Chhattisgarh: ಕಾಂಗ್ರೆಸ್‌ ಗ್ರಹಣ “ಅಧಿಕಾರದಿಂದ ಕಿತ್ತೂಗೆಯುವ ಕಾಲ ಬಂದಿದೆ”:ಜೆ.ಪಿ.ನಡ್ಡಾ


Team Udayavani, Oct 29, 2023, 11:13 PM IST

nadda

ಹೊಸದಿಲ್ಲಿ: “ಛತ್ತೀಸ್‌ಗಢದಲ್ಲಿನ ಕಾಂಗ್ರೆಸ್‌ ಸರಕಾರವು ಬಡಜನರ ಕಲ್ಯಾಣವನ್ನು ನಿರ್ಲಕ್ಷಿಸಿದೆ. ಕಳೆದ 5 ವರ್ಷಗಳಿಂದಲೂ ರಾಜ್ಯಕ್ಕೆ “ಗ್ರಹಣ’ ಬಡಿದಿತ್ತು. ಈಗ ಆ ಪಕ್ಷವನ್ನು ಕಿತ್ತೂಗೆ ಯುವ ಸಮಯ ಬಂದಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ರವಿವಾರ ಛತ್ತೀಸ್‌ಗಢದ ರಾಯ್ಪುರದಲ್ಲಿ “ಬೂತ್‌ ವಿಜಯ್‌ ಸಂಕಲ್ಪ ಅಭಿಯಾನ್‌’ ಉದ್ದೇಶಿಸಿ ಮಾತ ನಾಡಿದ ಅವರು, ನಾವು ಭೂಪೇಶ್‌ ಬಘೇಲ್‌ ಅವರ ಭ್ರಷ್ಟ, ಅಸಮರ್ಥ, ನಂಬಿಕೆಗೆ ಅರ್ಹವಲ್ಲ, ಊಹಿ ಸಿಕೊಳ್ಳಲೂ ಆಗದ ಸರಕಾರ ವನ್ನು ನೋಡುತ್ತಿದ್ದೇವೆ. ನಂಬಿಕೆಗೆ ಅರ್ಹವಲ್ಲ ಎಂದು ನಾನೇಕೆ ಹೇಳಿದೆ ಎಂದರೆ, ಇಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿಯೇ ಹಲವು ವರ್ಷಗಳ ಕಾಲ ಜೈಲಲ್ಲಿದ್ದರು. ಇಂಥದ್ದನ್ನು ನೀವೆಲ್ಲಾದರೂ ಕಂಡಿದ್ದೀರಾ? ಈಗ ಇಂಥ ಭ್ರಷ್ಟ ಸರಕಾರ ಅಧಿಕಾ ರದಲ್ಲಿರಬೇಕೇ, ಬೇಡವೇ ಎಂಬುದನ್ನು ಜನರೇ ನಿರ್ಧ ರಿಸಬೇಕು ಎಂದಿದ್ದಾರೆ.
ಪ್ರತಿ ಯೊಂದು ಬೂತ್‌ನಲ್ಲೂ ಮನೆ ಮನೆಗೆ ಹೋಗಿ, ಮುಂದಿನ ತಿಂಗಳ ಚುನಾವ ಣೆಯಲ್ಲಿ ಮತದಾನ ಮಾಡುವಂತೆ ಜನರನ್ನು ಉತ್ತೇಜಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಕರ್ನಾಟಕಕ್ಕೆ ಬರಲೇಬೇಕೆಂದಿಲ್ಲ: ಕೆಟಿಆರ್‌

