ಮೇಕೆದಾಟು ಯೋಜನೆಯಲ್ಲಿ ಕಾಂಗ್ರೆಸ್ ಕೊಡುಗೆ ಶೂನ್ಯ: ರವಿ ಕುಮಾರ್
Team Udayavani, Feb 26, 2022, 10:15 PM IST
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಕೆದಾಟು ಡಿಪಿಆರ್ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ, ಯೋಜನೆಯನ್ನು ಪ್ರಾರಂಭಿಸಿದ್ದು ಬಿಜೆಪಿ ಸರಕಾರ. ಮೇಕೆದಾಟು, ಎತ್ತಿನಹೊಳೆ ಮತ್ತು ಮಹದಾಯಿ ಯೋಜನೆಗಳಲ್ಲಿ ಕಾಂಗ್ರೆಸ್ ಕೊಡುಗೆ ಏನೂ ಇಲ್ಲ ಎಂದು ಹೇಳಿದರು.
ಅಧಿವೇಶನದಲ್ಲಿ ಪ್ರತಿಭಟನೆ ಮಾಡಿ ಕಲಾಪದ ಸಮಯ ಹಾಳು ಮಾಡಿದ ಕಾಂಗ್ರೆಸ್ ಅವರು ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಸದನದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಬಹುದಿತ್ತು. ಅಲ್ಲಿ ಯಾವುದೇ ಚರ್ಚೆ ನಡೆಸದೆ ಜನವಿರೋಧಿಯಾಗಿ ನಡೆದುಕೊಂಡರು ಆಕ್ರೋಶ ವ್ಯಕ್ತಪಡಿಸಿದರು.