ಸಿಎಂ ಬೊಮ್ಮಾಯಿ ನಿವಾಸದ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಚಿಂತನೆ
ನಿಷೇಧಾಜ್ಞೆ ಉಲ್ಲಂಘನೆ ಮಾಡಿದ್ದಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Team Udayavani, Jan 18, 2022, 2:36 PM IST
ಬೆಂಗಳೂರು:ಮೇಕೆದಾಟು ಪಾದಯಾತ್ರೆ ನಿಂತರೂ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ರಾಜಕೀಯ ಮೇಲಾಟ ನಿಲ್ಲುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಪಾದಯಾತ್ರೆ ಸಂದರ್ಭದಲ್ಲಿ ಗೃಹ ಇಲಾಖೆ ಏಕಪಕ್ಷೀಯವಾಗಿ ನಡೆದುಕೊಂಡಿದೆ ಎಂದು ಆರೋಪಿಸಿ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಇದನ್ನೂ ಓದಿ:ಆಂಧ್ರಪ್ರದೇಶ-ಸಂಕ್ರಾಂತಿ ಆಚರಣೆ: ಕುಡಿದ ಅಮಲಿನಲ್ಲಿ ಮೇಕೆ ಬದಲು ಮನುಷ್ಯನ ತಲೆಯನ್ನೇ ಕಡಿದ!
ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಹಾಗೂ ನಿಷೇಧಾಜ್ಞೆ ಉಲ್ಲಂಘನೆ ಮಾಡಿದ್ದಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಕೋವಿಡ್ ಸಂದರ್ಭದಲ್ಲೇ ಬಿಜೆಪಿ ಹಲವಾರು ಕಾರ್ಯಕ್ರಮ ಹಾಗೂ ಸಮಾವೇಶ ನಡೆಸಿದೆ. ಪಕ್ಷದ ಶಾಸಕರೇ ನಿಯಮ ಉಲ್ಲಂಘಿಸಿದ್ದಾರೆ. ಅವರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂಬುದು ಕಾಂಗ್ರೆಸ್ ವಾದ.
ಪ್ರತಿಭಟನೆ ನಡೆಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜತೆ ಚರ್ಚೆ ಬಳಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಸಿದ್ದರಾಮಯ್ಯ ಎರಡು ದಿನಗಳಿಂದ ಮೈಸೂರು ಪ್ರವಾಸದಲ್ಲಿದ್ದಾರೆ. ಕಾನೂನು ಹೋರಾಟವನ್ನು ನಿರ್ಧರಿಸುವುದಕ್ಕೆ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ನೇತೃತ್ವದಲ್ಲಿ ಐವರು ಹಿರಿಯ ವಕೀಲರ ಸಮಿತಿಯನ್ನೂ ಕಾಂಗ್ರೆಸ್ ರಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!