Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ


Team Udayavani, Jan 11, 2024, 9:16 PM IST

vij ramu

ಹೊಸಪೇಟೆ: ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಬಹಿಷ್ಕಾರ ಮಾಡಿ ಇಡೀ ಭಾರತದ ಹಿಂದೂಗಳನ್ನು ಅವಮಾನ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಬಾಬರ್ ಮೇಲೆ ಬಲು ಪ್ರೀತಿ ಇದೆ. ಹಿಂದೂಗಳ ಆರಾಧ್ಯ ದೈವ ರಾಮನ ಮೇಲೆ ಪ್ರೀತಿ ಇಲ್ಲ. ಶ್ರೀರಾಮ ಮಂದಿರ ಧ್ವಂಸ ಮಾಡಿದ ಬಾಬರ್‌ನ ಸಮಾಧಿಗೆ ಕಾಂಗ್ರೆಸ್‌ನವರು ಭೇಟಿ ನೀಡುತ್ತಾರೆ. ಆದರೆ, ಶ್ರೀರಾಮ ಮಂದಿರ ಉದ್ಘಾಟನೆಗೆ ಬರುತ್ತಿಲ್ಲ. ಇವರು ಯಾವತ್ತಿದ್ದರೂ ಡೋಂಗಿ ಜಾತ್ಯತೀತವಾದಿಗಳು. ಜಾತ್ಯತೀತದ ಮೇಲೆ ರಾಜಕಾರಣ ಮಾಡುತ್ತಾ ಈಗ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊಘಲ್ ದೊರೆ ಬಾಬರ್‌ನ ಮೇಲೆ ಪ್ರೀತಿ ಇರುವುದರಿಂದಲೇ 1952 ರ ಸೆಪ್ಟೆಂಬರ್‌ನಲ್ಲಿ ಪಂಡಿತ ಜವಾಹರ್ ಲಾಲ್ ನೆಹರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು. 1968 ರಲ್ಲಿ ಇಂದಿರಾ ಗಾಂಧಿ, 1976ರಲ್ಲಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಮತ್ತು 2006 ರಲ್ಲಿಮನಮೋಹನ್ ಸಿಂಗ್ ಹಾಗೂ ರಾಹುಲ್ ಗಾಂಧಿ ಅವರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು ಎಂದು ಕುಟುಕಿದರು.
ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಸುದೀರ್ಘ ಹೋರಾಟದ ಇತಿಹಾಸ ಇದೆ. ಸೋಮನಾಥ ದೇವಾಲಯದ ಉದ್ಘಾಟನೆ ವೇಳೆಯೂ ಕಾಂಗ್ರೆಸ್ ಬಹಿಷ್ಕಾರ ಮಾಡಿತ್ತು. ಈಗ ಶ್ರೀರಾಮ ಮಂದಿರ ಉದ್ಘಾಟನೆ ವೇಳೆಯೂ ಇದೇ ನಿಲುವು ತಾಳಿದೆ. ಕಾಂಗ್ರೆಸ್ ನಾಯಕರು ಡೋಂಗಿ ಜಾತ್ಯತೀತ ರಾಜಕಾರಣ ಮಾಡುತ್ತಾ ಬರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ನಾಯಕಿ ಸೋನಿಯಾ ಗಾಂಧಿ ಅವರು ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಿಲ್ಲ. ಇದು, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕ್ರಮ ಎಂದು ಆರೋಪಿಸುತ್ತಿದ್ದಾರೆ. ಇದು ದೇಶದ ಸರ್ವ ಹಿಂದೂಗಳ ಕಾರ್ಯಕ್ರಮ ಆಗಿದೆ. ಇದರಲ್ಲಿ ರಾಜಕೀಯ ಹುಡುಕಬಾರದು. ಇಡೀ ದೇಶವೇ ಹೆಮ್ಮೆ ಪಡುವ ಕಾರ್ಯಕ್ರಮ ಇದಾಗಿದೆ ಎಂದರು.

