ಕಾಂಗ್ರೆಸ್‌ ಪ್ರಮುಖ ಟ್ವಿಟರ್‌ ಖಾತೆಯೇ ಬಂದ್‌

ಐಎನ್‌ಸಿ ಇಂಡಿಯಾ ಖಾತೆಯೂ ಸ್ಥಗಿತ; 21 ನಾಯಕರು, 7 ಪಕ್ಷದ ಖಾತೆಗಳು ಸ್ತಬ್ಧ

Team Udayavani, Aug 12, 2021, 10:45 PM IST

ಕಾಂಗ್ರೆಸ್‌ ಪ್ರಮುಖ ಟ್ವಿಟರ್‌ ಖಾತೆಯೇ ಬಂದ್‌

ನವದೆಹಲಿ: ಟ್ವಿಟರ್‌ ಮತ್ತು ಕಾಂಗ್ರೆಸ್‌ ನಡುವಿನ “ಖಾತೆ’ ಕ್ಯಾತೆ ಜೋರಾಗಿದೆ. ದೆಹಲಿಯ ದಲಿತ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಸಂತ್ರ ಸ್ತೆಯ ಹೆತ್ತವರ ಫೋಟೋ ಹಾಕಿದ್ದ ಆರೋಪದ ಮೇಲೆ ರಾಹುಲ್‌ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಸ್ತಬ್ಧ ಮಾಡಿದ್ದ ಟ್ವಿಟರ್‌ ಇಂಡಿಯಾ, ಈಗ 21 ನಾಯಕರು ಮತ್ತು ಪಕ್ಷದ ಪ್ರಮುಖ ಖಾತೆ ಹಾಗೂ ಕೆಲವು ರಾಜ್ಯಗಳ ಅಕೌಂಟ್‌ಗಳನ್ನೂ ಬ್ಲ್ಯಾಕ್‌ ಮಾಡಿದೆ.

ನಿಯಮಾವಳಿಗಳ ಉಲ್ಲಂಘನೆ ಆರೋಪದ ಮೇಲೆ ಈ ಎಲ್ಲಾ ಖಾತೆಗಳನ್ನು ಬಂದ್‌ ಮಾಡಲಾಗಿದೆ ಎಂದು ಟ್ವಿಟರ್‌ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್‌, ಕೇಂದ್ರ ಸರ್ಕಾರದ ಒತ್ತಡದಿಂದಾಗಿ ಟ್ವಿಟರ್‌ ಈ ರೀತಿ ವರ್ತಿಸುತ್ತಿದೆ ಎಂದು ಆರೋಪಿಸಿದೆ.

ಮೋದಿ ಸರ್ಕಾರದ ಮಾತಿನಂತೆ ವರ್ತಿಸುತ್ತಿರುವ ಟ್ವಿಟರ್‌ ಸಂಸ್ಥೆ, ನಮ್ಮ ಧ್ವನಿಯನ್ನು ಅಡಗಿಸುತ್ತಿದೆ ಎಂದು ಪಕ್ಷದ ವಕ್ತಾರ ರಣದೀಪ್‌ ಸುರ್ಜೆವಾಲಾ ಆರೋಪಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕ, ತ.ನಾಡು ತಮ್ಮ ಪಾಲನ್ನು ಉಪಯೋಗಿಸಲು ಯಾವುದೇ ಅಡ್ಡಿ ಇಲ್ಲ: ಸಿ.ಟಿ.ರವಿ

ಯಾವ ಖಾತೆಗಳು ಬಂದ್‌?
ಐಎನ್‌ಸಿ ಇಂಡಿಯಾ(ಕಾಂಗ್ರೆಸ್‌ನ ಪ್ರಮುಖ ಅಕೌಂಟ್‌), ಮುಂಬೈ ಪ್ರಾದೇಶಿಕ ಕಾಂಗ್ರೆಸ್‌ ಸಮಿತಿ, ಮಹಾರಾಷ್ಟ್ರ, ಗುಜರಾತ್‌, ರಾಜಸ್ಥಾನ, ದಾಮನ್‌ ಆ್ಯಂಡ್‌ ದಿಯು, ತಮಿಳುನಾಡು ಕಾಂಗ್ರೆಸ್‌ ಸಮಿತಿಗಳ ಖಾತೆ ಬಂದ್‌ ಆಗಿವೆ. ಇನ್ನು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ರಣದೀಪ್‌ ಸುರ್ಜೆವಾಲಾ, ಅಜಯ್‌ ಮಾಕೇನ್‌, ಕೆ.ಸಿ. ವೇಣುಗೋಪಾಲ್‌, ಮಣಿಕ್ಕನ್‌ ಟ್ಯಾಗೋರ್‌, ಸುಶ್ಮಿತಾ ದೇವ್‌, ಹರೀಶ್‌ ಸಿಂಗ್‌ ರಾವತ್‌, ಚೆಲ್ಲ ಕುಮಾರ್‌ ಸೇರಿದಂತೆ 21 ನಾಯಕರ ಖಾತೆಗಳೂ ಬ್ಲ್ಯಾಕ್‌ ಆಗಿವೆ. ಹಾಗೆಯೇ ಮಹಾರಾಷ್ಟ್ರ ಕಾಂಗ್ರೆಸ್‌ನ 500 ನಾಯಕರ ಖಾತೆಗಳನ್ನು ಬಂದ್‌ ಮಾಡಲಾಗಿದೆ.

ಎಲ್ಲರ ಪ್ರೊಫೈಲ್‌ನಲ್ಲೂ ರಾಹುಲ್‌!
ರಾಹುಲ್‌ ಖಾತೆ ಬ್ಲಾಕ್‌ ಮಾಡಿರುವುದನ್ನು ಖಂಡಿಸಿ, ಪ್ರತಿಭಟನಾರ್ಥವಾಗಿ ದೇಶಾದ್ಯಂತ ಕಾಂಗ್ರೆಸ್‌ನ ಬಹುತೇಕ ಕಾರ್ಯಕರ್ತರು ಹಾಗೂ ನಾಯಕರು ತಮ್ಮ ತಮ್ಮ ಖಾತೆಗಳ ಪ್ರೊಫೈಲ್‌ನಲ್ಲಿ ರಾಹುಲ್‌ ಫೋಟೋಗಳನ್ನು ಹಾಕಿ ಕೊಂಡಿದ್ದಾರೆ. ಗುರುವಾರ ಪ್ರಿಯಾಂಕಾ ವಾದ್ರಾ ಅವರ ಖಾತೆಯಲ್ಲೂ ರಾಹುಲ್‌ ಅವರ ಪ್ರೊಫೈಲ್‌ ಫೋಟೋ ಪ್ರತ್ಯಕ್ಷವಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.