ಕಾಂಗ್ರೆಸ್‌ ಅಭ್ಯರ್ಥಿ ಮೊದಲು ಬದ್ಧತೆ ಸ್ಪಷ್ಟ ಪಡಿಸಲಿ; ವಿ.ಸುನಿಲ್‌ಕುಮಾರ್‌

ಕಾರ್ಕಳ: ಅಭ್ಯರ್ಥಿಗೆ ವಿ.ಸುನಿಲ್‌ಕುಮಾರ್‌ ಸವಾಲು

Team Udayavani, Apr 24, 2023, 1:27 PM IST

ಕಾಂಗ್ರೆಸ್‌ ಅಭ್ಯರ್ಥಿ ಮೊದಲು ಬದ್ಧತೆ ಸ್ಪಷ್ಟ ಪಡಿಸಲಿ; ವಿ.ಸುನಿಲ್‌ಕುಮಾರ್‌

ಕಾರ್ಕಳ: ಕಳೆದ ಭಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್‌ ಬಯಸಿ ಸಿಗದೇ ವಂಚಿತರಾದಗ ಜೀವಂತವಿದ್ದ ಗೋಪಾಲ ಭಂಡಾರಿಯವರ ಶವಯಾತ್ರೆಯನ್ನು ಸಾರ್ವಜನಿಕವಾಗಿ ನಡೆಸಿದ ಕಾರ್ಕಳ ಕಾಂಗ್ರೆಸ್‌ ಅಭ್ಯರ್ಥಿಗೆ ಈಗ 4 ವರ್ಷದ ಬಳಿಕ ಭಂಡಾರಿಯವರ ನೆನಪಾಗಿದೆ. ಪುತ್ಥಳಿಕೆ ನಿರ್ಮಿಸುವುದಕ್ಕೆ ಅವರಿಗೆ ಜ್ಞಾನೋದಯವಾಗಿದೆ. ಮೊದಲು ತಾವು ತಮ್ಮ ಬದ್ಧತೆ ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಸವಾಲು ಹಾಕಿದ್ದಾರೆ.

ಹೆಬ್ರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಟಿಕೆಟ್‌ ಸಿಗದಿದ್ದಾಗ ಜೀವಂತವಿದ್ದ ವ್ಯಕ್ತಿಯ ಶವಯಾತ್ರೆ ನಡೆಸಿ ಸುಟ್ಟರು. ಊರೆಲ್ಲ ಸಂಭ್ರಮಿಸಿದರು. ಅಂದು ಕಣ್ಣೀರು ಹಾಕುವಂತೆ ಮಾಡಿ ಮಾನವೀಯತೆ ಮರೆತು ಅಮಾನವೀಯವಾಗಿ ನಡೆಸಿಕೊಂಡವರು ಇಂದು ಅವರ ಹೆಸರಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ.

ಅಂದು ಗೌರವ ಕೊಡದವರು ಈಗ ಪುತ್ಥಳಿಕೆ ನಿರ್ಮಾಣದಂತಹ ಭರವಸೆ ನೀಡುವ ನಾಟಕವಾಡುತ್ತಿದ್ದಾರೆ. ಅಂದಿನ ಆ ಘೋರ ಕಹಿ ಘಟನೆ ಶವಯಾತ್ರೆ ನಡೆಸಿದ ನೀವು ಮರೆತರೂ ಕ್ಷೇತ್ರದ ಜನತೆ ಮರೆತಿಲ್ಲ ಎಂದಿರುವ ಅವರು ಟಿಕೆಟ್‌ ಸಿಗದೆ ಇದ್ದಾಗ ಕೀಳು ಮಟ್ಟಕ್ಕೆ ಇಳಿದ ತಾವು 4 ವರ್ಷ ಬಿಜೆಪಿ ಜತೆ ಸಖ್ಯ ಬೆಳೆಸಿಕೊಂಡಿದ್ದಿರಿ. ತಾವೊಬ್ಬ ಅವಕಾಶವಾದಿ ರಾಜಕಾರಣಿಯಾಗಲು ಬಯಸುತ್ತಿದ್ದೀರಿ. ಟಿಕೆಟ್‌ ಸಿಕ್ಕಾಗ ಒಂದು ಪಕ್ಷ, ಒಂದು ನೀತಿ ಸಿಗದೇ ಇದ್ದಾಗ ಇನ್ನೊಂದು ಕಡೆ ವಾಲುವ ನೀವು ನಿಜವಾಗಿಯೂ ಯಾವುದರಲ್ಲಿ ಇದ್ದಿರಿ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಿ, ನಿಮ್ಮ ನಿಜವಾದ ಬದ್ಧತೆ ಏನೆಂಬುದನ್ನು ಬಹಿರಂಗಪಡಿಸಿ ಎಂದರು.

ಜನಪ್ರತಿನಿಧಿಗೆ ಹೇಗೆ ಗೌರವ ಕೊಡಬೇಕೆಂಬುದು ಬಿಜೆಪಿಗೆ ತಿಳಿದಿದೆ. ಕಾರ್ಕಳ ಉತ್ಸವ ಸಂದರ್ಭ ಉತ್ಸವದ ಪ್ರಧಾನ ವೇದಿಕೆಗೆ ಭಂಡಾರಿಯವರ ಹೆಸರಿಟ್ಟು ದೊಡ್ಡ ಮಟ್ಟದ ಗೌರವ ಸಲ್ಲಿಸಿದ್ದೇವೆ. ಅವರಿಗೆ ಸಲ್ಲಿಸಿದ ಗೌರವದ ಬಗ್ಗೆ ಇಡೀ ನಾಡು ಕೊಂಡಾಡಿದೆ. ಅವರಿಗೆ ಸಲ್ಲಬೇಕಾದ ಎಲ್ಲ ಗೌರವವನ್ನು ಬಿಜೆಪಿ ಸಲ್ಲಿಸುತ್ತ ಬಂದಿದೆ. ಮುಂದೆಯೂ ನೀಡುತ್ತದೆ.

ಆದರೆ ಕಾಂಗ್ರೆಸ್‌ ಅಭ್ಯರ್ಥಿಯಾದ ತಾವು ಚುನಾವಣೆ ಹೊತ್ತಲ್ಲಿ ಪುತ್ಥಳಿಕೆ ಇನ್ನಿತರ ವಿಚಾರ ಮುಂದಿಟ್ಟುಕೊಂಡು ಜನರ ಮುಂದೆ ಭಾವನಾತ್ಮಕವಾಗಿ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಮಣಿರಾಜ್‌ ಶೆಟ್ಟಿ, ಮಹಾವೀರ ಹೆಗ್ಡೆ, ಮುಟ್ಲುಪ್ಪಾಡಿ ಸತೀಶ್‌ ಶೆಟ್ಟಿ, ಸತೀಶ್‌ ಪೈ ಸಹಿತ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.