ಲೋಕಸಭೆ, ರಾಜ್ಯಸಭೆಗೆ ಸಂಸದರು ಗೈರಾಗುವುದನ್ನು ಕಂಡಿದ್ದೇವೆ. ಆದರೆ, ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಗೈರಾಗುತ್ತಿರುವುದು ಶೋಭೆ ತರುವ ವಿಷಯವಲ್ಲ. ದೇಶದಲ್ಲಿ ರಾಮಜಪವನ್ನು ವಿರೋಧ ಮಾಡುತ್ತಿರುವುದು ಸರಿಯಲ್ಲ. ಪಿ.ವಿ. ನರಸಿಂಹರಾವ್ ಅವರ ಅವಧಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು ಎಂಬುದು ಸುಳ್ಳು. ಆಗ ಕರಸೇವಕರ ಮೇಲೆ ದೇಶಾದ್ಯಂತ ಪ್ರಕರಣ ದಾಖಲಿಸಲಾಗಿತ್ತು. ಈಗ ರಾಜ್ಯದಲ್ಲೂ ಕರಸೇವಕರನ್ನು ಬಂಧನ ಮಾಡಲಾಗುತ್ತಿದೆ. ಇಂತಹ ದ್ವೇಷದ ರಾಜಕಾರಣ ಒಳ್ಳೆಯದಲ್ಲ.ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕಪಾಠ ಕಲಿಸುತ್ತಾರೆ ಎಂದರು.

ಶ್ರೀರಾಮಮಂದಿರ ನಿರ್ಮಾಣವನ್ನೇ ಬಿಜೆಪಿ ಎಲೆಕ್ಷನ್ ಪ್ರಚಾರಾಂದೋಲನ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು, ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಸುದೀರ್ಘ ಹೋರಾಟ ಇದೆ. ಋಷಿಮುನಿಗಳ ಪುಣ್ಯಭೂಮಿ ಭಾರತವಾಗಿದೆ. ದೇವಸ್ಥಾನದ ವಿಷಯದಲ್ಲಿ ರಾಜಕಾರಣ ಮಾಡಲಾಗುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಿಂದಲೂ ನಾಸ್ತಿಕರು. ಅವರು ದೇವರನ್ನು ನಂಬಲ್ಲ. ಅಲ್ಲಲ್ಲಿ, ಆಗಾಗ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಾರೆ, ಹಾಗಾಗಿ ಮುಜರಾಯಿ ಇಲಾಖೆ ಜನವರಿ 22 ರಂದು ರಾಜ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೊರಡಿಸಿರುವ ಆದೇಶ ತಮಗೆ ಗೊತ್ತಿಲ್ಲ ಎಂದಿರುತ್ತಾರೆ. ಮುಜರಾಯಿ ಇಲಾಖೆ ಸಚಿವರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತಮ ಆದೇಶವನ್ನೇ ಹೊರಡಿಸಿದ್ದಾರೆ. ರಾಜ್ಯದ ಹಿಂದೂಗಳ ಭಾವನೆಗೆ ಬೆಲೆ ನೀಡಿದ್ದಾರೆ ಎಂದರು.

ಶಾಸಕ ಜರ್ನಾದರ್ನ ರೆಡ್ಡಿ ಅವರು ನಮಗೆ ಬೆಳೆಸಿದವರ ಜೊತೆಗೆ ಅನ್ನ ನೀಡಿದವರು, ಅವರ ಕುಟುಂಬದ ಬಗ್ಗೆ ನಮಗೆ ಅಪಾರ ಗೌರವ ಇದೆ. ರೆಡ್ಡಿಯವರಿಗೆ ಜನ್ಮದಿನದ ಶುಭಾಶಯ ಕೋರುವೆ. ಜನಾರ್ದನ ರೆಡ್ಡಿಯವರಿಗೆ ಒಳ್ಳೆಯದಾಗಲಿ. ಅವರು ಬಿಜೆಪಿಗೆ ಮರಳಿದರೆ ನನ್ನ ಅಭ್ಯಂತರವೇನಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖಂಡರಾದ ಕಾಸಟ್ಟಿ ಉಮಾಪತಿ, ಸಾಲಿಸಿದ್ದಯ್ಯಸ್ವಾಮಿ, ದೇವರಮನಿ ಶ್ರೀನಿವಾಸ್, ನಗರಸಭೆ ಸದಸ್ಯರಾದ ತಾರಿಹಳ್ಳಿ ಜಂಬುನಾಥ, ಹನುಮಂತಪ್ಪ ಬುಜ್ಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

b k shivani

Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.