ನಾಯಕರ ವಿರುದ್ಧ ಕೇಸ್: ಕಾನೂನು ಹೋರಾಟಕ್ಕೆ ಸಿದ್ಧವಾದ ಕೆಪಿಸಿಸಿ
Team Udayavani, Jan 17, 2022, 2:34 PM IST
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಉದ್ಘಾಟನೆ ಹಾಗೂ ನಡಿಗೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಬಂಧ ಕಾನೂನು ಹೋರಾಟ ನಡೆಸುವುದಕ್ಕೆ ಐವರು ಕಾನೂನು ತಜ್ಞರ ಸಮಿತಿಯನ್ನು ಕೆಪಿಸಿಸಿ ರಚನೆ ಮಾಡಿದೆ.
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಹೈಕೋರ್ಟ್ ವಕೀಲರಾದ ಎಚ್.ಸಿ.ಚಂದ್ರಮೌಳಿ, ಸಿ.ಎಂ.ಧನಂಜಯ, ಎ.ಜಿ.ಶಿವಣ್ಣ, ಕೆ.ದಿವಾಕರ್ ಹಾಗೂ ಮುನಿಯಪ್ಪ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಹಾಗೂ ಕೆಪಿಸಿಸಿ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ಮಾಹಿತಿ ಸಂಗ್ರಹಿಸಿ, ಯಾವ ಯಾವ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ, ಅವುಗಳ ಸ್ವರೂಪ ಎಂಥದ್ದು, ನ್ಯಾಯಾಲಯದಲ್ಲಿ ಹೇಗೆ ಹೋರಾಟ ಮಾಡಬೇಕೆಂಬುದನ್ನು ಈ ಸಮಿತಿ ನಿರ್ಧರಿಸಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದ್ದಂತೆ 50 ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