ್ದ ನಿಟ್ಟೆ ವಿ.ವಿ.ಯ ಉಪಕುಲಾಧಿಪತಿ ಎನ್. ಶಾಂತಾರಾಮ ಶೆಟ್ಟಿ ಮಾತನಾಡಿ, ಇಂಗ್ಲೆಂಡ್ನ ರಾಯಲ್ ಕಾಲೇಜಿನ ಸರ್ಜನ್ಗಳು ನೀಡುತ್ತಿರುವ ಕೋರ್ಸ್ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ವಿಚಾರವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ರೋಗಿಗಳ ಸುರಕ್ಷತೆಗೆ ಆರು ಗುರಿಗಳನ್ನು ಮುಂದಿರಿಸಿದ್ದರೂ ಅಮೆರಿಕದಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರದಲ್ಲೇ ರೋಗಪತ್ತೆ ಹಚ್ಚೆ ಹಚ್ಚುವಿಕೆ ಸಾಧ್ಯವಾಗದೆ ವಾರ್ಷಿಕ 2.14 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ಗುರಿಯನ್ನು ಕೋರ್ಸ್ ಹೊಂದಿದೆ. ಹಾಸಿಗೆಯಿಂದ ಮರುಜೀವನ ಕೊಡುವಂತಹ ಕಾರ್ಯಕ್ಕೆ ವೈದ್ಯಕೀಯ ಲೋಕ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಾಚರಿಸಬೇಕಿದೆ ಎಂದರು. ಈ ಸಂದರ್ಭ ನಿಟ್ಟೆ ವಿ.ವಿ. ಕುಲಪತಿ ಡಾ| ಎಂ.ಎಸ್ ಮೂಡಿತ್ತಾಯ, ಕ್ಷೇಮ ಡೀನ್ ಡಾ| ಪಿ ಎಸ್. ಪ್ರಕಾಶ್ ಉಪಸ್ಥಿತರಿದ್ದರು.
ಕೋರ್ಸ್ ಸಂಘಟಕ ಹಾಗೂ ಕ್ಷೇಮ ಸಿಟಿವಿಎಸ್ ವಿಭಾಗದ ಮುಖ್ಯಸ್ಥ ಡಾ| ಜಯಕೃಷ್ಣನ್ ಸ್ವಾಗತಿಸಿದರು. ಕ್ಷೇಮ ಜನರಲ್ ಸರ್ಜರಿ ವಿಭಾಗ ಮುಖ್ಯಸ್ಥ ಡಾ| ಕೆ.ಆರ್. ಭಗವಾನ್ ವಂದಿಸಿದರು.ಡಾ| ಐಶ್ವರ್ಯ ರಂಜಲ್ಕರ್ ಮತ್ತು ಡಾ| ಮೀರಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್