ಜೊಲ್ಲೆಗೆ ಸ್ಥಾನ ಬಿಜೆಪಿ ನೈತಿಕತೆಗೆ ಸಾಕ್ಷಿ : ಸತೀಶ ಜಾರಕಿಹೊಳಿ
Team Udayavani, Aug 16, 2021, 1:11 PM IST
ಅಥಣಿ: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಶಶಿಕಲಾ ಜೊಲ್ಲೆಯವರನ್ನು ಕೈ ಬಿಡದೇ ಬೊಮ್ಮಾಯಿ ತಮ್ಮ ಸಂಪುಟದಲ್ಲಿ ಸೇರ್ಪಡೆಗೊಳಿಸಿಕೊಂಡಿರುವುದು ಬಿಜೆಪಿಗೆ ನೈತಿಕತೆ ತೋರಿಸುತ್ತದೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಶಿಕಲಾ ಜೊಲ್ಲೆಯವರು ತಮ್ಮ ಮೊದಲಿನ ಖಾತೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದರು. ಆದರೂ ಕೂಡ ಅವರನ್ನು ಮಂತ್ರಿ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ. ಇಷ್ಟೆಲ್ಲ ಹುಳುಕು ಇಟ್ಟುಕೊಂಡಿರುವ ಬಿಜೆಪಿ ವಿರೋಧ ಪಕ್ಷವನ್ನು ಟೀಕಿಸುತ್ತಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಬಗೆಗೆ ಸಿ.ಟಿ.ರವಿ ಮಾಧ್ಯಮಗಳ ಮುಂದೆ ಇಲ್ಲಸಲ್ಲದ ಹೇಳಿಕೆ ಕೊಡುತ್ತಿರುವುದು ಅವರ ನೈತಿಕತೆ ತೋರಿಸುತ್ತದೆ ಎಂದೂ ಆರೋಪಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ನನಗೆ ಬಿಜೆಪಿ ಹಾಗೂ ಸಂಘ ಪರಿವಾರ ಪ್ರೀತಿ, ವಿಶ್ವಾಸ ನೀಡಿದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸತೀಶ ಜಾರಕಿಹೊಳಿ, ಅವರಿಗೆ ಎಷ್ಟು ಪ್ರೀತಿ ಸಿಕ್ಕಿದೆ, ಈಗಿನ ಪರಿಸ್ಥಿತಿ ಏನು ಎನ್ನುವುದು ನಮಗೆ ಗೊತ್ತಿದೆ. ಸಚಿವನಾಗಲು ಅದೆಷ್ಟೋ ಬಾರಿ ದೆಹಲಿಗೆ ಅಡ್ಡಾಡಿದ್ದಾರೆ ಎನ್ನುವುದು ಕೂಡ ನಮಗೆ ಗೊತ್ತಿರುವ ವಿಷಯವಾಗಿದೆ. ಇಷ್ಟಿದ್ದರೂ ಕೂಡ ನನಗೆ ಇಲ್ಲಿ ಪ್ರೀತಿ, ವಿಶ್ವಾಸ ಸಿಕ್ಕಿದೆ ಎನ್ನುವ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಇನ್ನೂ ದೂರ ಇದೆ. ಅಲ್ಲಿಯವರೆಗೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಚುನಾವಣೆ ಸಂದರ್ಭದಲ್ಲಿ ಘೋಷಣೆಯಾಗುತ್ತದೆ. ಅಥಣಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದರು.
ಶಶಿಕಲಾ ಜೊಲ್ಲೆ ಅವರಿಗೆ ನೈತಿಕತೆ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರಕಾರದಿಂದ ಹೊರ ಬರಬೇಕು ಎಂದು ಸತೀಶ ಆಗ್ರಹಿಸಿದರು. ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ರಮೇಶ ಸಿಂದಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