Congress: ಆರೋಗ್ಯ ಸಚಿವರ ಪಿಎ ವಿರುದ್ಧ ಕಾಂಗ್ರೆಸ್ ಶಾಸಕ ಅಸಮಾಧಾನ
Team Udayavani, Oct 7, 2023, 11:24 PM IST
ಬೆಂಗಳೂರು: ಸಚಿವರ ಕಾರ್ಯವೈಖರಿ ವಿರುದ್ಧ ಸಿಎಂಗೆ ಕೆಲವು ಶಾಸಕರು ಪತ್ರ ಬರೆದಿದ್ದ ಬೆನ್ನಲ್ಲೇ ಸಚಿವರ ಆಪ್ತ ಕಾರ್ಯದರ್ಶಿ ವಿರುದ್ಧ ಆಡಳಿತ ಪಕ್ಷದ ಮತ್ತೋರ್ವ ಶಾಸಕರು ಪತ್ರ ಸಮರ ಸಾರಿದ್ದು, ಸರಕಾರವನ್ನು ಮುಜುಗರಕ್ಕೀಡು ಮಾಡಿದೆ.
ಬೀಳಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಟಿ. ಪಾಟೀಲ್ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ವಿರುದ್ಧ ಕ್ರಮ ಕೈಗೊಳ್ಳಲು ಹಕ್ಕು ಬಾಧ್ಯತಾ ಸಮಿತಿಗೆ ಶಿಫಾರಸು ಮಾಡುವಂತೆ ಕೋರಿದ್ದಾರೆ.
ಪತ್ರದಲ್ಲಿ ಏನಿದೆ?
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ಅವರನ್ನು ವಿಕಾಸಸೌಧದಲ್ಲಿ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಹೇಳಿಕೊಂಡಿದ್ದೆ. ಆದರೆ, ಅದಕ್ಕವರು ಸರಿಯಾಗಿ ಸ್ಪಂದಿಸಿರಲಿಲ್ಲ. ಜನಪ್ರತಿನಿಧಿಗಳ ಜತೆ ಅವರ ಸ್ಪಂದನೆ ಸರಿಯಾಗಿ ಇರುವುದಿಲ್ಲ. ಇಲಾಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಕೇಳಿದರೂ ಸರಿಯಾಗಿ ಮಾಹಿತಿ ಕೊಟ್ಟಿರುವುದಿಲ್ಲ. ಇವರ ವರ್ತನೆ ಧಿಮಾಕು ಅತಿ ಒರಟುತನದಿಂದ ಕೂಡಿರುತ್ತದೆ. ಈ ವಿಷಯದ ಬಗ್ಗೆ ಅವರಿಂದ ವಿಷಾದದ ವಿಚಾರಗಳಿಲ್ಲ. ಆದ್ದರಿಂದ ನನಗೆ ಬಹಳ ನೋವಾಗಿರುತ್ತದೆ. ಅದಕ್ಕಿಂತ ಹೆಚ್ಚಾಗಿ ನನ್ನ ಮತಕ್ಷೇತ್ರದ ಕೆಲಸಕ್ಕೆ ತೊಂದರೆ ಮಾಡಿರುವುದರಿಂದ ಅವರ ಮೇಲೆ ಹಕ್ಕುಬಾಧ್ಯತಾ ಸಮಿತಿಗೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.