Jai Hind TV: ಕಾಂಗ್ರೆಸ್ ಪಕ್ಷ ಆಯ್ತು, ಈಗ ಚಾನೆಲ್ ಖಾತೆಯೂ ನಿಷ್ಕ್ರಿಯ!
ಕೇರಳದ ಜೈಹಿಂದ್ ಟಿವಿಯ ಬ್ಯಾಂಕ್ ಖಾತೆ ಸ್ಥಗಿತ
Team Udayavani, Feb 17, 2024, 9:44 PM IST
ತಿರುವನಂತಪುರ: ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಜೈಹಿಂದ್ ಟಿವಿಯ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ನಿಷ್ಕ್ರಿಯಗೊಳಿಸಿದೆ ಎಂದು ಚಾನೆಲ್ನ ವ್ಯವಸ್ಥಾಪನಾ ಮಂಡಳಿ ಶನಿವಾರ ತಿಳಿಸಿದೆ.
ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ಶುಕ್ರವಾರ ಆದಾಯ ತೆರಿಗೆ ಇಲಾಖೆಯು ಕೆಲ ಹೊತ್ತು ನಿಷ್ಕ್ರಿಯಗೊಳಿಸಿ, ಬಳಿಕ ಪುನಃ ತೆರವುಗೊಳಿಸಿ, ಖಾತೆಗಳನ್ನು ಸಕ್ರಿಯಗೊಳಿಸಿದ ಪ್ರಕರಣದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೈಹಿಂದ್ ಟಿವಿ ಚಾನೆಲ್ನಲ್ಲಿ ಹೂಡಿಕೆ ಮಾಡಿರುವ ಕುರಿತು ವಿವರ ನೀಡುವಂತೆ ಸೂಚಿಸಿ ಇತ್ತೀಚಿಗೆ ಜೈಹಿಂದ್ ಟಿವಿ ಮಾಲೀಕತ್ವ ಹೊಂದಿರುವ ಭಾರತ್ ಬ್ರಾಡ್ಕಾಸ್ಟಿಂಗ್ ಕಂಪನಿಗೆ ಸಿಬಿಐ ನೋಟಿಸ್ ಹೊರಡಿಸಿತ್ತು. ಇದರ ಮುಂದುವರಿದ ಭಾಗವಾಗಿ ಕೇಂದ್ರ ಜಿಎಸ್ಟಿ ಮತ್ತು ಆದಾಯ ತೆರಿಗೆ ಇಲಾಖೆಯು ಎರಡು ಪ್ರಮುಖ ಖಾಸಗಿ ಬ್ಯಾಂಕ್ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಸರ್ಕಾರಕ್ಕೆ ಬರಬೇಕಿರುವ ಹಣವನ್ನು ಸುದ್ದಿ ವಾಹಿನಿಯಿಂದ ವಸೂಲಿ ಮಾಡುವಂತೆ ಸೂಚಿಸಿದೆ. ಇದರ ಭಾಗವಾಗಿ ಬ್ಯಾಂಕ್ ಖಾತೆ ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?