“ಕಾಂಗ್ರೆಸ್‌ ಸರಕಾರದ ವೈಫ‌ಲ್ಯಗಳನ್ನು ನೋಡಲು ಕರ್ನಾಟಕಕ್ಕೆ ಹೋಗಲೇಬೇ ಕೆಂದೇನೂ ಇಲ್ಲ’. ಹೀಗೆಂದು ಹೇಳಿದ್ದು ತೆಲಂಗಾಣದ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌. ತೆಲಂಗಾಣದಲ್ಲಿ ಶನಿವಾರ ಚುನಾವಣ ಪ್ರಚಾರದಲ್ಲಿ ಮಾತ ನಾಡಿದ್ದ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, “ಕಾಂಗ್ರೆಸ್‌ ಚುನಾವಣೆಗೂ ಮುನ್ನ ಘೋಷಿಸಿದ್ದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆಯೇ, ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕೆಂದರೆ ಕರ್ನಾಟಕಕ್ಕೆ ಒಮ್ಮೆ ಭೇಟಿ ನೀಡಿ’ ಎಂದು ಕೆಟಿಆರ್‌ಗೆ ಸವಾಲು ಹಾಕಿದ್ದರು. ಅದಕ್ಕೆ ರವಿವಾರ ಪ್ರತಿಕ್ರಿಯಿಸಿರುವ ಕೆ.ಟಿ.ರಾಮರಾವ್‌, “ನಿಮ್ಮ ವೈಫ‌ಲ್ಯಗಳನ್ನು ನೋಡಲು ಕರ್ನಾಟಕಕ್ಕೆ ಬರಲೇಬೇಕೆಂದಿಲ್ಲ. ಏಕೆಂದರೆ ನಿಮ್ಮಿಂದ ವಂಚನೆಗೆ ಒಳಗಾದ ರೈತರೇ ಇಲ್ಲಿಗೆ ಬಂದು ಅವರಿಗಾದ ಅನ್ಯಾಯವನ್ನು ಬಿಡಿಸಿ ಹೇಳುತ್ತಿದ್ದಾರೆ. ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತಂದರೆ ಮುಂದಾಗುವ ಅಪಾಯಗಳ ಬಗ್ಗೆ ಅವರೇ ತೆಲಂಗಾಣದ ರೈತರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ತೆಲಂಗಾಣದ ಜನರು ಯಾವತ್ತೂ ಕಾಂಗ್ರೆಸನ್ನು ನಂಬಲ್ಲ’ ಎಂದು ಎಕ್ಸ್‌(ಟ್ವಿಟರ್‌)ನಲ್ಲಿ ಬರೆದುಕೊಂಡಿದ್ದಾರೆ.

ಚುನಾವಣೆಯಿಂದ ದೂರ ಸರಿದ ತೆಲುಗು ದೇಶಂ ಪಾರ್ಟಿ!
ತೆಲಂಗಾಣದಲ್ಲಿ ಈ ಬಾರಿ ಚುನಾವಣ ಕಣದಿಂದ ಹೊರಗುಳಿಯಲು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ(ತೆಲುಗು ದೇಶಂ ಪಾರ್ಟಿ) ನಿರ್ಧರಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ನಾಯ್ಡು ಅವರು ಜೈಲು ಸೇರಿರುವ ಕಾರಣ ಕಣದಿಂದ ದೂರ ಸರಿಯುತ್ತಿರುವುದಾಗಿ ಪಕ್ಷ ಹೇಳಿದೆ. ಇತ್ತೀಚೆಗೆ ಜೈಲಿನಲ್ಲಿ ನಾಯ್ಡು ಅವರನ್ನು ಭೇಟಿಯಾದ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಕಸಾನಿ ಜ್ಞಾನೇಶ್ವರ್‌ ಈ ವಿಚಾರ ತಿಳಿಸಿದ್ದಾರೆ. 2014ರ ಅಸೆಂಬ್ಲಿ ಚುನಾವಣೆಯಲ್ಲಿ ಟಿಡಿಪಿ 15 ಸ್ಥಾನಗಳಲ್ಲಿ ಜಯ ಗಳಿಸಿತ್ತು. 2018ರಲ್ಲಿ 2 ಸೀಟುಗಳನ್ನು ಗಳಿಸಿತ್ತು. ಅನಂತರದಲ್ಲಿ ಆ 2 ಶಾಸಕರೂ ಆಡಳಿತಾರೂಢ ಪಕ್ಷಕ್ಕೆ ನಿಷ್ಠೆ ಬದಲಿಸಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.